ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಠಿ ಕಾಳಗಕ್ಕೆ ಚಾಮರಾಜನಗರದ ಜಟ್ಟಿ ಸಕಲ ಸಿದ್ಧತೆಯನ್ನು ನಡೆಸುತ್ತಿದ್ದಾರೆ.
ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ಮೈನವಿರೇಳಿಸುವ ವಜ್ರಮುಷ್ಟಿ ಕಾಳಗಕ್ಕೆ ಚಾಮರಾಜನಗರ ಜಟ್ಟಿ, ಉಸ್ತಾದ್ ಕೃಷ್ಣಪ್ಪ ಅವರ ಪುತ್ರ ಅಚ್ಯುತ್ ಜಟ್ಟಿ ಸಜ್ಜುಗೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳಿನಿಂದ ಚಾ.ನಗರದ ದೊಡ್ಡ ಗರಡಿಯಲ್ಲಿ ತರಬೇತುದಾರ ಪುಟ್ಟಣ್ಣ ಜಟ್ಟಿ ಮತ್ತು ಹೇಮಂತ್ ಜಟ್ಟಿ, ತಿರುಮಲೇಶ್ ಜಟ್ಟಿ ಅವರುಗಳಿಂದ ಅಚ್ಯುತ್ ತರಬೇತಿ ಪಡೆಯುತ್ತಿದ್ದಾರೆ.
ಮಹತ್ವದ ವಜ್ರಮುಷ್ಠಿ ಕಾಳಗ: ದಸರಾ ಮಹೋತ್ಸವದಲ್ಲಿ ನಡೆಯುವ ವಜ್ರಮುಷ್ಟಿ ಕಾಳಗಕ್ಕೆ ತನ್ನದೇ ಆದ ಮಹತ್ವವಿದ್ದು, ವಿಜಯದಶಮಿಯ ದಿನ ನಡೆಯುವ ಜಂಬೂ ಸವಾರಿಗೂ ಮೊದಲು ರಾಜ ಮನೆತನದವರ ಸಮ್ಮುಖದಲ್ಲಿ ಈ ಕಾಳಗ ನಡೆಯುತ್ತದೆ. ಸಂಪ್ರದಾಯದ ಉದ್ದೇಶದಿಂದ ನಡೆಯುವ ಈ ಕಾಳಗ ಕೆಲವೇ ಸೆಕೆಂಡುಗಳಲ್ಲಿ ಮುಗಿಯುತ್ತದೆ. ಆದರೂ, ಈ ಕಾಳಗವನ್ನು ವೀಕ್ಷಿಸಲು ಜನರ ಸಾಕಷ್ಟು ಸಂಖ್ಯೆಯಲ್ಲಿ ನೆರೆಯುತ್ತಾರೆ.
ನಾಲ್ವರು ಜಟ್ಟಿಗಳು: ಜಟ್ಟಿ ಜನಾಂಗಕ್ಕೆ ಸೇರಿದ ನಾಲ್ವರು ಪೈಲ್ವಾನರು ವಜ್ರಮುಷ್ಟಿ ಕಾಳಗ ಮಾಡುತ್ತಾರೆ. ಕೈಯಲ್ಲಿ ದಂತದ ನಖವನ್ನು ಧರಿಸಿ ಮಾಡುವ ಈ ಹೊಡೆದಾಟದಲ್ಲಿ ಯಾರಾದರೂ ಒಬ್ಬ ಜಟ್ಟಿಯ ತಲೆಯಲ್ಲಿ ರಕ್ತ ಸುರಿಯಲು ಆರಂಭವಾದ ತಕ್ಷಣ ಕಾಳಗವನ್ನು ಮುಕ್ತಾಯ ಮಾಡುವುದು ರೂಢಿಯಿಂದಲೂ ನಡೆದುಕೊಂಡು ಬಂದಿದೆ.
ಬೆಂಗಳೂರು, ಮೈಸೂರು, ಚನ್ನಪಟ್ಟಣ ಮತ್ತು ಚಾ.ನಗರದ ತಲಾ ಒಬ್ಬೊಬ್ಬ ಜಟ್ಟಿ ಈ ವಜ್ರಮುಷ್ಟಿ ಕಾಳಗದಲ್ಲಿ ಭಾಗವಹಿಸುವುದು ರೂಢಿ. ಈ ನಾಲ್ಕು ಊರುಗಳಿಂದ ಪ್ರತಿವರ್ಷ ಜಟ್ಟಿಗಳನ್ನು ಕಳುಹಿಸಲೇಬೇಕು. ಇದರಲ್ಲಿ ಭಾಗವಹಿಸುವವರು ಜಟ್ಟಿ ಜನಾಂಗದವರೇ ಆಗಬೇಕು.
ಜಟ್ಟಿಗಳಿಗೆ ತರಬೇತಿ: ದಸರಾ ಆರಂಭಕ್ಕೆ ಒಂದು ತಿಂಗಳು ಇರುವಾಗ ಆಯ್ಕೆ ಮಾಡಿ ತರಬೇತಿ ನೀಡಲು ಆರಂಭಿಸುತ್ತಾರೆ, ಕಾಳಗದ ನಡೆಗಳನ್ನು ಕಲಿಸಲಾಗುತ್ತದೆ. ಪ್ರತಿ ದಿನ ಬೆಳಿಗ್ಗೆ ತರಬೇತಿ ಇರುತ್ತದೆ, ಶನಿವಾರ-ಭಾನುವಾರ ದಿನಪೂರ್ತಿ ತರಬೇತಿ ನಡೆಯಲಿದ್ದು ಜಟ್ಟಿಯನ್ನು ಆಯ್ಕೆ ಮಾಡುವಾಗ ವಯಸ್ಸಿನ ಮಿತಿ ನೋಡುವುದಿಲ್ಲ. ಆರೋಗ್ಯದಿಂದ ಇರಬೇಕು. ದೈಹಿಕವಾಗಿ ಸದೃಢರಾಗಿರಬೇಕು, ರಾಜಮನೆತನದ ಅಂಗರಕ್ಷಕರಾಗಿರುವ ಜಟ್ಟಿ ಸಮುದಾಯದ ಶೌರ್ಯ, ತ್ಯಾಗ, ರಾಜರಿಗೆ ಒಳಿತಾಗಲೆಂಬ ಸಂಕೇತ ಈ ಜಟ್ಟಿ ಕಾಳಗವಾಗಿದೆ.
ಕೊರೊನಾ ಕರಿಛಾಯೆ ಇಲ್ಲದ ಈ ಬಾರಿ ದಸರಾ ಅದ್ಧೂರಿಯಾಗಿ ನಡೆಯುವ ಹಿನ್ನೆಲೆಯಲ್ಲಿ ಜಟ್ಟಿಗಳು ಕೂಡ ಸಂಭ್ರಮದಿಂದಲೇ ತಾಲೀಮು ನಡೆಸುತ್ತಿದ್ದಾರೆ, ಮೈ ನವಿರೇಳಿಸುವ ಕಾರ್ಯಕ್ರಮಕ್ಕೆ ಕೆಲವೇ ದಿನಗಳಲ್ಲಿ ಸಾಕ್ಷಿಯಾಗಲಿದ್ದಾರೆ
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…