ಮೈಸೂರು: ಎಚ್.ಡಿ. ಕೋಟೆಯ ಕಬಿನಿ ಹಿನ್ನೀರು ಪ್ರದೇಶದ ಸಫಾರಿ ಹಾದಿಯಲ್ಲಿ ಸಲಗವೊಂದು ಪ್ರವಾಸಿಗರ ವಾಹನವನ್ನು ಅಟ್ಟಿಸಿಕೊಂಡು ಬರುತ್ತಿರುವ ಘಟನೆ ವೈರಲ್ ಆಗಿದೆ.
ಗುರುವಾರ ಬೆಳಗ್ಗಿನ ಸಫಾರಿ ವೇಳೆ ಈ ಘಟನೆ ನಡೆದಿದೆ. ಜಂಗಲ್ ಲಾಡ್ಜಸ್ಗೆ ಸೇರಿದ ಈ ವಾಹನದ ಚಾಲಕ ಪ್ರಕಾಶ್ ಅನುಭವಿಯಾಗಿದ್ದರಿಂದ ಸಮಯ ಪ್ರಜ್ಞೆ ಮೆರೆದು ಚಾಕಚಕ್ಯತೆಯಿಂದ ವಾಹನ ಚಲಾಯಿಸಿ ಅಪಾಯದಿಂದ ಪಾರಾಗಿದ್ದಾರೆ.
ಯಾವುದೋ ಕಾರಣಕ್ಕೆ ಕೋಪಗೊಂಡ ಸಲಗವು ಸಫಾರಿ ಹಾದಿಯಲ್ಲಿ ಬರುತ್ತಿದ್ದ ಜೀಪಿನ ಮೇಲೆ ದಾಳಿ ಮಾಡಲು ಮುಂದಾಗಿದೆ. ಮುಂದಿನಿಂದ ಅಟ್ಟಿಸಿಕೊಂಡು ಬರುತ್ತಿದ್ದ ಸಲಗವನ್ನುಕಂಡ ಚಾಲಕ ರಿವರ್ಸ್ ಡ್ರೈವ್ ಮಾಡಿಕೊಂಡು ಪಾರಾಗುವ ಪ್ರಯತ್ನ ನಡೆಸಿದ್ದಾರೆ.
ಸುಮಾರು 50-60 ಮೀಟರ್ ಗಳವರೆಗೆ ಸಲಗವು ಜೀಪನ್ನು ಅಟ್ಟಿಸಿಕೊಂಡು ಬಂದಿದೆ. ಕೊನೆಯಲ್ಲಿ ಹಿಂದಕ್ಕೆ ಚಲಿಸಲಾಗದೆ ನಿಂತ ವಾಹನದ ಮೇಲೆ ದಾಳಿ ಮಾಡದೆ ಸಲಗ ಕಾಡಿನತ್ತ ಓಡಿ ಹೋಗಿದೆ. ಸ್ವಲ್ಪದರಲ್ಲೇ ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ. ಜೀಪು ಚಾಲಕನ ದೈರ್ಯಕ್ಕೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ. ಡಿ.ಬಿ.ಕುಪ್ಪೆ ಅರಣ್ಯ ವಲಯದಲ್ಲಿ ನಡೆದ ಈ ಘಟನೆಯನ್ನು ವಲಯ ಅರಣ್ಯಾಧಿಕಾರಿ ಸಿದ್ದರಾಜು ಮತ್ತು ಕಾರಾಪುರ ಜಂಗಲ್ ಲಾಡ್ಜಸ್ ವ್ಯವಸ್ಥಾಪಕ ಅನಿಕೇತನ್ ಈ ಘಟನೆಯನ್ನು ಖಚಿತಪಡಿಸಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…