ಜಿಲ್ಲೆಗಳು

ಮೈಸೂರು ದಸರಾಗೆ ದಿನಗಣನೆ ಆರಂಭ : ಮುಷ್ಠಿ ಕಾಳಗಕ್ಕೆ ಜಟ್ಟಿಗಳ ಸಕಲ ಸಿದ್ಧತೆ

ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಠಿ ಕಾಳಗಕ್ಕೆ ಚಾಮರಾಜನಗರದ ಜಟ್ಟಿ ಸಕಲ ಸಿದ್ಧತೆಯನ್ನು ನಡೆಸುತ್ತಿದ್ದಾರೆ.

ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ಮೈನವಿರೇಳಿಸುವ ವಜ್ರಮುಷ್ಟಿ ಕಾಳಗಕ್ಕೆ ಚಾಮರಾಜನಗರ ಜಟ್ಟಿ, ಉಸ್ತಾದ್ ಕೃಷ್ಣಪ್ಪ ಅವರ ಪುತ್ರ ಅಚ್ಯುತ್ ಜಟ್ಟಿ ಸಜ್ಜುಗೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳಿನಿಂದ ಚಾ.ನಗರದ ದೊಡ್ಡ ಗರಡಿಯಲ್ಲಿ ತರಬೇತುದಾರ ಪುಟ್ಟಣ್ಣ ಜಟ್ಟಿ ಮತ್ತು ಹೇಮಂತ್ ಜಟ್ಟಿ, ತಿರುಮಲೇಶ್ ಜಟ್ಟಿ ಅವರುಗಳಿಂದ ಅಚ್ಯುತ್ ತರಬೇತಿ ಪಡೆಯುತ್ತಿದ್ದಾರೆ.

ಮಹತ್ವದ ವಜ್ರಮುಷ್ಠಿ ಕಾಳಗ: ದಸರಾ ಮಹೋತ್ಸವದಲ್ಲಿ ನಡೆಯುವ ವಜ್ರಮುಷ್ಟಿ ಕಾಳಗಕ್ಕೆ ತನ್ನದೇ ಆದ ಮಹತ್ವವಿದ್ದು, ವಿಜಯದಶಮಿಯ ದಿನ ನಡೆಯುವ ಜಂಬೂ ಸವಾರಿಗೂ ಮೊದಲು ರಾಜ ಮನೆತನದವರ ಸಮ್ಮುಖದಲ್ಲಿ ಈ ಕಾಳಗ ನಡೆಯುತ್ತದೆ. ಸಂಪ್ರದಾಯದ ಉದ್ದೇಶದಿಂದ ನಡೆಯುವ ಈ ಕಾಳಗ ಕೆಲವೇ ಸೆಕೆಂಡುಗಳಲ್ಲಿ ಮುಗಿಯುತ್ತದೆ. ಆದರೂ, ಈ ಕಾಳಗವನ್ನು ವೀಕ್ಷಿಸಲು ಜನರ ಸಾಕಷ್ಟು ಸಂಖ್ಯೆಯಲ್ಲಿ ನೆರೆಯುತ್ತಾರೆ.

ನಾಲ್ವರು ಜಟ್ಟಿಗಳು: ಜಟ್ಟಿ ಜನಾಂಗಕ್ಕೆ ಸೇರಿದ ನಾಲ್ವರು ಪೈಲ್ವಾನರು ವಜ್ರಮುಷ್ಟಿ ಕಾಳಗ ಮಾಡುತ್ತಾರೆ. ಕೈಯಲ್ಲಿ ದಂತದ ನಖವನ್ನು ಧರಿಸಿ ಮಾಡುವ ಈ ಹೊಡೆದಾಟದಲ್ಲಿ ಯಾರಾದರೂ ಒಬ್ಬ ಜಟ್ಟಿಯ ತಲೆಯಲ್ಲಿ ರಕ್ತ ಸುರಿಯಲು ಆರಂಭವಾದ ತಕ್ಷಣ ಕಾಳಗವನ್ನು ಮುಕ್ತಾಯ ಮಾಡುವುದು ರೂಢಿಯಿಂದಲೂ ನಡೆದುಕೊಂಡು ಬಂದಿದೆ.
ಬೆಂಗಳೂರು, ಮೈಸೂರು, ಚನ್ನಪಟ್ಟಣ ಮತ್ತು ಚಾ.ನಗರದ ತಲಾ ಒಬ್ಬೊಬ್ಬ ಜಟ್ಟಿ ಈ ವಜ್ರಮುಷ್ಟಿ ಕಾಳಗದಲ್ಲಿ ಭಾಗವಹಿಸುವುದು ರೂಢಿ. ಈ ನಾಲ್ಕು ಊರುಗಳಿಂದ ಪ್ರತಿವರ್ಷ ಜಟ್ಟಿಗಳನ್ನು ಕಳುಹಿಸಲೇಬೇಕು. ಇದರಲ್ಲಿ ಭಾಗವಹಿಸುವವರು ಜಟ್ಟಿ ಜನಾಂಗದವರೇ ಆಗಬೇಕು.

ಜಟ್ಟಿಗಳಿಗೆ ತರಬೇತಿ: ದಸರಾ ಆರಂಭಕ್ಕೆ ಒಂದು ತಿಂಗಳು ಇರುವಾಗ ಆಯ್ಕೆ ಮಾಡಿ ತರಬೇತಿ ನೀಡಲು ಆರಂಭಿಸುತ್ತಾರೆ, ಕಾಳಗದ ನಡೆಗಳನ್ನು ಕಲಿಸಲಾಗುತ್ತದೆ. ಪ್ರತಿ ದಿನ ಬೆಳಿಗ್ಗೆ ತರಬೇತಿ ಇರುತ್ತದೆ, ಶನಿವಾರ-ಭಾನುವಾರ ದಿನಪೂರ್ತಿ ತರಬೇತಿ ನಡೆಯಲಿದ್ದು ಜಟ್ಟಿಯನ್ನು ಆಯ್ಕೆ ಮಾಡುವಾಗ ವಯಸ್ಸಿನ ಮಿತಿ ನೋಡುವುದಿಲ್ಲ. ಆರೋಗ್ಯದಿಂದ ಇರಬೇಕು. ದೈಹಿಕವಾಗಿ ಸದೃಢರಾಗಿರಬೇಕು, ರಾಜಮನೆತನದ ಅಂಗರಕ್ಷಕರಾಗಿರುವ ಜಟ್ಟಿ ಸಮುದಾಯದ ಶೌರ್ಯ, ತ್ಯಾಗ, ರಾಜರಿಗೆ ಒಳಿತಾಗಲೆಂಬ ಸಂಕೇತ ಈ ಜಟ್ಟಿ ಕಾಳಗವಾಗಿದೆ.

ಕೊರೊನಾ ಕರಿಛಾಯೆ ಇಲ್ಲದ ಈ ಬಾರಿ ದಸರಾ ಅದ್ಧೂರಿಯಾಗಿ ನಡೆಯುವ ಹಿನ್ನೆಲೆಯಲ್ಲಿ ಜಟ್ಟಿಗಳು ಕೂಡ ಸಂಭ್ರಮದಿಂದಲೇ ತಾಲೀಮು ನಡೆಸುತ್ತಿದ್ದಾರೆ, ಮೈ ನವಿರೇಳಿಸುವ ಕಾರ್ಯಕ್ರಮಕ್ಕೆ ಕೆಲವೇ ದಿನಗಳಲ್ಲಿ ಸಾಕ್ಷಿಯಾಗಲಿದ್ದಾರೆ

andolanait

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

1 hour ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

1 hour ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

2 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

2 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

11 hours ago