ಮೈಸೂರು: ಎಚ್.ಡಿ. ಕೋಟೆಯ ಕಬಿನಿ ಹಿನ್ನೀರು ಪ್ರದೇಶದ ಸಫಾರಿ ಹಾದಿಯಲ್ಲಿ ಸಲಗವೊಂದು ಪ್ರವಾಸಿಗರ ವಾಹನವನ್ನು ಅಟ್ಟಿಸಿಕೊಂಡು ಬರುತ್ತಿರುವ ಘಟನೆ ವೈರಲ್ ಆಗಿದೆ.
ಗುರುವಾರ ಬೆಳಗ್ಗಿನ ಸಫಾರಿ ವೇಳೆ ಈ ಘಟನೆ ನಡೆದಿದೆ. ಜಂಗಲ್ ಲಾಡ್ಜಸ್ಗೆ ಸೇರಿದ ಈ ವಾಹನದ ಚಾಲಕ ಪ್ರಕಾಶ್ ಅನುಭವಿಯಾಗಿದ್ದರಿಂದ ಸಮಯ ಪ್ರಜ್ಞೆ ಮೆರೆದು ಚಾಕಚಕ್ಯತೆಯಿಂದ ವಾಹನ ಚಲಾಯಿಸಿ ಅಪಾಯದಿಂದ ಪಾರಾಗಿದ್ದಾರೆ.
ಯಾವುದೋ ಕಾರಣಕ್ಕೆ ಕೋಪಗೊಂಡ ಸಲಗವು ಸಫಾರಿ ಹಾದಿಯಲ್ಲಿ ಬರುತ್ತಿದ್ದ ಜೀಪಿನ ಮೇಲೆ ದಾಳಿ ಮಾಡಲು ಮುಂದಾಗಿದೆ. ಮುಂದಿನಿಂದ ಅಟ್ಟಿಸಿಕೊಂಡು ಬರುತ್ತಿದ್ದ ಸಲಗವನ್ನುಕಂಡ ಚಾಲಕ ರಿವರ್ಸ್ ಡ್ರೈವ್ ಮಾಡಿಕೊಂಡು ಪಾರಾಗುವ ಪ್ರಯತ್ನ ನಡೆಸಿದ್ದಾರೆ.
ಸುಮಾರು 50-60 ಮೀಟರ್ ಗಳವರೆಗೆ ಸಲಗವು ಜೀಪನ್ನು ಅಟ್ಟಿಸಿಕೊಂಡು ಬಂದಿದೆ. ಕೊನೆಯಲ್ಲಿ ಹಿಂದಕ್ಕೆ ಚಲಿಸಲಾಗದೆ ನಿಂತ ವಾಹನದ ಮೇಲೆ ದಾಳಿ ಮಾಡದೆ ಸಲಗ ಕಾಡಿನತ್ತ ಓಡಿ ಹೋಗಿದೆ. ಸ್ವಲ್ಪದರಲ್ಲೇ ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ. ಜೀಪು ಚಾಲಕನ ದೈರ್ಯಕ್ಕೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ. ಡಿ.ಬಿ.ಕುಪ್ಪೆ ಅರಣ್ಯ ವಲಯದಲ್ಲಿ ನಡೆದ ಈ ಘಟನೆಯನ್ನು ವಲಯ ಅರಣ್ಯಾಧಿಕಾರಿ ಸಿದ್ದರಾಜು ಮತ್ತು ಕಾರಾಪುರ ಜಂಗಲ್ ಲಾಡ್ಜಸ್ ವ್ಯವಸ್ಥಾಪಕ ಅನಿಕೇತನ್ ಈ ಘಟನೆಯನ್ನು ಖಚಿತಪಡಿಸಿದ್ದಾರೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…