ಜಿಲ್ಲೆಗಳು

ಬೀದಿ ದೀಪ ಆರಿಸಿ ಡಿಡಿ ಕೇಸ್ ಹಿಡಿದ ಸಂಚಾರ ಪೊಲೀಸರು…!

ಮೈಸೂರು: ನಗರದ ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜು ಬಳಿ ಕೆ.ಆರ್. ಸಂಚಾರ ವಿಭಾಗದ ಪೊಲೀಸರು ಶನಿವಾರ ರಾತ್ರಿ ಡ್ರಂಕನ್ ಅಂಡ್ ಡ್ರೈವ್ ತಪಾಸಣೆ ವೇಳೆ ಬೀದಿದೀಪ ನಂದಿಸಿ ಕಾರ್ಯಾಚರಣೆ ನಡೆಸಿರುವ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾಗರಿಕರೊಬ್ಬರು ಪೊಲೀಸರು ಆರಿಸಿದ್ದ ಬೀದಿದೀಪಗಳನ್ನು ಪುನಃ ಹೊತ್ತಿಸಿದರೂ ಮೂರೇ ನಿಮಿಷಗಳಲ್ಲೇ ಮತ್ತೆ ನಂದಿಸಿ ತಪಾಸಣೆ ನಡೆಸಿದುದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಿಂದ ಮಧುವನ ಕಾಮತ್ ಹೋಟೆಲ್ ತನಕ ಬೀದಿ ದೀಪ ಆಫ್ ಮಾಡಿ ಕತ್ತಲೆಯಲ್ಲಿ ನಿಂತು ಡ್ರಂಕನ್ ಅಂಡ್ ಡ್ರೈವ್ ತಪಾಸಣೆ ಮಾಡಿದ್ದಾರೆ. ತಾವು ತಪಾಸಣೆ ಮಾಡುವುದು ವಾಹನ ಸಂಚಾರಿಗಳಿಗೆ ಗೊತ್ತಾಗಬಾರದೆಂಬ ಉದ್ದೇಶ ಈ ರೀತಿ ಮಾಡಿದ್ದಾರೆ ಎಂಬುದಾಗಿ ಬೀದಿದೀಪ ಹೊತ್ತಿಸಿ ಸ್ಥಳದಲ್ಲಿಯೇ ನಿಂತು ನೋಡಿದ ನಾಗರಿಕ ತಾವು ಚಿತ್ರೀಕರಿಸಿರುವ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಕಳೆದ ಜೂನ್ ತಿಂಗಳಲ್ಲಿ ಮೈಸೂರಿನಲ್ಲಿ ನಡೆದಿದ್ದ ವಿಶ್ವ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲು ಆಗಮಿಸಿದ್ದ ವೇಳೆ ಊಟಿ ರಸ್ತೆಯುದ್ದಕ್ಕೂ ಹೊಸದಾಗಿ ಬೀದಿದೀಪಗಳನ್ನು ಅಳವಡಿಸಲಾಗಿತು. ಶನಿವಾರ ಡಿಡಿ ಕೇಸ್ ಹಾಕುವಾಗ ಈ ಬೀದಿ ದೀಪಗಳ ಸೌಲಭ್ಯವಿಲ್ಲದೆ ವಾಹನ ಸಂಚಾರಿಗಳು ಕತ್ತಲೆಯಲ್ಲೇ ಓಡಾಡುವಂತಾಯಿತು. ರಾತ್ರಿ ೯ ಗಂಟೆಗೆ ಆರಂಭವಾದ ಡಿಡಿ ತಪಾಸಣೆಯು ಮಧ್ಯರಾತ್ರಿ ೧೨ ಗಂಟೆಯ ತನಕವೂ ನಡೆದಿದೆ. ಅಷ್ಟೂ ಸಮಯ ಬೀದಿದೀಪ ನಂದಿಸಲಾಗಿತ್ತು ಎಂದು ವೀಡಿಯೋ ಮಾಡಿದ ನಾಗರಿಕರು ‘ಆಂದೋಲನ’ಕ್ಕೆ ತಿಳಿಸಿದ್ದಾರೆ.

andolanait

Recent Posts

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

3 mins ago

ಓದುಗರ ಪತ್ರ: ಗೃಹ ಸಚಿವರೇ ಇತ್ತಲೂ ಗಮನಹರಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…

1 hour ago

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…

1 hour ago

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…

1 hour ago

ಓದುಗರ ಪತ್ರ: ಬಂಡಿಪಾಳ್ಯದಲ್ಲಿ ಅಗತ್ಯ ಶೌಚಾಲಯಗಳನ್ನು ನಿರ್ಮಿಸಿ

ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…

1 hour ago

ಕೊಳೆಗೇರಿ ಮಕ್ಕಳ ಬದುಕು ರೂಪಿಸುವ ‘ಖೇಲ್ ಘರ್’ ಎಂಬ ಆಟದ ಮನೆ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ೧೯೯೬ರಲ್ಲಿ ‘ಪಾಲಕ್ ನೀತಿ ಪರಿವಾರ್’ ಎಂಬ ಸರ್ಕಾರೇತರ ಸಂಸ್ಥೆಯಡಿ ‘ಈ ಮನೆ’ ಆರಂಭ ಪುಣೆಯ…

4 hours ago