ಜಿಲ್ಲೆಗಳು

ಮೈಸೂರು ದಸರಾಗೆ ದಿನಗಣನೆ ಆರಂಭ : ಮುಷ್ಠಿ ಕಾಳಗಕ್ಕೆ ಜಟ್ಟಿಗಳ ಸಕಲ ಸಿದ್ಧತೆ

ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಠಿ ಕಾಳಗಕ್ಕೆ ಚಾಮರಾಜನಗರದ ಜಟ್ಟಿ ಸಕಲ ಸಿದ್ಧತೆಯನ್ನು ನಡೆಸುತ್ತಿದ್ದಾರೆ.

ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ಮೈನವಿರೇಳಿಸುವ ವಜ್ರಮುಷ್ಟಿ ಕಾಳಗಕ್ಕೆ ಚಾಮರಾಜನಗರ ಜಟ್ಟಿ, ಉಸ್ತಾದ್ ಕೃಷ್ಣಪ್ಪ ಅವರ ಪುತ್ರ ಅಚ್ಯುತ್ ಜಟ್ಟಿ ಸಜ್ಜುಗೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳಿನಿಂದ ಚಾ.ನಗರದ ದೊಡ್ಡ ಗರಡಿಯಲ್ಲಿ ತರಬೇತುದಾರ ಪುಟ್ಟಣ್ಣ ಜಟ್ಟಿ ಮತ್ತು ಹೇಮಂತ್ ಜಟ್ಟಿ, ತಿರುಮಲೇಶ್ ಜಟ್ಟಿ ಅವರುಗಳಿಂದ ಅಚ್ಯುತ್ ತರಬೇತಿ ಪಡೆಯುತ್ತಿದ್ದಾರೆ.

ಮಹತ್ವದ ವಜ್ರಮುಷ್ಠಿ ಕಾಳಗ: ದಸರಾ ಮಹೋತ್ಸವದಲ್ಲಿ ನಡೆಯುವ ವಜ್ರಮುಷ್ಟಿ ಕಾಳಗಕ್ಕೆ ತನ್ನದೇ ಆದ ಮಹತ್ವವಿದ್ದು, ವಿಜಯದಶಮಿಯ ದಿನ ನಡೆಯುವ ಜಂಬೂ ಸವಾರಿಗೂ ಮೊದಲು ರಾಜ ಮನೆತನದವರ ಸಮ್ಮುಖದಲ್ಲಿ ಈ ಕಾಳಗ ನಡೆಯುತ್ತದೆ. ಸಂಪ್ರದಾಯದ ಉದ್ದೇಶದಿಂದ ನಡೆಯುವ ಈ ಕಾಳಗ ಕೆಲವೇ ಸೆಕೆಂಡುಗಳಲ್ಲಿ ಮುಗಿಯುತ್ತದೆ. ಆದರೂ, ಈ ಕಾಳಗವನ್ನು ವೀಕ್ಷಿಸಲು ಜನರ ಸಾಕಷ್ಟು ಸಂಖ್ಯೆಯಲ್ಲಿ ನೆರೆಯುತ್ತಾರೆ.

