ಜಿಲ್ಲೆಗಳು

ಮೈಸೂರು ದಸರೆಗೆ 26.54 ಕೋಟಿ ರೂ. ಖರ್ಚು

ಒಟ್ಟು 31. 8 ಕೋಟಿ ರೂ. ಸಂಗ್ರಹ,

2.34 ಕೋಟಿ ಉಳಿಕೆ: ಉಸ್ತುವಾರಿ ಸಚಿವರ ಮಾಹಿತಿ

ಮೈಸೂರು: ಎರಡು ವರ್ಷಗಳ ಬಳಿಕ ನಡೆದ ಸಾಂಸ್ಕೃತಿಕ ನಗರದಲ್ಲಿ ನಡೆದ ಅದ್ದೂರಿ ದಸರಾ ಮಹೋತ್ಸವಕ್ಕೆ 26.54 ಕೋಟಿ ರೂ. ವ್ಯಯಿಸಲಾಗಿದೆ.

ಖರ್ಚು ವೆಚ್ಚದ ವಿವರಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳ ದಸರಾ ಉತ್ಸವ ಆಚರಣೆಗೆ ಒಟ್ಟು 31ಕೋಟಿ 8 ಲಕ್ಷ ಹಣ ಸಂಗ್ರಹವಾಗಿತ್ತು. ಇದರಲ್ಲಿ 28 ಕೋಟಿ 74 ಲಕ್ಷ ರೂಪಾಯಿ ವೆಚ್ಚವಾಗಿದೆ. ಒಟ್ಟು 2 ಕೋಟಿ 34 ಲಕ್ಷ ಉಳಿತಾಯವಾಗಿದೆ ಎಂದು ಸಚಿವರು ತಿಳಿಸಿದರು.

ಮಂಡ್ಯ, ಚಾಮರಾಜ ನಗರ, ಹಾಸನ ಜಿಲ್ಲೆಗೆ ಬಿಡುಗಡೆಯಾದ ಅನುದಾನ ಕೂಡ ಇದರಲ್ಲಿ ಸೇರಿದೆ.
ಮೈಸೂರು ದಸರಾ ಮಹೋತ್ಸವಕ್ಕೆ ಒಟ್ಟು ಖರ್ಚು 26 ಕೋಟಿ 54 ಲಕ್ಷದ 49 ಸಾವಿರದ 58 ರೂ, ಮಂಡ್ಯ, ಚಾಮರಾಜನಗರ ಮತ್ತು ಹಾಸನ ದಸರಾ ಆಚರಣೆಗೆ ಒಟ್ಟು 2 ಕೋಟಿ 20 ಲಕ್ಷ ಖರ್ಚಾಗಿದೆ ಎಂದವರು ತಿಳಿಸಿದರು.

ಮೈಸೂರಿನ ರಾಜಮನೆತನಕ್ಕೆ 47 ಲಕ್ಷ ರು. ಗೌರವಧನ ನೀಡಲಾಗಿದೆ. ಯುವದಸರಾ ಹಾಗೂ ಯುವ ಸಂಭ್ರಮಕ್ಕೆ 6 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಸಚಿವರು ವಿವರ ನೀಡಿದರು.
ಮೂಡಾದಿಂದ 10 ಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಕೋಟಿ, ಅರಮನೆ ಆಡಳಿತ ಮಂಡಳಿಯಿಂದ 5 ಕೋಟಿ, ಪ್ರಾಯೋಜಕತ್ವದಿಂದ 32 ಲಕ್ಷದ 50 ಸಾವಿರ, ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಮಾರಾಟದಿಂದ 76 ಲಕ್ಷ ಸೇರಿದಂತೆ ಒಟ್ಟು 31 ಕೋಟಿ, 8 ಲಕ್ಷದ  88 ಸಾವಿರದ 819 ರೂ. ಸಂಗ್ರಹವಾಗಿದೆ.
ಮೈಸೂರಿನ ದಸರಾ ಖರ್ಚು ವೆಚ್ಚಗಳ ಬಗ್ಗೆ ಮತ್ತೊಮ್ಮೆ ಪರಿಶೀಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

andolanait

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

1 hour ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

3 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

4 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

5 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

5 hours ago