ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿವತಿಯಿಂದ ವಿವಿಧ ದಲಿತ ಸಂಘಟನೆಗಳ ಮುಖ್ಯಸ್ಥರು ಮನು ಸ್ಮೃತಿ ಪುಟಗಳಿಗೆ ಬೆಂಕಿ ಹಚ್ಚುವ ಮೂಲಕ ‘ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ’ ಎಂಬ ಕಾರ್ಯಕ್ರಮವನ್ನು ನಡೆಸಿದರು.
ಭಾನುವಾರ ಬೆಳಿಗ್ಗೆ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾವಣೆಗೊಂಡ ದಸಂಸ ಕಾರ್ಯಕರ್ತರು, ಮನುಸ್ಮೃತಿಯ ಅಣತಿಯಂತೆ ಒಂದು ವರ್ಗದ ಜನರು ದೇಶವನ್ನು ಒಡೆದು ಆಳುವ ಮೂಲಕ ದಲಿತರ ಶೋಷಣೆ ನಡೆಸಿದ್ದಾರೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ, ಶಂಭುಲಿಂಗ ಸ್ವಾಮಿ, ಆಲಗೂಡು ಶಿವಕುಮಾರ್, ಚುಂಚನಹಳ್ಳಿ ಮಲ್ಲೇಶ್, ಭುಗತಹಳ್ಳಿ ಮಣಿಯಯ್ಯ, ಕಾರ್ಯ ಬಸವಣ್ಣ, ಜಗದೀಶ್ ಪಿರಿಯಾಪಟ್ಟಣ, ಜಗದೀಶ್, ಶಿವಬುದ್ದಿ, ಪುಟ್ಟಸ್ವಾಮಿ, ಕಲ್ಲಹಳ್ಳಿ ಕುಮಾರ್, ನಾರಾಯಣ್, ವರದಯ್ಯ, ಬಾಲಾಜಿ, ಮಂಜು ಶಂಕರಪುರ, ರಾಮಕೃಷ್ಣ, ಮಹೇಶ್, ಕೊತ್ತೇಗಾಲ ಸೋಮಣ್ಣ, ಶಿವಲಿಂಗಯ್ಯ, ಗಟ್ಟವಾಡಿ ಮಹೇಶ್, ಅಪ್ಸರ್, ನಾಗರಾಜು ಮುಂತಾದವರು ಭಾಗವಹಿಸಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…