ಜಿಲ್ಲೆಗಳು

ಮೈಸೂರು ದಸರಾ ಅಂಗವಾಗಿ ವಿ. ಮಿಲ್ ಸಂಸ್ಥೆ ವತಿಯಿಂದ ವಿವಿಧ ಸ್ಪರ್ಧೆಗಳು

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಗ್ರಾಮೀಣ ಭಾಗದ ಮಹಿಳೆಯರಲ್ಲಿ ಉದ್ಯಮ ಶೀಲತೆಯನ್ನು ಬೆಳೆಸುತ್ತಾ, ಸಾಮಾಜಿಕ ಉದ್ಯಮವಾಗಿ ಗುರುತಿಸಿಕೊಂಡಿರುವ ವಿ ಮಿಲ್ ಸಂಸ್ಥೆಯು ರಾಗಿಯ ಮಹತ್ವ ತಿಳಿಸುವ ಉದ್ದೇಶದಿಂದ ನವಸಿರಿ ಅಭಿಯಾನ ಆರಂಭಿಸಿದ್ದು, ಇದರ ಭಾಗವಾಗಿ ಸೆ.27ರಿಂದ ಹಮ್ಮಿಕೊಳ್ಳಲಿರುವ ನಗರದ ಜೆಕೆ ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಸಂಸ್ಥೆಯು ಸ್ಟಾಲ್ ಹಾಕುವ ಮೂಲಕ ವಿವಿಧ ಸ್ವರ್ಧೆಗಳನ್ನು ಆಯೋಜಿಸಿದೆ.

ಸ್ಪರ್ಧೆಗಳು : ಸೆ. 26, 27 ನವಕುಂಚ ಸ್ಪರ್ಧೆ, ಸೆ.28 ರಂದು ಬೆಳಿಗ್ಗೆ 11ಕ್ಕೆ ನವರುಚಿ ಸ್ಪರ್ಧೆ, ಸೆ.29 ಮಧ್ಯಾಹ್ನಕ್ಕೆ ನವಸಿರಿಧಾನ್ಯ ಸ್ಪರ್ಧೆ, ಸೆ.26 ರಿಂದ 28ರವರೆಗೆ ನವರಾಗ ಸ್ಪರ್ಧೆ, ಸೆ.26 ರಿಂದ 29ರವರೆಗೆ ನವರಂಗ್, ನವಚಿತ್ರ ಸ್ಪರ್ಧೆ, ನವಕಾವ್ಯ ಸ್ಪರ್ಧೆಗಳನ್ನು ಮತ್ತು ಸೆ.26ರಿಂದ ಸೆ.30ರವರೆಗೆ ನವಶಕ್ತಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪ್ರತೀ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಬಹುಮಾನಗಳು ಇರುತ್ತವೆ.

ಸ್ಪರ್ಧೆ ವಿವರ: ನವರುಚಿ ರಾಗಿ ಮುದ್ದೆ ತಿನ್ನುವುದು. ನವಕಾವ್ಯ ರಾಗಿ ಮತ್ತು ಸಿರಿಧಾನ್ಯದ ಕುರಿತು ಕವಿತೆ ರಚನೆ ಮತ್ತು ವಾಚನ. ನವರಂಗ್ ನವರಾತ್ರಿ ಹಿನ್ನೆಲೆ ಬಣ್ಣದ ಉಡುಗೆ ತೊಟ್ಟು ಪೋಟೋ ಕಳುಹಿಸುವುದು. ನವ ಕುಂಚ
ಮೈಸೂರು ದಸರಾವನ್ನು ಬಿಂಬಿಸಬೇಕು ಪೇಂಟಿಂಗ್ ಮಾಡುವುದು. ನವ ರಾಗ ಶ್ರೀ ಪುರಂದರದಾಸರು ರಚಿಸಿದ ರಾಗಿ ತಂದಿರ ಭಿಕ್ಷಕೆ ರಾಗಿ ತಂದಿರಾ ಹಾಡನ್ನು ಹಾಡಿ ಕಳಿಸಬೇಕು.‌ ನವಸಿರಿಧಾನ್ಯ ಸಿರಿಧಾನ್ಯ ಬಳಸಿ ಅಡುಗೆ ಮಾಡುವುದು. ನವಶಕ್ತಿ ದಸರಾ ಗೊಂಬೆಯ ವಿಡಿಯೋ 2 ನಿಮಿಷದೊಳಗೆ ಇರಬೇಕು.
ಗೊಂಬೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒಳಗೊಂಡಿರಬೇಕು.

ವಿಶೇಷ: ಇನ್ನು ಈ ಸ್ಟಾಲ್ ನಲ್ಲಿ ವಿ ಮಿಲ್ ನ 14 ಗ್ರಾಮೀಣ ಭಾಗದ ಮಹಿಳೆಯರು ದೇಸಿ ಆಹಾರ ಉತ್ಪನ್ನಗಳ ಬಗ್ಗೆ ಅಚ್ಚುಕಟ್ಟಾಗಿ ಮಾಹಿತಿ ನೀಡಲಿದ್ದು, ಇಂತಹ ಒಂದು ಉದ್ಯಮದಿಂದ ಆರ್ಥಿಕವಾಗಿ ಪ್ರಗತಿಗೊಂಡ ತಮ್ಮ ಯಶಸ್ಸಿನ ಕಥೆಯನ್ನು ಹಂಚಿಕೊಳ್ಳುವ ಮೂಲಕ ಮತ್ತಷ್ಟು ಮಹಿಳೆಯರಿಗೆ ಪ್ರೇರಣೆಯಾಗಲಿದ್ದಾರೆ. ಮಹಿಳಾ ಮತ್ತು ಮಕ್ಕಳ ದಸರಾ ವೀಕ್ಷಣೆ ಬರುವ ಪ್ರೇಕ್ಷಕರು ಸ್ಟಾಲ್ ಗೆ ಭೇಟಿ ನೀಡಿ ಇಂತಹ ಮಹಿಳೆಯರನ್ನು ಪ್ರೋತ್ಸಾಹಿಸಬೇಕೆಂದು ಮನವಿ ಮಾಡುತ್ತೇವೆ.

ಸೂಚನೆಗಳು: ಸ್ಮರ್ಧೆಯಲ್ಲಿ ಪ್ರವೇಶಕ್ಕಾಗಿ #navasiri ಹ್ಯಾಶ್‌ಟ್ಯಾಗ್ ಜೊತೆಗೆ @wemillindia ಅನ್ನು ಟ್ಯಾಗ್ ಮಾಡುವುದು ಅತ್ಯಗತ್ಯ. ಹೆಚ್ಚಿನ ಮಾಹಿತಿಗಾಗಿ‌ ಸಂಪರ್ಕಿಸಿ: 7337844633.

andolanait

Recent Posts

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

9 mins ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

1 hour ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

4 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

6 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

6 hours ago