ಜಿಲ್ಲೆಗಳು

ಕಬಿನಿ ಪ್ರವಾಸಿಗರಿದ್ದ ಜೀಪ್ ಮೇಲೆ ಕಾಡಾನೆ ದಾಳಿ

ಮೈಸೂರು: ಎಚ್.ಡಿ. ಕೋಟೆಯ ಕಬಿನಿ ಹಿನ್ನೀರು ಪ್ರದೇಶದ ಸಫಾರಿ ಹಾದಿಯಲ್ಲಿ ಸಲಗವೊಂದು ಪ್ರವಾಸಿಗರ ವಾಹನವನ್ನು ಅಟ್ಟಿಸಿಕೊಂಡು ಬರುತ್ತಿರುವ ಘಟನೆ ವೈರಲ್ ಆಗಿದೆ.

ಗುರುವಾರ ಬೆಳಗ್ಗಿನ ಸಫಾರಿ ವೇಳೆ ಈ ಘಟನೆ ನಡೆದಿದೆ. ಜಂಗಲ್ ಲಾಡ್ಜಸ್ಗೆ ಸೇರಿದ ಈ  ವಾಹನದ ಚಾಲಕ ಪ್ರಕಾಶ್ ಅನುಭವಿಯಾಗಿದ್ದರಿಂದ ಸಮಯ ಪ್ರಜ್ಞೆ ಮೆರೆದು ಚಾಕಚಕ್ಯತೆಯಿಂದ ವಾಹನ ಚಲಾಯಿಸಿ ಅಪಾಯದಿಂದ ಪಾರಾಗಿದ್ದಾರೆ.

ಯಾವುದೋ ಕಾರಣಕ್ಕೆ ಕೋಪಗೊಂಡ ಸಲಗವು ಸಫಾರಿ ಹಾದಿಯಲ್ಲಿ ಬರುತ್ತಿದ್ದ ಜೀಪಿನ ಮೇಲೆ ದಾಳಿ ಮಾಡಲು ಮುಂದಾಗಿದೆ. ಮುಂದಿನಿಂದ ಅಟ್ಟಿಸಿಕೊಂಡು ಬರುತ್ತಿದ್ದ ಸಲಗವನ್ನುಕಂಡ ಚಾಲಕ ರಿವರ್ಸ್ ಡ್ರೈವ್ ಮಾಡಿಕೊಂಡು ಪಾರಾಗುವ ಪ್ರಯತ್ನ ನಡೆಸಿದ್ದಾರೆ.

ಸುಮಾರು 50-60 ಮೀಟರ್ ಗಳವರೆಗೆ ಸಲಗವು ಜೀಪನ್ನು ಅಟ್ಟಿಸಿಕೊಂಡು ಬಂದಿದೆ. ಕೊನೆಯಲ್ಲಿ  ಹಿಂದಕ್ಕೆ ಚಲಿಸಲಾಗದೆ ನಿಂತ ವಾಹನದ ಮೇಲೆ ದಾಳಿ ಮಾಡದೆ ಸಲಗ ಕಾಡಿನತ್ತ ಓಡಿ ಹೋಗಿದೆ. ಸ್ವಲ್ಪದರಲ್ಲೇ ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ. ಜೀಪು ಚಾಲಕನ ದೈರ್ಯಕ್ಕೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ. ಡಿ.ಬಿ.ಕುಪ್ಪೆ ಅರಣ್ಯ ವಲಯದಲ್ಲಿ ನಡೆದ ಈ ಘಟನೆಯನ್ನು ವಲಯ ಅರಣ್ಯಾಧಿಕಾರಿ ಸಿದ್ದರಾಜು ಮತ್ತು ಕಾರಾಪುರ ಜಂಗಲ್ ಲಾಡ್ಜಸ್ ವ್ಯವಸ್ಥಾಪಕ ಅನಿಕೇತನ್ ಈ ಘಟನೆಯನ್ನು ಖಚಿತಪಡಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

4 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

4 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

4 hours ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

4 hours ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

5 hours ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

5 hours ago