ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ/ಬಾಲಕಿಯರ ಹಾಕಿ ಲೀಗ್ನ 4 ವಿಭಾಗದಲ್ಲಿ ‘ಮೈಸೂರು ವಿಭಾಗ’ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.
ನಗರದ ಹಾಕಿ ಟರ್ಫ್ ಮೈದಾನ(ಭಾರತೀಯ ಕ್ರೀಡಾ ಪ್ರಾಧಿಕಾರ)ದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಹಾಕಿ ಲೀಗ್ ಮಾದರಿಯ ಪಂದ್ಯದಲ್ಲಿ ಮೈಸೂರು ವಿಭಾಗ, ಬೆಂಗಳೂರು ವಿಭಾಗ, ಕಲಬುರ್ಗಿ ವಿಭಾಗ, ಬೆಳಗಾವಿ ವಿಭಾಗ ಹಾಗೂ ಎಸ್.ಎಸ್.ಕೂಡಿಗೆ ತಂಡ(ಪ್ರೌಢಶಾಲಾ ವಿಭಾಗದಲ್ಲಿ ಮಾತ್ರ) ಚಾಂಪಿಯನ್ ಪಟ್ಟಕ್ಕೆ ಸೆಣಸಾಟ ನಡೆಸಿತು.
17 ವರ್ಷ ವಯೋಮಿತಿಯೊಳಗಿನ ಪ್ರೌಢ ಶಾಲಾ ಬಾಲಕರ ವಿಭಾಗದ ಅಂತಿಮ ಫಲಿತಾಂಶದಲ್ಲಿ ಮೈಸೂರು ವಿಭಾಗ 12 ಅಂಕ ಪ್ರಥಮ ಸ್ಥಾನ ಪಡೆಯಿತು. ಕ್ರೀಡಾ ಶಾಲೆ ಕೂಡಿಗೆ 9 ಅಂಕ ದ್ವಿತೀಯ ಸ್ಥಾನ ಪಡೆದುಕೊಂಡಿತು. 17 ವರ್ಷ ವಯೋಮಿತಿಯೊಳಗಿನ ಪ್ರೌಢ ಶಾಲಾ ಬಾಲಕಿಯರ ವಿಭಾಗದ ಅಂತಿಮ ಫಲಿತಾಂಶದಲ್ಲಿ ಮೈಸೂರು ವಿಭಾಗ 12 ಅಂಕದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡರೆ ಕ್ರೀಡಾ ಶಾಲೆ ಕೂಡಿಗೆ 9 ಅಂಕ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು.
14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ಅಂತಿಮ ಫಲಿತಾಂಶದಲ್ಲಿ ಮೈಸೂರು ವಿಭಾಗ 9 ಅಂಕ ಪ್ರಥಮ ಸ್ಥಾನ ಪಡೆದುಕೊಂಡರೆ, ಬೆಳಗಾವಿ ವಿಭಾಗ 6 ಅಂಕ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು. ಮೈಸೂರು ವಿಭಾಗ ತಂಡ ೯ ಅಂಕದೊಂದಿಗೆ ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ನಾಗಿ ಹೊರಹೊಮ್ಮಿದರೆ, ಬೆಳಗಾವಿ ವಿಭಾಗ ತಂಡ ೬ ಅಂಕದೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿತು.
೭೨ ಆಟಗಾರರು ರಾಷ್ಟ್ರಮಟ್ಟಕ್ಕೆ ಆಯ್ಕೆ: ೪ ದಿನಗಳ ಕಾಲ ಲೀಗ್ ಮಾದರಿಯಲ್ಲಿ ನಡೆದ ಪಂದ್ಯದಲ್ಲಿ ೪ ವಿಭಾಗಗಳಲ್ಲಿ(ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರ/ಬಾಲಕಿಯರು) ಒಟ್ಟು ೭೨ ಆಟಗಾರರು ರಾಷ್ಟ್ರಮಟ್ಟದ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯದಲ್ಲಿ ಆಯ್ಕೆಯಾದ ಆಟಗಾರರು ಪಾಲ್ಗೊಳ್ಳಲಿದ್ದಾರೆ.
ಪ್ರಶಸ್ತಿ ವಿವರ: ನಾಲ್ಕು ವಿಭಾಗದ ವಿಜೇತ ತಂಡಕ್ಕೆ ಆಕರ್ಷಕ ಟ್ರೋಪಿ ನೀಡಿ ಗೌರವಿಸಲಾಯಿತು.17 ವರ್ಷ ವಯೋಮಿತಿ ಬಾಲಕರ ಬೆಳಗಾವಿ ತಂಡದ ರಾಜು,17 ವರ್ಷ ವಯೋಮಿತಿ ಬಾಲಕಿಯರ ಮೈಸೂರು ವಿಭಾಗದ ನಿತ್ಯ ರೂಬಿಣಿ,14 ವರ್ಷ ವಯೋಮಿತಿ ಬಾಲಕ ಮೈಸೂರು ವಿಭಾಗದ ಪ್ರೀತಮ್, 14 ವರ್ಷ ವಯೋಮಿತಿ ಬಾಲಕಿಯ ಮೈಸೂರು ವಿಭಾಗದ ಮನಸ್ವಿ ಉತ್ತಮ ಆಟಗಾರ ಪ್ರಶಸ್ತಿ ಪಡೆದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…