ಜಿಲ್ಲೆಗಳು

ಹಾಕಿ ಲೀಗ್‌: ‘ಮೈಸೂರು ವಿಭಾಗ’ ತಂಡ 4 ವಿಭಾಗದಲ್ಲಿ ಚಾಂಪಿಯನ್

ರಾಜ್ಯ ಮಟ್ಟದ ಹಾಕಿ ಪಂದ್ಯಾಟ/ ರಾಷ್ಟ್ರ ಮಟ್ಟಕ್ಕೆ 72 ಆಟಗಾರರ ಆಯ್ಕೆ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ/ಬಾಲಕಿಯರ ಹಾಕಿ ಲೀಗ್‌ನ 4 ವಿಭಾಗದಲ್ಲಿ ‘ಮೈಸೂರು ವಿಭಾಗ’ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.

ನಗರದ ಹಾಕಿ ಟರ್ಫ್ ಮೈದಾನ(ಭಾರತೀಯ ಕ್ರೀಡಾ ಪ್ರಾಧಿಕಾರ)ದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಹಾಕಿ ಲೀಗ್ ಮಾದರಿಯ ಪಂದ್ಯದಲ್ಲಿ ಮೈಸೂರು ವಿಭಾಗ, ಬೆಂಗಳೂರು ವಿಭಾಗ, ಕಲಬುರ್ಗಿ ವಿಭಾಗ, ಬೆಳಗಾವಿ ವಿಭಾಗ ಹಾಗೂ ಎಸ್.ಎಸ್.ಕೂಡಿಗೆ ತಂಡ(ಪ್ರೌಢಶಾಲಾ ವಿಭಾಗದಲ್ಲಿ ಮಾತ್ರ) ಚಾಂಪಿಯನ್ ಪಟ್ಟಕ್ಕೆ ಸೆಣಸಾಟ ನಡೆಸಿತು.

17 ವರ್ಷ ವಯೋಮಿತಿಯೊಳಗಿನ ಪ್ರೌಢ ಶಾಲಾ ಬಾಲಕರ ವಿಭಾಗದ ಅಂತಿಮ ಫಲಿತಾಂಶದಲ್ಲಿ ಮೈಸೂರು ವಿಭಾಗ 12 ಅಂಕ ಪ್ರಥಮ ಸ್ಥಾನ ಪಡೆಯಿತು. ಕ್ರೀಡಾ ಶಾಲೆ ಕೂಡಿಗೆ 9 ಅಂಕ ದ್ವಿತೀಯ ಸ್ಥಾನ ಪಡೆದುಕೊಂಡಿತು. 17 ವರ್ಷ ವಯೋಮಿತಿಯೊಳಗಿನ ಪ್ರೌಢ ಶಾಲಾ ಬಾಲಕಿಯರ ವಿಭಾಗದ ಅಂತಿಮ ಫಲಿತಾಂಶದಲ್ಲಿ ಮೈಸೂರು ವಿಭಾಗ 12 ಅಂಕದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡರೆ ಕ್ರೀಡಾ ಶಾಲೆ ಕೂಡಿಗೆ 9 ಅಂಕ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು.

14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ಅಂತಿಮ ಫಲಿತಾಂಶದಲ್ಲಿ ಮೈಸೂರು ವಿಭಾಗ 9 ಅಂಕ ಪ್ರಥಮ ಸ್ಥಾನ ಪಡೆದುಕೊಂಡರೆ, ಬೆಳಗಾವಿ ವಿಭಾಗ 6 ಅಂಕ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು. ಮೈಸೂರು ವಿಭಾಗ ತಂಡ ೯ ಅಂಕದೊಂದಿಗೆ ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ನಾಗಿ ಹೊರಹೊಮ್ಮಿದರೆ, ಬೆಳಗಾವಿ ವಿಭಾಗ ತಂಡ ೬ ಅಂಕದೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿತು.

೭೨ ಆಟಗಾರರು ರಾಷ್ಟ್ರಮಟ್ಟಕ್ಕೆ ಆಯ್ಕೆ: ೪ ದಿನಗಳ ಕಾಲ ಲೀಗ್ ಮಾದರಿಯಲ್ಲಿ ನಡೆದ ಪಂದ್ಯದಲ್ಲಿ ೪ ವಿಭಾಗಗಳಲ್ಲಿ(ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರ/ಬಾಲಕಿಯರು) ಒಟ್ಟು ೭೨ ಆಟಗಾರರು ರಾಷ್ಟ್ರಮಟ್ಟದ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯುವ‌ ರಾಷ್ಟ್ರ ಮಟ್ಟದ  ಪಂದ್ಯದಲ್ಲಿ ಆಯ್ಕೆಯಾದ ಆಟಗಾರರು ಪಾಲ್ಗೊಳ್ಳಲಿದ್ದಾರೆ.

ಪ್ರಶಸ್ತಿ ವಿವರ: ನಾಲ್ಕು ವಿಭಾಗದ ವಿಜೇತ ತಂಡಕ್ಕೆ ಆಕರ್ಷಕ ಟ್ರೋಪಿ ನೀಡಿ ಗೌರವಿಸಲಾಯಿತು.17 ವರ್ಷ ವಯೋಮಿತಿ ಬಾಲಕರ ಬೆಳಗಾವಿ ತಂಡದ ರಾಜು,17 ವರ್ಷ ವಯೋಮಿತಿ ಬಾಲಕಿಯರ ಮೈಸೂರು ವಿಭಾಗದ ನಿತ್ಯ ರೂಬಿಣಿ,14 ವರ್ಷ ವಯೋಮಿತಿ ಬಾಲಕ ಮೈಸೂರು ವಿಭಾಗದ ಪ್ರೀತಮ್, 14 ವರ್ಷ ವಯೋಮಿತಿ ಬಾಲಕಿಯ ಮೈಸೂರು ವಿಭಾಗದ ಮನಸ್ವಿ ಉತ್ತಮ ಆಟಗಾರ ಪ್ರಶಸ್ತಿ ಪಡೆದರು.

andolana

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

42 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

46 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

53 mins ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

59 mins ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago