ಜಿಲ್ಲೆಗಳು

ದಸರಾಕ್ಕೆ ಮೈಸೂರು ಸಜ್ಜು

ಜಗಮಗಿಸುವ ದೀಪಗಳ ಬೆಳಕಿನಲ್ಲಿ ಮನೆಮಾಡಿದ ಸಂಭ್ರಮ

ಮೈಸೂರು: ಮಹೋತ್ಸವಕ್ಕೆ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶೇಷ ವೇದಿಕೆಯಲ್ಲಿ ಬೆಳ್ಳಿ ತೇರಿನಲ್ಲಿ ವಿರಾಜಮಾನವಾಗಿರುವ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದು, ಇದಕ್ಕೆ ಬೆಟ್ಟದಲ್ಲಿ ವಿಶೇಷ ವೇದಿಕೆ ಸಜ್ಜಾಗಿದೆ.

ಉಳಿದಂತೆ ದಸರಾ ವಸ್ತುಪ್ರದರ್ಶನ, ಫಲಪುಷ್ಪ ಪ್ರದರ್ಶನ, ದಸರಾ ಕುಸ್ತಿ ಪಂದ್ಯಾವಳಿ, ಅರಮನೆ ಆವರಣದ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ದಸರಾ ಚಲನ ಚಿತ್ರೋತ್ಸವ, ಆಹಾರ ಮೇಳ ಕೂಡ ಸೆ.೨೬ರಂದೇ ಚಾಲನೆ ಪಡೆಯಲಿದ್ದು ಅಂತಿಮ ಹಂತದ ಸಿದ್ಧತೆಗಳು ನಡೆದಿವೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ದಸರಾ ಸಂದರ್ಭದಲ್ಲಿ ಅರಮನೆ ಆವರಣದಲ್ಲೂ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ. ಅರಮನೆ ಆವರಣದಲ್ಲಿ ದಿಲ್ಲಿಯ ಕೆಂಪು ಕೋಟೆ ತಲೆ ಎತ್ತಿದೆ. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ಆಹಾರ ಮೇಳಕ್ಕೆ ಮಳಿಗೆಗಳು ತಲೆ ಎತ್ತಿವೆ. ನಗರದ ರಸ್ತೆಗಳು ಡಾಂಬರು ಕಾಣುತ್ತಿವೆ.

ವಸ್ತುಪ್ರದರ್ಶನದಲ್ಲಿ ಸ್ವಾತಂತ್ರ್ಯ ಯೋಧರ ಮರಳು ಕಲಾಕೃತಿ

ಮೈಸೂರು: ದೊಡ್ಡಕೆರೆ ಮೈದಾನದಲ್ಲಿ ಸೆ.೨೬ರಿಂದ ೯೦ ದಿನಗಳ ಕಾಲ ನಡೆಯಲಿರುವ ದಸರಾ ವಸ್ತು ಪ್ರದರ್ಶನದಲ್ಲಿ ಈ ಬಾರಿ ಪ್ರವಾಸಿಗರನ್ನು ವಿಶೇಷ ರೀತಿಯಲ್ಲಿ ಆಕರ್ಷಿಸಲು ನಟ ಪುನೀತ್‌ರಾಜ್‌ಕುಮಾರ್, ಸ್ವಾತಂತ್ರ್ಯ ಹೋರಾಟಗಾರರ ಸ್ಯಾಂಡ್ ಮ್ಯೂಸಿಯಂ (ಮರಳಿನ ಕಲಾಕೃತಿಗಳ ಸಂಗ್ರಹ) ನಿರ್ಮಿಸಲಾಗಿದೆ.

ಪ್ರತಿ ವರ್ಷ ೧೨ ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರನ್ನು ಸೆಳೆಯುವ ವಸ್ತು ಪ್ರದರ್ಶನದಲ್ಲಿ ಈ ಬಾರಿ ಹಲವಾರು ವಿಶೇಷತೆಗಳು ಇವೆ. ಕಾವೇರಿ ಕಲಾ ಗ್ಯಾಲರಿ ಈ ವರ್ಷದ ಆಕರ್ಷಣೆಯಾಗಿದೆ. ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಮಳಿಗೆಗಳು, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆಗಳ ಸಿದ್ಧತೆ ಶೇ.೮೦ರಷ್ಟು ಮುಗಿದಿದೆ. ೩೯ ಸರ್ಕಾರಿ, ಅರೆ ಸರ್ಕಾರಿ ಮಳಿಗೆಗಳಲ್ಲಿ ೨೬ ಮಳಿಗೆಗಳ ಕಾಮಗಾರಿ ಶೇ.೮೦ರಷ್ಟು ಪೂರ್ಣವಾಗಿದ್ದರೆ, ೧೩ ಮಳಿಗೆಗಳು ಒಂದು ವಾರದಲ್ಲಿ ಅಂತಿಮವಾಗಲಿದೆ ಎಂದು ಹೇಳಲಾಗಿದೆ.

ನಾಳೆಯಿಂದ ಅ.೨ರವರೆಗೆ ದಸರಾ ಕುಸ್ತಿ ಪಂದ್ಯಾವಳಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಪ್ರಯುಕ್ತ ಸೆ.೨೬ರಿಂದ ಅ.೨ರವರೆಗೆ ದಸರಾ ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ದಸರಾ ಕಂಠೀರವ, ದಸರಾ ಕೇಸರಿ, ದಸರಾ ಕಿಶೋರಿ, ದಸರಾ ಕುಮಾರ್, ದಸರಾ ಕಿಶೋರ್ ಪ್ರಶಸ್ತಿಗಳಿಗೆ ಪಾಯಿಂಟ್ ಕುಸ್ತಿಗಳನ್ನು ನಡೆಸಲಾಗುತ್ತದೆ. ಸೆ.೨೬ರಂದು ಮಧ್ಯಾಹ್ನ ೩.೩ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಸ್ತಿ ಪಂದ್ಯಾವಳಿ ಉದ್ಘಾಟಿಸಲಿದ್ದು, ಉತ್ತಮ ನಾಡ ಕುಸ್ತಿ ಪಟುಗಳಿಗೆ ಮೇಯರ್ ಕಪ್, ಸಾಹುಕಾರ್ ಚನ್ನಯ್ಯ ಕಪ್, ಮೈಸೂರು ಮಹಾರಾಜ ಒಡೆಯರ್ ಕಪ್‌ಗಳನ್ನು ನೀಡಲಾಗುವುದು.

ಕುಪ್ಪಣ್ಣ ಪಾರ್ಕ್‌ನಲ್ಲಿ ಪುಷ್ಪ ಕಾಶಿ, ರಾಷ್ಟ್ರಪತಿ ಭವನ

ಮೈಸೂರು: ಹಾರ್ಡಿಂಜ್ ವೃತ್ತದ ಬಳಿ ಇರುವ ನಿಶಾದ್ ಬಾಗ್ ಕುಪ್ಪಣ್ಣ ಪಾರ್ಕ್‌ನಲ್ಲಿ ಸೆ.೨೬ರಿಂದ ಅ.೫ರವರೆಗೆ ದಸರಾ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಗಾಜಿನ ಮನೆಯಲ್ಲಿ ೨೦ ಅಡಿ ಎತ್ತರದ ರಾಷ್ಟ್ರಪತಿ ಭವನದ ಮಾದರಿ, ನಟ ಪುನೀತ್ ರಾಜ್‌ಕುಮಾರ್ ಮಾದರಿಯನ್ನು ಪುಷ್ಪಗಳಿಂದ ನಿರ್ಮಿಸಲಾಗುವುದು. ಮೈಸೂರು ರಾಜರ ಆಳ್ವಿಕೆಯ ಸಮಯದಲ್ಲಿ ಜನರು ವಿಶ್ರಾಂತಿ ಪಡೆಯಲು ‘ಥಂಡಿ ಸಡಕ್’ ಅನ್ನು ನಿರ್ಮಿಸುತ್ತಿದ್ದರು. ಅದರ ಮಾದರಿಯನ್ನು ಗಾಜಿನ ಮನೆಯ ಮುಂದೆ ನಿರ್ಮಿಸಲಾಗುತ್ತಿದೆ.
ಹೂವಿನಲ್ಲಿ ಏಳು ಅಡಿ ಎತ್ತರದ ಜೇನುಹುಳು ಮಾದರಿ, ೧೨ ಅಡಿಯ ಜಿರಾಫೆ ಹಾಗೂ ಗೊಂಬೆಗಳು ಅರಳಲಿವೆ. ದಪ್ಪ ಮೆಣಸಿನ ಕಾಯಿಗಳಿಂದ ೭ ಅಡಿ ಎತ್ತರದ ಮನೆಯ ಮಾದರಿ ನಿರ್ಮಿಸಲಾಗುವುದು. ಅಲ್ಲದೆ ಪ್ರತಿದಿನ ಸಂಜೆಯ ವೇಳೆ ಅನೇಕ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

andolanait

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

9 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

9 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

9 hours ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

9 hours ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

9 hours ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

10 hours ago