ಜಿಲ್ಲೆಗಳು

ಮೈಸೂರಲ್ಲಿ ಕಂಡಲ್ಲಿ ಕಸ ಹಾಕಿದರೆ ದಂಡ

ಇಂದಿನಿಂದಲೇ ಜಾರಿಗೆ ನಗರಪಾಲಿಕೆ ಒಪ್ಪಿಗೆ: ಘನ ತ್ಯಾಜ್ಯ ನಿರ್ವಹಣೆಗೆ ವಾರಣಾಸಿ ಮಾದರಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವುದಕ್ಕೆ ಕಡಿವಾಣ ಹಾಕುವ ಜತೆಗೆ, ಘನತ್ಯಾಜ್ಯ ವಸ್ತು ನಿರ್ವಹಣೆಗೆ ಸಹಕರಿಸದೆ ಇರುವ ಸಾರ್ವಜನಿಕರು, ಉದ್ದಿಮೆದಾರರಿಗೆ ಛಾಟಿ ಬೀಸಲು ನಗರಪಾಲಿಕೆ ಮುಂದಾಗಿದ್ದು, ತತಕ್ಷಣದಿಂದಲೇ ದಂಡ ವಿಧಿಸುವ ಕಾರ್ಯಕ್ಕೆ ಕೌನ್ಸಿಲ್ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು. ಅಲ್ಲದೇ ಘನ ತ್ಯಾಜ್ಯವನ್ನು ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದ ಮಾದರಿಯಲ್ಲಿ ನಿರ್ವಹಣೆ ಮಾಡಲು ಮುಂದಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮಾವಳಿಗಳು-೨೦೧೬ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಹಾಪೌರ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ಮಂಡಿಸಿದ್ದ ವಿಷಯಕ್ಕೆ ಒಪ್ಪಿಗೆ ದೊರೆತಿರುವುದರಿಂದ ಶುಕ್ರವಾರದಿಂದಲೇ ಕಾರ್ಯರೂಪಕ್ಕೆ ಬರಲಿದೆ. ಇದಲ್ಲದೆ,ಪ್ಲಾಸ್ಟಿಕ್ ಬಳಕೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ದಂಡ ಶುಲ್ಕ ವಿಧಿಸುವುದಕ್ಕೂ ಒಪ್ಪಿಗೆ ನೀಡಿರುವುದರಿಂದ ಸಾರ್ವಜನಿಕರು ಬೇಕಾಬಿಟ್ಟಿಯಾಗಿ ಪ್ಲಾಸ್ಟಿಕ್ ಬಳಸಿದರೆ ದಂಡ ತೆರಬೇಕಾಗುತ್ತದೆ.

ಪ್ಲಾಸ್ಟಿಕ್ ಮೇಲೆ ನಿಗಾ

ದಪ್ಪದ ಯಾವುದೇ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ,ಪ್ಲಾಸ್ಟಿಕ್ ತೋರಣ, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್,ಥರ್ಮಾಕೋಲ್, ಪ್ಲಾಸ್ಟಿಕ್ ಮೈಕ್ರೋಬೀಡ್‌ನಿಂದ ತಯಾರಾಗುವ ಇತರೆ ವಸ್ತುಗಳನ್ನು ತಯಾರಿಸುವ, ಸರಬರಾಜು, ಸಂಗ್ರಹಣೆ, ಮಾರಾಟ, ವಿತರಣೆ ಮಾಡುವವರಿಗೆ ದಂಡ ಹಾಕಲಾಗುತ್ತದೆ.


ಯಾವ್ಯಾವುದಕ್ಕೆ ಎಷ್ಟೆಷ್ಟು ದಂಡ:

ಯಾವುದಕ್ಕೆ? ಮೊದಲ ಬಾರಿ ೨ನೇ ಬಾರಿ
ಸಾರ್ವಜನಿಕ ಸ್ಥಳಗಳಲ್ಲಿ ಕಸ ೫೦೦ ರೂ. ೧,೦೦೦ ರೂ.

ತ್ಯಾಜ್ಯ ವಿಂಗಡಿಸದಿದ್ದರೆ ೨೦೦ ರೂ. ೫೦೦ ರೂ.

ವಾಣಿಜ್ಯ ಉದ್ದಿಮೆದಾರರಿಗೆ ೫೦೦ ರೂ. ೧,೦೦೦ ರೂ.

ದ್ರವ ತ್ಯಾಜ್ಯ ೫೦೦ ರೂ. ೧,೦೦೦ ರೂ.

ಪ್ರಾಣಿಜನ್ಯ ತ್ಯಾಜ್ಯ ೫೦೦ ರೂ, ೧,೦೦೦ ರೂ.

ಕಟ್ಟಡ ತ್ಯಾಜ್ಯ ೫,೦೦೦ ರೂ. ೧೦,೦೦೦ ರೂ.

ಚರಂಡಿಗಳಿಗೆ ತ್ಯಾಜ್ಯ ೫೦೦ರೂ, ೧,೦೦೦ ರೂ.

ತ್ಯಾಜ್ಯ ಸುಟ್ಟರೆ ೨೦೦ ರೂ. ೫೦೦ ರೂ.

ಪ್ಲಾಸ್ಟಿಕ್ ಸುಟ್ಟರೆ ೫೦೦ರೂ, ೧,೦೦೦ ರೂ.

ಇ ತ್ಯಾಜ್ಯ ಸುಟ್ಟರೆ ೧,೦೦೦ ರೂ. ೫,೦೦೦ ರೂ.

ತ್ಯಾಜ್ಯ ಸಂಸ್ಕರಿಸದಿದ್ದಲ್ಲಿ ೨೦,೦೦೦ ರೂ. ೫೦,೦೦೦ ರೂ.

(ಹಾಸ್ಟೆಲ್, ರೆಸ್ಟೋರೆಂಟ್,ವಿದ್ಯಾಸಂಸ್ಥೆಗಳು, ಕಲ್ಯಾಣಮಂಟಪಗಳು, ಮಾಲ್‌ಗಳು, ಸರ್ಕಾರಿ ಕಚೇರಿಗಳು, ವಾಣಿಜ್ಯ ಕಟ್ಟಡಗಳಿಗೆ)

 

andolanait

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

1 hour ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

4 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

5 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

5 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

6 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

6 hours ago