ಜಿಲ್ಲೆಗಳು

ದಸರಾ ಆನೆ ಗೋಪಾಲ ಸ್ವಾಮಿ ಇನ್ನಿಲ್ಲ

ಕಾಡಾನೆ ಜತೆಗಿನ ಕಾದಾಟದಲ್ಲಿ ದಾರುಣ ಸಾವು ಕಂಡ ಸಾಕಾನೆ

ಮೈಸೂರು: ಎರಡು ತಿಂಗಳ ಹಿಂದಷ್ಟೇ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ದಸರಾ ಆನೆ ಗೋಪಾಲಸ್ವಾಮಿ ಕಾಡಾನೆಯೊಂದಿಗೆ ಕಾದಾಟಕ್ಕಿಳಿದು ದಾರುಣ ಮೃತ್ಯು ಕಂಡಿದೆ.

ಹುಣಸೂರು ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲ ಸ್ವಾಮಿಯನ್ನು ಕಾಡಿಗೆ ಬಿಡಲಾಗಿತ್ತು. ತಾಲ್ಲೂಕಿನ ಹನಗೋಡು ಸಮೀಪದ ಕೊಳವಿಗೆ ಎಂಬಲ್ಲಿ ಇತ್ತೀಚೆಗಷ್ಟೇ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ ಎಂಬ ಆನೆಯ ಜತೆ ಮಂಗಳವಾರ ಕಾದಾಟಕ್ಕಿಳಿದು ಪ್ರಾಣ ಕಳೆದುಕೊಂಡಿದೆ.
ಕಾದಾಟದ ವೇಳೆ ಗೋಪಾಲಸ್ವಾಮಿ ಆನೆ ಮಸ್ತಿಯಲ್ಲಿತ್ತು ಎನ್ನಲಾಗಿದೆ. ಗಾಯಗೊಂಡಿದ್ದ ಆನೆಯನ್ನು ಉಳಿಸಲು ವೈದ್ಯರು ಸಾಕಷ್ಟು ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ.

41 ವರ್ಷಗಳ ಗೋಪಾಲ ಸ್ವಾಮಿ ಆನೆ 2012 ರಿಂದ ಮೈಸೂರು ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಆನೆಯನ್ನು 2009 ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಾರೆಕೊಪ್ಪಿ ಅರಣ್ಯದಲ್ಲಿ ಸೆರೆಹಿಡಿಯಲಾಗಿತ್ತು.
ಕಾಡಾನೆ ಮತ್ತು ಹುಲಿಯನ್ನು ಸೆರೆಹಿಡಿಯುವ ನೂರಾರು ಕಾರ್ಯಾಚರಣೆಗಳಲ್ಲಿ ಗೋಪಾಲಸ್ವಾಮಿ ಭಾಗಿಯಾಗಿತ್ತು. ಮಂಜು ಜೆ ಡಿ ಈ ಆನೆಯ ಮಾವುತನಾಗಿ ಕೆಲಸ ಮಾಡುತ್ತಿದ್ದರು. ಸೃಜನ್ ತರಬೇತುದಾರರಾಗಿದ್ದರು. 2.85 ಮೀ ಎತ್ತರದ ಈ ಆನೆ 3.42 ಮೀ ಉದ್ದವಿತ್ತು. ಈ ಬಾರಿಯ ದಸರಾದಲ್ಲಿ 5,140 ತೂಕ ದಾಖಲಿಸಿತ್ತು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago