ಮೈಸೂರು: ಎಚ್.ಡಿ. ಕೋಟೆಯ ಕಬಿನಿ ಹಿನ್ನೀರು ಪ್ರದೇಶದ ಸಫಾರಿ ಹಾದಿಯಲ್ಲಿ ಸಲಗವೊಂದು ಪ್ರವಾಸಿಗರ ವಾಹನವನ್ನು ಅಟ್ಟಿಸಿಕೊಂಡು ಬರುತ್ತಿರುವ ಘಟನೆ ವೈರಲ್ ಆಗಿದೆ.
ಗುರುವಾರ ಬೆಳಗ್ಗಿನ ಸಫಾರಿ ವೇಳೆ ಈ ಘಟನೆ ನಡೆದಿದೆ. ಜಂಗಲ್ ಲಾಡ್ಜಸ್ಗೆ ಸೇರಿದ ಈ ವಾಹನದ ಚಾಲಕ ಪ್ರಕಾಶ್ ಅನುಭವಿಯಾಗಿದ್ದರಿಂದ ಸಮಯ ಪ್ರಜ್ಞೆ ಮೆರೆದು ಚಾಕಚಕ್ಯತೆಯಿಂದ ವಾಹನ ಚಲಾಯಿಸಿ ಅಪಾಯದಿಂದ ಪಾರಾಗಿದ್ದಾರೆ.
ಯಾವುದೋ ಕಾರಣಕ್ಕೆ ಕೋಪಗೊಂಡ ಸಲಗವು ಸಫಾರಿ ಹಾದಿಯಲ್ಲಿ ಬರುತ್ತಿದ್ದ ಜೀಪಿನ ಮೇಲೆ ದಾಳಿ ಮಾಡಲು ಮುಂದಾಗಿದೆ. ಮುಂದಿನಿಂದ ಅಟ್ಟಿಸಿಕೊಂಡು ಬರುತ್ತಿದ್ದ ಸಲಗವನ್ನುಕಂಡ ಚಾಲಕ ರಿವರ್ಸ್ ಡ್ರೈವ್ ಮಾಡಿಕೊಂಡು ಪಾರಾಗುವ ಪ್ರಯತ್ನ ನಡೆಸಿದ್ದಾರೆ.
ಸುಮಾರು 50-60 ಮೀಟರ್ ಗಳವರೆಗೆ ಸಲಗವು ಜೀಪನ್ನು ಅಟ್ಟಿಸಿಕೊಂಡು ಬಂದಿದೆ. ಕೊನೆಯಲ್ಲಿ ಹಿಂದಕ್ಕೆ ಚಲಿಸಲಾಗದೆ ನಿಂತ ವಾಹನದ ಮೇಲೆ ದಾಳಿ ಮಾಡದೆ ಸಲಗ ಕಾಡಿನತ್ತ ಓಡಿ ಹೋಗಿದೆ. ಸ್ವಲ್ಪದರಲ್ಲೇ ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ. ಜೀಪು ಚಾಲಕನ ದೈರ್ಯಕ್ಕೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ. ಡಿ.ಬಿ.ಕುಪ್ಪೆ ಅರಣ್ಯ ವಲಯದಲ್ಲಿ ನಡೆದ ಈ ಘಟನೆಯನ್ನು ವಲಯ ಅರಣ್ಯಾಧಿಕಾರಿ ಸಿದ್ದರಾಜು ಮತ್ತು ಕಾರಾಪುರ ಜಂಗಲ್ ಲಾಡ್ಜಸ್ ವ್ಯವಸ್ಥಾಪಕ ಅನಿಕೇತನ್ ಈ ಘಟನೆಯನ್ನು ಖಚಿತಪಡಿಸಿದ್ದಾರೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…