ಜಿಲ್ಲೆಗಳು

ಮೈಸೂರು ದಸರೆಗೆ 26.54 ಕೋಟಿ ರೂ. ಖರ್ಚು

ಒಟ್ಟು 31. 8 ಕೋಟಿ ರೂ. ಸಂಗ್ರಹ,

2.34 ಕೋಟಿ ಉಳಿಕೆ: ಉಸ್ತುವಾರಿ ಸಚಿವರ ಮಾಹಿತಿ

ಮೈಸೂರು: ಎರಡು ವರ್ಷಗಳ ಬಳಿಕ ನಡೆದ ಸಾಂಸ್ಕೃತಿಕ ನಗರದಲ್ಲಿ ನಡೆದ ಅದ್ದೂರಿ ದಸರಾ ಮಹೋತ್ಸವಕ್ಕೆ 26.54 ಕೋಟಿ ರೂ. ವ್ಯಯಿಸಲಾಗಿದೆ.

ಖರ್ಚು ವೆಚ್ಚದ ವಿವರಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳ ದಸರಾ ಉತ್ಸವ ಆಚರಣೆಗೆ ಒಟ್ಟು 31ಕೋಟಿ 8 ಲಕ್ಷ ಹಣ ಸಂಗ್ರಹವಾಗಿತ್ತು. ಇದರಲ್ಲಿ 28 ಕೋಟಿ 74 ಲಕ್ಷ ರೂಪಾಯಿ ವೆಚ್ಚವಾಗಿದೆ. ಒಟ್ಟು 2 ಕೋಟಿ 34 ಲಕ್ಷ ಉಳಿತಾಯವಾಗಿದೆ ಎಂದು ಸಚಿವರು ತಿಳಿಸಿದರು.

ಮಂಡ್ಯ, ಚಾಮರಾಜ ನಗರ, ಹಾಸನ ಜಿಲ್ಲೆಗೆ ಬಿಡುಗಡೆಯಾದ ಅನುದಾನ ಕೂಡ ಇದರಲ್ಲಿ ಸೇರಿದೆ.
ಮೈಸೂರು ದಸರಾ ಮಹೋತ್ಸವಕ್ಕೆ ಒಟ್ಟು ಖರ್ಚು 26 ಕೋಟಿ 54 ಲಕ್ಷದ 49 ಸಾವಿರದ 58 ರೂ, ಮಂಡ್ಯ, ಚಾಮರಾಜನಗರ ಮತ್ತು ಹಾಸನ ದಸರಾ ಆಚರಣೆಗೆ ಒಟ್ಟು 2 ಕೋಟಿ 20 ಲಕ್ಷ ಖರ್ಚಾಗಿದೆ ಎಂದವರು ತಿಳಿಸಿದರು.

ಮೈಸೂರಿನ ರಾಜಮನೆತನಕ್ಕೆ 47 ಲಕ್ಷ ರು. ಗೌರವಧನ ನೀಡಲಾಗಿದೆ. ಯುವದಸರಾ ಹಾಗೂ ಯುವ ಸಂಭ್ರಮಕ್ಕೆ 6 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಸಚಿವರು ವಿವರ ನೀಡಿದರು.
ಮೂಡಾದಿಂದ 10 ಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಕೋಟಿ, ಅರಮನೆ ಆಡಳಿತ ಮಂಡಳಿಯಿಂದ 5 ಕೋಟಿ, ಪ್ರಾಯೋಜಕತ್ವದಿಂದ 32 ಲಕ್ಷದ 50 ಸಾವಿರ, ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಮಾರಾಟದಿಂದ 76 ಲಕ್ಷ ಸೇರಿದಂತೆ ಒಟ್ಟು 31 ಕೋಟಿ, 8 ಲಕ್ಷದ  88 ಸಾವಿರದ 819 ರೂ. ಸಂಗ್ರಹವಾಗಿದೆ.
ಮೈಸೂರಿನ ದಸರಾ ಖರ್ಚು ವೆಚ್ಚಗಳ ಬಗ್ಗೆ ಮತ್ತೊಮ್ಮೆ ಪರಿಶೀಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

andolanait

Recent Posts

ಸ್ಲೀವ್‌ಲೆಸ್‌, ಹರಿದ ಜೀನ್ಸ್‌ ಹಾಕುವ ಸರ್ಕಾರಿ ನೌಕರರೇ ಹುಷಾರ್.. : ರಾಜ್ಯ ಸರ್ಕಾರದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…

25 mins ago

ಮೈಸೂರು ವಿಶ್ವವಿದ್ಯಾನಿಲಯ ; ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ…

30 mins ago

ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…

35 mins ago

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

2 hours ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

2 hours ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

3 hours ago