ಜಿಲ್ಲೆಗಳು

ಹಾಕಿ ಲೀಗ್‌: ‘ಮೈಸೂರು ವಿಭಾಗ’ ತಂಡ 4 ವಿಭಾಗದಲ್ಲಿ ಚಾಂಪಿಯನ್

ರಾಜ್ಯ ಮಟ್ಟದ ಹಾಕಿ ಪಂದ್ಯಾಟ/ ರಾಷ್ಟ್ರ ಮಟ್ಟಕ್ಕೆ 72 ಆಟಗಾರರ ಆಯ್ಕೆ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ/ಬಾಲಕಿಯರ ಹಾಕಿ ಲೀಗ್‌ನ 4 ವಿಭಾಗದಲ್ಲಿ ‘ಮೈಸೂರು ವಿಭಾಗ’ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.

ನಗರದ ಹಾಕಿ ಟರ್ಫ್ ಮೈದಾನ(ಭಾರತೀಯ ಕ್ರೀಡಾ ಪ್ರಾಧಿಕಾರ)ದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಹಾಕಿ ಲೀಗ್ ಮಾದರಿಯ ಪಂದ್ಯದಲ್ಲಿ ಮೈಸೂರು ವಿಭಾಗ, ಬೆಂಗಳೂರು ವಿಭಾಗ, ಕಲಬುರ್ಗಿ ವಿಭಾಗ, ಬೆಳಗಾವಿ ವಿಭಾಗ ಹಾಗೂ ಎಸ್.ಎಸ್.ಕೂಡಿಗೆ ತಂಡ(ಪ್ರೌಢಶಾಲಾ ವಿಭಾಗದಲ್ಲಿ ಮಾತ್ರ) ಚಾಂಪಿಯನ್ ಪಟ್ಟಕ್ಕೆ ಸೆಣಸಾಟ ನಡೆಸಿತು.

17 ವರ್ಷ ವಯೋಮಿತಿಯೊಳಗಿನ ಪ್ರೌಢ ಶಾಲಾ ಬಾಲಕರ ವಿಭಾಗದ ಅಂತಿಮ ಫಲಿತಾಂಶದಲ್ಲಿ ಮೈಸೂರು ವಿಭಾಗ 12 ಅಂಕ ಪ್ರಥಮ ಸ್ಥಾನ ಪಡೆಯಿತು. ಕ್ರೀಡಾ ಶಾಲೆ ಕೂಡಿಗೆ 9 ಅಂಕ ದ್ವಿತೀಯ ಸ್ಥಾನ ಪಡೆದುಕೊಂಡಿತು. 17 ವರ್ಷ ವಯೋಮಿತಿಯೊಳಗಿನ ಪ್ರೌಢ ಶಾಲಾ ಬಾಲಕಿಯರ ವಿಭಾಗದ ಅಂತಿಮ ಫಲಿತಾಂಶದಲ್ಲಿ ಮೈಸೂರು ವಿಭಾಗ 12 ಅಂಕದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡರೆ ಕ್ರೀಡಾ ಶಾಲೆ ಕೂಡಿಗೆ 9 ಅಂಕ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು.

14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ಅಂತಿಮ ಫಲಿತಾಂಶದಲ್ಲಿ ಮೈಸೂರು ವಿಭಾಗ 9 ಅಂಕ ಪ್ರಥಮ ಸ್ಥಾನ ಪಡೆದುಕೊಂಡರೆ, ಬೆಳಗಾವಿ ವಿಭಾಗ 6 ಅಂಕ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು. ಮೈಸೂರು ವಿಭಾಗ ತಂಡ ೯ ಅಂಕದೊಂದಿಗೆ ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ನಾಗಿ ಹೊರಹೊಮ್ಮಿದರೆ, ಬೆಳಗಾವಿ ವಿಭಾಗ ತಂಡ ೬ ಅಂಕದೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿತು.

೭೨ ಆಟಗಾರರು ರಾಷ್ಟ್ರಮಟ್ಟಕ್ಕೆ ಆಯ್ಕೆ: ೪ ದಿನಗಳ ಕಾಲ ಲೀಗ್ ಮಾದರಿಯಲ್ಲಿ ನಡೆದ ಪಂದ್ಯದಲ್ಲಿ ೪ ವಿಭಾಗಗಳಲ್ಲಿ(ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರ/ಬಾಲಕಿಯರು) ಒಟ್ಟು ೭೨ ಆಟಗಾರರು ರಾಷ್ಟ್ರಮಟ್ಟದ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯುವ‌ ರಾಷ್ಟ್ರ ಮಟ್ಟದ  ಪಂದ್ಯದಲ್ಲಿ ಆಯ್ಕೆಯಾದ ಆಟಗಾರರು ಪಾಲ್ಗೊಳ್ಳಲಿದ್ದಾರೆ.

ಪ್ರಶಸ್ತಿ ವಿವರ: ನಾಲ್ಕು ವಿಭಾಗದ ವಿಜೇತ ತಂಡಕ್ಕೆ ಆಕರ್ಷಕ ಟ್ರೋಪಿ ನೀಡಿ ಗೌರವಿಸಲಾಯಿತು.17 ವರ್ಷ ವಯೋಮಿತಿ ಬಾಲಕರ ಬೆಳಗಾವಿ ತಂಡದ ರಾಜು,17 ವರ್ಷ ವಯೋಮಿತಿ ಬಾಲಕಿಯರ ಮೈಸೂರು ವಿಭಾಗದ ನಿತ್ಯ ರೂಬಿಣಿ,14 ವರ್ಷ ವಯೋಮಿತಿ ಬಾಲಕ ಮೈಸೂರು ವಿಭಾಗದ ಪ್ರೀತಮ್, 14 ವರ್ಷ ವಯೋಮಿತಿ ಬಾಲಕಿಯ ಮೈಸೂರು ವಿಭಾಗದ ಮನಸ್ವಿ ಉತ್ತಮ ಆಟಗಾರ ಪ್ರಶಸ್ತಿ ಪಡೆದರು.

andolana

Recent Posts

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

31 seconds ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

7 mins ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

16 mins ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

21 mins ago

ಗೌರಿ-ಗಣೇಶ ಹಬ್ಬಕ್ಕೆ ಕಂಗೊಳಿಸುತ್ತಿರುವ ಗೌರಿ ಹೂವು

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ಕಾಡುಗಳಲ್ಲಿ ಅರಳಿರುವ ವಿಶಿಷ್ಟ ಗೌರಿ ಹೂವು ಮತ್ತಷ್ಟು ಮೆರುಗು ನೀಡುತ್ತಿದೆ.…

27 mins ago

ಕೋಟೆಯಲ್ಲಿ ಗೌರಿ-ಗಣೇಶ ಹಬ್ಬದ ಆಚರಣೆಗೆ ಸಜ್ಜು

ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…

34 mins ago