ನಾಲ್ವರು ಜಟ್ಟಿಗಳು: ಜಟ್ಟಿ ಜನಾಂಗಕ್ಕೆ ಸೇರಿದ ನಾಲ್ವರು ಪೈಲ್ವಾನರು ವಜ್ರಮುಷ್ಟಿ ಕಾಳಗ ಮಾಡುತ್ತಾರೆ. ಕೈಯಲ್ಲಿ ದಂತದ ನಖವನ್ನು ಧರಿಸಿ ಮಾಡುವ ಈ ಹೊಡೆದಾಟದಲ್ಲಿ ಯಾರಾದರೂ ಒಬ್ಬ ಜಟ್ಟಿಯ ತಲೆಯಲ್ಲಿ ರಕ್ತ ಸುರಿಯಲು ಆರಂಭವಾದ ತಕ್ಷಣ ಕಾಳಗವನ್ನು ಮುಕ್ತಾಯ ಮಾಡುವುದು ರೂಢಿಯಿಂದಲೂ ನಡೆದುಕೊಂಡು ಬಂದಿದೆ.
ಬೆಂಗಳೂರು, ಮೈಸೂರು, ಚನ್ನಪಟ್ಟಣ ಮತ್ತು ಚಾ.ನಗರದ ತಲಾ ಒಬ್ಬೊಬ್ಬ ಜಟ್ಟಿ ಈ ವಜ್ರಮುಷ್ಟಿ ಕಾಳಗದಲ್ಲಿ ಭಾಗವಹಿಸುವುದು ರೂಢಿ. ಈ ನಾಲ್ಕು ಊರುಗಳಿಂದ ಪ್ರತಿವರ್ಷ ಜಟ್ಟಿಗಳನ್ನು ಕಳುಹಿಸಲೇಬೇಕು. ಇದರಲ್ಲಿ ಭಾಗವಹಿಸುವವರು ಜಟ್ಟಿ ಜನಾಂಗದವರೇ ಆಗಬೇಕು.

ಜಟ್ಟಿಗಳಿಗೆ ತರಬೇತಿ: ದಸರಾ ಆರಂಭಕ್ಕೆ ಒಂದು ತಿಂಗಳು ಇರುವಾಗ ಆಯ್ಕೆ ಮಾಡಿ ತರಬೇತಿ ನೀಡಲು ಆರಂಭಿಸುತ್ತಾರೆ, ಕಾಳಗದ ನಡೆಗಳನ್ನು ಕಲಿಸಲಾಗುತ್ತದೆ. ಪ್ರತಿ ದಿನ ಬೆಳಿಗ್ಗೆ ತರಬೇತಿ ಇರುತ್ತದೆ, ಶನಿವಾರ-ಭಾನುವಾರ ದಿನಪೂರ್ತಿ ತರಬೇತಿ ನಡೆಯಲಿದ್ದು ಜಟ್ಟಿಯನ್ನು ಆಯ್ಕೆ ಮಾಡುವಾಗ ವಯಸ್ಸಿನ ಮಿತಿ ನೋಡುವುದಿಲ್ಲ. ಆರೋಗ್ಯದಿಂದ ಇರಬೇಕು. ದೈಹಿಕವಾಗಿ ಸದೃಢರಾಗಿರಬೇಕು, ರಾಜಮನೆತನದ ಅಂಗರಕ್ಷಕರಾಗಿರುವ ಜಟ್ಟಿ ಸಮುದಾಯದ ಶೌರ್ಯ, ತ್ಯಾಗ, ರಾಜರಿಗೆ ಒಳಿತಾಗಲೆಂಬ ಸಂಕೇತ ಈ ಜಟ್ಟಿ ಕಾಳಗವಾಗಿದೆ.

ಕೊರೊನಾ ಕರಿಛಾಯೆ ಇಲ್ಲದ ಈ ಬಾರಿ ದಸರಾ ಅದ್ಧೂರಿಯಾಗಿ ನಡೆಯುವ ಹಿನ್ನೆಲೆಯಲ್ಲಿ ಜಟ್ಟಿಗಳು ಕೂಡ ಸಂಭ್ರಮದಿಂದಲೇ ತಾಲೀಮು ನಡೆಸುತ್ತಿದ್ದಾರೆ, ಮೈ ನವಿರೇಳಿಸುವ ಕಾರ್ಯಕ್ರಮಕ್ಕೆ ಕೆಲವೇ ದಿನಗಳಲ್ಲಿ ಸಾಕ್ಷಿಯಾಗಲಿದ್ದಾರೆ

andolanait

Recent Posts

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

45 mins ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

2 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

2 hours ago

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…

2 hours ago

ಉಪಚುನಾವಣೆ : ಎರಡು ಕ್ಷೇತ್ರಗಳಲ್ಲೂ ನಾವೇ ಗೆಲ್ತೇವೆ : ಸಿಎಂ

ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…

3 hours ago

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌

ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ,…

3 hours ago