ಜಿಲ್ಲೆಗಳು

ದಸರಾ ಆನೆ ಗೋಪಾಲ ಸ್ವಾಮಿ ಇನ್ನಿಲ್ಲ

ಕಾಡಾನೆ ಜತೆಗಿನ ಕಾದಾಟದಲ್ಲಿ ದಾರುಣ ಸಾವು ಕಂಡ ಸಾಕಾನೆ

ಮೈಸೂರು: ಎರಡು ತಿಂಗಳ ಹಿಂದಷ್ಟೇ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ದಸರಾ ಆನೆ ಗೋಪಾಲಸ್ವಾಮಿ ಕಾಡಾನೆಯೊಂದಿಗೆ ಕಾದಾಟಕ್ಕಿಳಿದು ದಾರುಣ ಮೃತ್ಯು ಕಂಡಿದೆ.

ಹುಣಸೂರು ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲ ಸ್ವಾಮಿಯನ್ನು ಕಾಡಿಗೆ ಬಿಡಲಾಗಿತ್ತು. ತಾಲ್ಲೂಕಿನ ಹನಗೋಡು ಸಮೀಪದ ಕೊಳವಿಗೆ ಎಂಬಲ್ಲಿ ಇತ್ತೀಚೆಗಷ್ಟೇ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ ಎಂಬ ಆನೆಯ ಜತೆ ಮಂಗಳವಾರ ಕಾದಾಟಕ್ಕಿಳಿದು ಪ್ರಾಣ ಕಳೆದುಕೊಂಡಿದೆ.
ಕಾದಾಟದ ವೇಳೆ ಗೋಪಾಲಸ್ವಾಮಿ ಆನೆ ಮಸ್ತಿಯಲ್ಲಿತ್ತು ಎನ್ನಲಾಗಿದೆ. ಗಾಯಗೊಂಡಿದ್ದ ಆನೆಯನ್ನು ಉಳಿಸಲು ವೈದ್ಯರು ಸಾಕಷ್ಟು ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ.

41 ವರ್ಷಗಳ ಗೋಪಾಲ ಸ್ವಾಮಿ ಆನೆ 2012 ರಿಂದ ಮೈಸೂರು ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಆನೆಯನ್ನು 2009 ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಾರೆಕೊಪ್ಪಿ ಅರಣ್ಯದಲ್ಲಿ ಸೆರೆಹಿಡಿಯಲಾಗಿತ್ತು.
ಕಾಡಾನೆ ಮತ್ತು ಹುಲಿಯನ್ನು ಸೆರೆಹಿಡಿಯುವ ನೂರಾರು ಕಾರ್ಯಾಚರಣೆಗಳಲ್ಲಿ ಗೋಪಾಲಸ್ವಾಮಿ ಭಾಗಿಯಾಗಿತ್ತು. ಮಂಜು ಜೆ ಡಿ ಈ ಆನೆಯ ಮಾವುತನಾಗಿ ಕೆಲಸ ಮಾಡುತ್ತಿದ್ದರು. ಸೃಜನ್ ತರಬೇತುದಾರರಾಗಿದ್ದರು. 2.85 ಮೀ ಎತ್ತರದ ಈ ಆನೆ 3.42 ಮೀ ಉದ್ದವಿತ್ತು. ಈ ಬಾರಿಯ ದಸರಾದಲ್ಲಿ 5,140 ತೂಕ ದಾಖಲಿಸಿತ್ತು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

16 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

20 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

20 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

20 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

20 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

21 hours ago