ಜಿಲ್ಲೆಗಳು

ಮೈಸೂರು ದಸರೆಗೆ 26.54 ಕೋಟಿ ರೂ. ಖರ್ಚು

ಒಟ್ಟು 31. 8 ಕೋಟಿ ರೂ. ಸಂಗ್ರಹ,

2.34 ಕೋಟಿ ಉಳಿಕೆ: ಉಸ್ತುವಾರಿ ಸಚಿವರ ಮಾಹಿತಿ

ಮೈಸೂರು: ಎರಡು ವರ್ಷಗಳ ಬಳಿಕ ನಡೆದ ಸಾಂಸ್ಕೃತಿಕ ನಗರದಲ್ಲಿ ನಡೆದ ಅದ್ದೂರಿ ದಸರಾ ಮಹೋತ್ಸವಕ್ಕೆ 26.54 ಕೋಟಿ ರೂ. ವ್ಯಯಿಸಲಾಗಿದೆ.

ಖರ್ಚು ವೆಚ್ಚದ ವಿವರಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳ ದಸರಾ ಉತ್ಸವ ಆಚರಣೆಗೆ ಒಟ್ಟು 31ಕೋಟಿ 8 ಲಕ್ಷ ಹಣ ಸಂಗ್ರಹವಾಗಿತ್ತು. ಇದರಲ್ಲಿ 28 ಕೋಟಿ 74 ಲಕ್ಷ ರೂಪಾಯಿ ವೆಚ್ಚವಾಗಿದೆ. ಒಟ್ಟು 2 ಕೋಟಿ 34 ಲಕ್ಷ ಉಳಿತಾಯವಾಗಿದೆ ಎಂದು ಸಚಿವರು ತಿಳಿಸಿದರು.

ಮಂಡ್ಯ, ಚಾಮರಾಜ ನಗರ, ಹಾಸನ ಜಿಲ್ಲೆಗೆ ಬಿಡುಗಡೆಯಾದ ಅನುದಾನ ಕೂಡ ಇದರಲ್ಲಿ ಸೇರಿದೆ.
ಮೈಸೂರು ದಸರಾ ಮಹೋತ್ಸವಕ್ಕೆ ಒಟ್ಟು ಖರ್ಚು 26 ಕೋಟಿ 54 ಲಕ್ಷದ 49 ಸಾವಿರದ 58 ರೂ, ಮಂಡ್ಯ, ಚಾಮರಾಜನಗರ ಮತ್ತು ಹಾಸನ ದಸರಾ ಆಚರಣೆಗೆ ಒಟ್ಟು 2 ಕೋಟಿ 20 ಲಕ್ಷ ಖರ್ಚಾಗಿದೆ ಎಂದವರು ತಿಳಿಸಿದರು.

ಮೈಸೂರಿನ ರಾಜಮನೆತನಕ್ಕೆ 47 ಲಕ್ಷ ರು. ಗೌರವಧನ ನೀಡಲಾಗಿದೆ. ಯುವದಸರಾ ಹಾಗೂ ಯುವ ಸಂಭ್ರಮಕ್ಕೆ 6 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಸಚಿವರು ವಿವರ ನೀಡಿದರು.
ಮೂಡಾದಿಂದ 10 ಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಕೋಟಿ, ಅರಮನೆ ಆಡಳಿತ ಮಂಡಳಿಯಿಂದ 5 ಕೋಟಿ, ಪ್ರಾಯೋಜಕತ್ವದಿಂದ 32 ಲಕ್ಷದ 50 ಸಾವಿರ, ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಮಾರಾಟದಿಂದ 76 ಲಕ್ಷ ಸೇರಿದಂತೆ ಒಟ್ಟು 31 ಕೋಟಿ, 8 ಲಕ್ಷದ  88 ಸಾವಿರದ 819 ರೂ. ಸಂಗ್ರಹವಾಗಿದೆ.
ಮೈಸೂರಿನ ದಸರಾ ಖರ್ಚು ವೆಚ್ಚಗಳ ಬಗ್ಗೆ ಮತ್ತೊಮ್ಮೆ ಪರಿಶೀಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

andolanait

Recent Posts

ಎಲ್‌ಪಿಜಿ ಗ್ಯಾಸ್‌ ಸಮಸ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ…

7 seconds ago

ಧೋನಿ, ಕಪಿಲ್‌ ದೇವ್‌ಗೆ ಕ್ಷಮೆ ಕೇಳಿದ ಯುವರಾಜ್‌ ಸಿಂಗ್‌

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಭಾರತದ ವಿಶ್ವಕಪ್‌ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ಕಪಿಲ್‌…

26 mins ago

ರಾಜ್ಯದಲ್ಲಿ ಇಂದು ಕೂಡ ಮುಂದುವರಿಯಲಿದೆ ಮಳೆ ಆರ್ಭಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…

52 mins ago

ಕಬಿನಿ ಹಿನ್ನೀರಿನಲ್ಲಿ ಯಂಗ್ ಟೈಗರ್‌ ಕೂಲ್‌ ಕೂಲ್‌

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ರಾಜ್ಯದಲ್ಲಿ ದಿನದಿಂದ…

1 hour ago

ಕಬಿನಿ ಹಿನ್ನೀರು ಪ್ರದೇಶದಲ್ಲಿ ವನ್ಯಜೀವಿ ಬೇಟೆಯಾಡುತ್ತಿದ್ದವರ ಬಂಧನ

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಡಂಚಿನ ಪ್ರದೇಶದಲ್ಲಿ ವನ್ಯಜಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ…

2 hours ago

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

5 hours ago