ಜಿಲ್ಲೆಗಳು

ಜಂಬೂಸವಾರಿಯಲ್ಲಿ ಕಂಗೊಳಿಸಲಿವೆ ಮೈಸೂರಿನ ವಿಶಿಷ್ಟತೆ


ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಗೆ ಸಿದ್ಧತೆ ಪೂರ್ಣಗೊಳ್ಳುತ್ತಿರುವ ಬೆನ್ನಲ್ಲೇ ಜಂಬೂಸವಾರಿಯ ಮತ್ತೊಂದು ಆಕರ್ಷಣೆ ಸ್ಥಬ್ಧ ಚಿತ್ರಗಳ ಮೆರವಣಿಗೆಗೂ ಸಕಲ ಸಿದ್ಧತೆಗಳೂ ನಡೆಯುತ್ತಿವೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ 75 ವರ್ಷಗಳಲ್ಲಿ ಮಾಡಿರುವ ಸಾಧನೆಯ ವಿಶೇಷತೆ ಪ್ರದರ್ಶನಗಳು, ಹುಲಿ ಅಭಯಾರಣ್ಯ ಪ್ರದೇಶ ,ಪ್ರಮುಖ ದೇವಾಲಯಗಳ ಪ್ರದರ್ಶನ ಇನ್ನು ಹಲವು ವಿಶೇಷ ಸ್ಥಬ್ದ ಚಿತ್ರಗಳು ಈ ಬಾರಿ ದಸರಾಗೆ ಇನ್ನಷ್ಟು ಹೆಚ್ಚು ಮೆರುಗು ತರಲಿವೆ.

ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಪಂಚಾಯಿತಿ ಸಿಇಓ ಗಳಿಗೆ ತಮ್ಮ ಜಿಲ್ಲೆಯ ವಿಶೇಷವಾದ ಮಾದರಿ ರೂಪಿಸಬೇಕೆಂದು ಜಿಲ್ಲಾಡಳಿತ ವತಿಯಿಂದ ಈಗಾಗಲೇ ಪತ್ರ ವ್ಯವಹಾರ ಮಾಡಿದ್ದು ಕಳೆದ ವರ್ಷಕ್ಕಿಂತ ಭಿನ್ನವಾಗಿ ಸ್ತಬ್ಧ ಚಿತ್ರಗಳು ರೂಪಿಸಬೇಕೆಂದು ಸೂಚನೆ ನೀಡಲಾಗಿದೆ. ಎಲ್ಲ ಜಿಪಂಗಳು ತಮ್ಮ ಸ್ತಬ್ದ ಚಿತ್ರದ ಮಾದರಿಯನ್ನು ಕಳುಹಿಸಿಕೊಟ್ಟಿದ್ದು ಬಂಡೀಪಾಳ್ಯದ ಎಪಿಎಂಸಿ ಆವರಣದಲ್ಲಿ ಈಗಾಗಲೇ ಸ್ತಬ್ದಚಿತ್ರ ತಯಾರಿ ಕಾರ್ಯ ಪ್ರಗತಿಯಲ್ಲಿದೆ.
ದೇಶ ವಿದೇಶಗಳಲ್ಲಿ ಗಮನ ಸೆಳೆದಿರುವ ಮೈಸೂರಿನ ವಿಶೇಷತೆಯನ್ನು ಈ ಬಾರಿ ಯ ಸ್ತಬ್ಧಚಿತ್ರಗಳು ಅನಾವರಣಗೊಳಿಸಲಿವೆ. ಅರಮನೆ, ಪಾರಂಪರಿಕ ಕಟ್ಟಡ, ದೇವಾಲಯಗಳು, ಮೈಸೂರು ರೇಷ್ಮೆ, ನಂಜನಗೂಡು ರಸಬಾಳೆ, ಮೈಸೂರು ಪೇಟ ಹೀಗೆ ಭೌಗೋಳಿಕ ಅನನ್ಯತೆ ಪಟ್ಟಿಯಲ್ಲಿರುವ ಮೈಸೂರಿನ ವಿಶೇಷತೆಗಳು ಸ್ತಬ್ಧಚಿತ್ರ ರೂಪದಲ್ಲಿ ಅನಾವರಣಗೊಂಡು ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲ್ಲಿವೆ.
ನಾಡಿನ ವಿವಿಧ ಕಲಾ ತಂಡಗಳು ಹಾಗೂ ವಿವಿಧ ಸಾಂಸ್ಕ್ರತಿಕ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲ್ಲಿದ್ದು, ಮೆರವಣಿಗೆಯಲ್ಲಿ ಜನರ ಮನಸೂರೆಗೊಳಿಸುವ ಸ್ತಬ್ಧ ಚಿತ್ರಗಳೂ ಕೂಡ ಪಾಲ್ಗೊಳ್ಳಲ್ಲಿವೆ. ಜಂಬೂ ಸವಾರಿ ಅಂಬಾರಿ ಆನೆಗಳ ಜತೆ ಹೆಜ್ಜೆ ಹಾಕಲು ಸ್ಥಬ್ಧಚಿತ್ರಗಳು ತಯಾರಾಗಿದ್ದು, ವಿವಿಧ ಜಿಲ್ಲೆಗಳ ಸುಮಾರು 40ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಈ ಬಾರಿ ವಿಶೇಷವಾಗಿ ಹುಲಿ ಸಂತತಿ ,ಆನೆಗಳ ಸಂತತಿ, ಬಿಳಿಗಿರಿ ರಂಗನಬೆಟ್ಟ, ಮಲೆಮಹದೇಶ್ವರ ಬೆಟ್ಟ, ಬಂಡೀಪುರದ ರಮಣೀಯ ಪ್ರದರ್ಶನದಿಂದ ಕೂಡಿದೆ. ಕೊಡಗು ಜಿಲ್ಲೆಯ ಪ್ರವಾಸೋದ್ಯಮ ತಾಣಗಳನ್ನು ಪರಿಚಯಿಸುವಂತೆ ಮಾಡಲಾಗುತ್ತಿದೆ ಮಂಡ್ಯ ಜಿಲ್ಲೆಯ ಮೇಲುಕೋಟೆ ಸೇರಿದಂತೆ ಐತಿಹಾಸಿಕ ಸ್ಥಳಗಳ ಮಹಿಮೆಯನ್ನು ನೋಡುವ ರೀತಿ ಮಾಡಲಾಗುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ವರ್ಷದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿ ಕುರಿತಂತೆ ಅನಾವರಣಗೊಳ್ಳಲಿದೆ. ಅದೇ ರೀತಿ ಪ್ರತಿಯೊಂದು ಜಿಲ್ಲೆಯ ವಿಶೇಷತೆ, ಭೌಗೋಳಿಕ ವಿಶೇಷತೆ ಇರುವ ಪರಂಪರೆಯನ್ನು ಬಿಂಬಿಸುವಂತಹ ಸ್ಥಬ್ಥಚಿತ್ರಗಳು ತಯಾರಾಗಲಿವೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

12 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

13 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago