ಜಿಲ್ಲೆಗಳು

ರಾಹುಲ್‌ ಗಾಂಧಿ ಅವರು ಯಾವ ಯಾವ ಕ್ಷೇತ್ರಗಳಿಗೆ ಭೇಟಿ ಮಾಡಿದ್ದಾರೆ ಅಲ್ಲೆಲ್ಲಾ ಬಿಜೆಪಿಯ ಕಮಲ ಅರಳಿದೆ : ಸಿಎಂ ಬೊಮ್ಮಾಯಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ತಿಳಿಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿ ಅವರು ದಸರಾ ಹಬ್ಬಕ್ಕೆ ನಮ್ಮದೆ ಆದಂತಹ ಒಂದು ಪರಂಪರೆ ಇದೆ. ದಸರಾ ಒಂದು ರೀತಿಯಲ್ಲಿ ನಾಡ ಹಬ್ಬವೂ ಕೂಡ ಹೌದು,ಜನರು ಸಂಭ್ರಮಿಸುವಂತಹ ಹಬ್ಬವಾಗಿದೆ. ಕಾಂಗ್ರೆಸ್‌ ನವರು ಮಾಡುತ್ತಿರುವ ಪೇ ಸಿಎಂ ಅಭಿಯಾನದ ಬಗ್ಗೆನಿಮ್ಮ ಅಭಿಪ್ರಾಯವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ದಯವಿಟ್ಟು ಅವರು ಅಭಿಯಾನವನ್ನು ಮಾಡಲಿ, ಆಮ್‌ ವೆಲ್ಕಂ ದಟ್‌.. ಕಾಂಗ್ರೆಸ್‌ ನವರು ತನ್ನ ತೆಕ್ಕೆಯಲ್ಲಿ ಬಹಳಷ್ಟು ಹಗರಣಗಳನ್ನು ಇಟ್ಟುಕೊಂಡಿಡು ಈ ರೀತಿಯ ಕೆಲಸಗಳನ್ನು ಮಾಡುತ್ತಿದೆ. ಪೇ ಸಿಎಂ ಎಂಬುದು ಒಂದು ಹಗರಣವೇ ? ಎಂದು ಪ್ರಶ್ನಿಸಿದ್ದಾರೆ.
ಇದೊಂದು ಕ್ಯಾಂಪೇನ್‌ ಅಷ್ಟೆ ಇಂದಿನ ಯುವ ಸಮೂಹದಲ್ಲಿ ಇಂತಹವುಗಳನ್ನು ಕ್ರಿಯೆಟ್‌ ಮಾಡುವುದು ಸಣ್ಣ ಸಣ್ಣ ಯುವಕರಿಗೂ ಕೂಡ  ಗೊತ್ತಿರುವಂತಹದ್ದೆ.ಇದೊಂದು ಮೋಸದ ಸುದ್ದಿ ಎಂಬುದು ಬಹಳ ಸ್ಪಷ್ಟವಾಗಿದೆ. ಕಾಂಗ್ರೆಸ್‌ ನವರು ತಮ್ಮ ಸ್ವಾರ್ಥ ಮತ್ತು ಅಧಿಕಾರಕ್ಕೆ ಬರುವುದಕ್ಕಾಗಿ ರಾಜ್ಯದ ಹೆಸರನ್ನೂ ಕೂಡ ಬಲಿ ಕೊಡಲು ತಯಾರಿದ್ದಾರೆ.
ಭಾರತ್‌ ಜೋಡೊ ಅಭಿಯಾನದ ಪ್ರಯುಕ್ತ ರಾಹುಲ್‌ ಗಾಂಧಿ ಅವರು ಜಿಲ್ಲೆಯ ಬರುತ್ತಿರುವುದರ ಬಗ್ಗೆ ನೀವೇನು ಹೇಳತ್ತೀರಾಎಂಬ ಮಾಧ್ಯದವರ ಪ್ರಶ್ನೆಗೆ ಉತ್ತರಿಸಿದ ಅವರು ರಾಹುಲ್‌ ಗಾಂಧಿ ಅವರು ಬರುತ್ತಿರುವ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲೆ ಆದರೆ ರಾಹುಲ್‌ ಗಾಂಧಿ ಅವರು ಯಾವ ಯಾವ ಕ್ಷೇತ್ರಗಳಿಗೆ ಭೇಟಿ ಮಾಡಿದ್ದಾರೆ ಅಲ್ಲೆಲ್ಲಾ ಬಿಜೆಪಿಯ ಕಮಲ ಅರಳಿದೆ.

andolanait

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

7 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

7 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

8 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

10 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

11 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

12 hours ago