ಜಿಲ್ಲೆಗಳು

ರಾಹುಲ್‌ ಗಾಂಧಿ ಅವರು ಯಾವ ಯಾವ ಕ್ಷೇತ್ರಗಳಿಗೆ ಭೇಟಿ ಮಾಡಿದ್ದಾರೆ ಅಲ್ಲೆಲ್ಲಾ ಬಿಜೆಪಿಯ ಕಮಲ ಅರಳಿದೆ : ಸಿಎಂ ಬೊಮ್ಮಾಯಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ತಿಳಿಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿ ಅವರು ದಸರಾ ಹಬ್ಬಕ್ಕೆ ನಮ್ಮದೆ ಆದಂತಹ ಒಂದು ಪರಂಪರೆ ಇದೆ. ದಸರಾ ಒಂದು ರೀತಿಯಲ್ಲಿ ನಾಡ ಹಬ್ಬವೂ ಕೂಡ ಹೌದು,ಜನರು ಸಂಭ್ರಮಿಸುವಂತಹ ಹಬ್ಬವಾಗಿದೆ. ಕಾಂಗ್ರೆಸ್‌ ನವರು ಮಾಡುತ್ತಿರುವ ಪೇ ಸಿಎಂ ಅಭಿಯಾನದ ಬಗ್ಗೆನಿಮ್ಮ ಅಭಿಪ್ರಾಯವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ದಯವಿಟ್ಟು ಅವರು ಅಭಿಯಾನವನ್ನು ಮಾಡಲಿ, ಆಮ್‌ ವೆಲ್ಕಂ ದಟ್‌.. ಕಾಂಗ್ರೆಸ್‌ ನವರು ತನ್ನ ತೆಕ್ಕೆಯಲ್ಲಿ ಬಹಳಷ್ಟು ಹಗರಣಗಳನ್ನು ಇಟ್ಟುಕೊಂಡಿಡು ಈ ರೀತಿಯ ಕೆಲಸಗಳನ್ನು ಮಾಡುತ್ತಿದೆ. ಪೇ ಸಿಎಂ ಎಂಬುದು ಒಂದು ಹಗರಣವೇ ? ಎಂದು ಪ್ರಶ್ನಿಸಿದ್ದಾರೆ.
ಇದೊಂದು ಕ್ಯಾಂಪೇನ್‌ ಅಷ್ಟೆ ಇಂದಿನ ಯುವ ಸಮೂಹದಲ್ಲಿ ಇಂತಹವುಗಳನ್ನು ಕ್ರಿಯೆಟ್‌ ಮಾಡುವುದು ಸಣ್ಣ ಸಣ್ಣ ಯುವಕರಿಗೂ ಕೂಡ  ಗೊತ್ತಿರುವಂತಹದ್ದೆ.ಇದೊಂದು ಮೋಸದ ಸುದ್ದಿ ಎಂಬುದು ಬಹಳ ಸ್ಪಷ್ಟವಾಗಿದೆ. ಕಾಂಗ್ರೆಸ್‌ ನವರು ತಮ್ಮ ಸ್ವಾರ್ಥ ಮತ್ತು ಅಧಿಕಾರಕ್ಕೆ ಬರುವುದಕ್ಕಾಗಿ ರಾಜ್ಯದ ಹೆಸರನ್ನೂ ಕೂಡ ಬಲಿ ಕೊಡಲು ತಯಾರಿದ್ದಾರೆ.
ಭಾರತ್‌ ಜೋಡೊ ಅಭಿಯಾನದ ಪ್ರಯುಕ್ತ ರಾಹುಲ್‌ ಗಾಂಧಿ ಅವರು ಜಿಲ್ಲೆಯ ಬರುತ್ತಿರುವುದರ ಬಗ್ಗೆ ನೀವೇನು ಹೇಳತ್ತೀರಾಎಂಬ ಮಾಧ್ಯದವರ ಪ್ರಶ್ನೆಗೆ ಉತ್ತರಿಸಿದ ಅವರು ರಾಹುಲ್‌ ಗಾಂಧಿ ಅವರು ಬರುತ್ತಿರುವ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲೆ ಆದರೆ ರಾಹುಲ್‌ ಗಾಂಧಿ ಅವರು ಯಾವ ಯಾವ ಕ್ಷೇತ್ರಗಳಿಗೆ ಭೇಟಿ ಮಾಡಿದ್ದಾರೆ ಅಲ್ಲೆಲ್ಲಾ ಬಿಜೆಪಿಯ ಕಮಲ ಅರಳಿದೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

12 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

13 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago