ಜಿಲ್ಲೆಗಳು

ಕಬಿನಿ ಪ್ರವಾಸಿಗರಿದ್ದ ಜೀಪ್ ಮೇಲೆ ಕಾಡಾನೆ ದಾಳಿ

ಮೈಸೂರು: ಎಚ್.ಡಿ. ಕೋಟೆಯ ಕಬಿನಿ ಹಿನ್ನೀರು ಪ್ರದೇಶದ ಸಫಾರಿ ಹಾದಿಯಲ್ಲಿ ಸಲಗವೊಂದು ಪ್ರವಾಸಿಗರ ವಾಹನವನ್ನು ಅಟ್ಟಿಸಿಕೊಂಡು ಬರುತ್ತಿರುವ ಘಟನೆ ವೈರಲ್ ಆಗಿದೆ.

ಗುರುವಾರ ಬೆಳಗ್ಗಿನ ಸಫಾರಿ ವೇಳೆ ಈ ಘಟನೆ ನಡೆದಿದೆ. ಜಂಗಲ್ ಲಾಡ್ಜಸ್ಗೆ ಸೇರಿದ ಈ  ವಾಹನದ ಚಾಲಕ ಪ್ರಕಾಶ್ ಅನುಭವಿಯಾಗಿದ್ದರಿಂದ ಸಮಯ ಪ್ರಜ್ಞೆ ಮೆರೆದು ಚಾಕಚಕ್ಯತೆಯಿಂದ ವಾಹನ ಚಲಾಯಿಸಿ ಅಪಾಯದಿಂದ ಪಾರಾಗಿದ್ದಾರೆ.

ಯಾವುದೋ ಕಾರಣಕ್ಕೆ ಕೋಪಗೊಂಡ ಸಲಗವು ಸಫಾರಿ ಹಾದಿಯಲ್ಲಿ ಬರುತ್ತಿದ್ದ ಜೀಪಿನ ಮೇಲೆ ದಾಳಿ ಮಾಡಲು ಮುಂದಾಗಿದೆ. ಮುಂದಿನಿಂದ ಅಟ್ಟಿಸಿಕೊಂಡು ಬರುತ್ತಿದ್ದ ಸಲಗವನ್ನುಕಂಡ ಚಾಲಕ ರಿವರ್ಸ್ ಡ್ರೈವ್ ಮಾಡಿಕೊಂಡು ಪಾರಾಗುವ ಪ್ರಯತ್ನ ನಡೆಸಿದ್ದಾರೆ.

ಸುಮಾರು 50-60 ಮೀಟರ್ ಗಳವರೆಗೆ ಸಲಗವು ಜೀಪನ್ನು ಅಟ್ಟಿಸಿಕೊಂಡು ಬಂದಿದೆ. ಕೊನೆಯಲ್ಲಿ  ಹಿಂದಕ್ಕೆ ಚಲಿಸಲಾಗದೆ ನಿಂತ ವಾಹನದ ಮೇಲೆ ದಾಳಿ ಮಾಡದೆ ಸಲಗ ಕಾಡಿನತ್ತ ಓಡಿ ಹೋಗಿದೆ. ಸ್ವಲ್ಪದರಲ್ಲೇ ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ. ಜೀಪು ಚಾಲಕನ ದೈರ್ಯಕ್ಕೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ. ಡಿ.ಬಿ.ಕುಪ್ಪೆ ಅರಣ್ಯ ವಲಯದಲ್ಲಿ ನಡೆದ ಈ ಘಟನೆಯನ್ನು ವಲಯ ಅರಣ್ಯಾಧಿಕಾರಿ ಸಿದ್ದರಾಜು ಮತ್ತು ಕಾರಾಪುರ ಜಂಗಲ್ ಲಾಡ್ಜಸ್ ವ್ಯವಸ್ಥಾಪಕ ಅನಿಕೇತನ್ ಈ ಘಟನೆಯನ್ನು ಖಚಿತಪಡಿಸಿದ್ದಾರೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago