ಜಿಲ್ಲೆಗಳು

ಮೈಸೂರಲ್ಲಿ ಕಂಡಲ್ಲಿ ಕಸ ಹಾಕಿದರೆ ದಂಡ

ಇಂದಿನಿಂದಲೇ ಜಾರಿಗೆ ನಗರಪಾಲಿಕೆ ಒಪ್ಪಿಗೆ: ಘನ ತ್ಯಾಜ್ಯ ನಿರ್ವಹಣೆಗೆ ವಾರಣಾಸಿ ಮಾದರಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವುದಕ್ಕೆ ಕಡಿವಾಣ ಹಾಕುವ ಜತೆಗೆ, ಘನತ್ಯಾಜ್ಯ ವಸ್ತು ನಿರ್ವಹಣೆಗೆ ಸಹಕರಿಸದೆ ಇರುವ ಸಾರ್ವಜನಿಕರು, ಉದ್ದಿಮೆದಾರರಿಗೆ ಛಾಟಿ ಬೀಸಲು ನಗರಪಾಲಿಕೆ ಮುಂದಾಗಿದ್ದು, ತತಕ್ಷಣದಿಂದಲೇ ದಂಡ ವಿಧಿಸುವ ಕಾರ್ಯಕ್ಕೆ ಕೌನ್ಸಿಲ್ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು. ಅಲ್ಲದೇ ಘನ ತ್ಯಾಜ್ಯವನ್ನು ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದ ಮಾದರಿಯಲ್ಲಿ ನಿರ್ವಹಣೆ ಮಾಡಲು ಮುಂದಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮಾವಳಿಗಳು-೨೦೧೬ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಹಾಪೌರ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ಮಂಡಿಸಿದ್ದ ವಿಷಯಕ್ಕೆ ಒಪ್ಪಿಗೆ ದೊರೆತಿರುವುದರಿಂದ ಶುಕ್ರವಾರದಿಂದಲೇ ಕಾರ್ಯರೂಪಕ್ಕೆ ಬರಲಿದೆ. ಇದಲ್ಲದೆ,ಪ್ಲಾಸ್ಟಿಕ್ ಬಳಕೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ದಂಡ ಶುಲ್ಕ ವಿಧಿಸುವುದಕ್ಕೂ ಒಪ್ಪಿಗೆ ನೀಡಿರುವುದರಿಂದ ಸಾರ್ವಜನಿಕರು ಬೇಕಾಬಿಟ್ಟಿಯಾಗಿ ಪ್ಲಾಸ್ಟಿಕ್ ಬಳಸಿದರೆ ದಂಡ ತೆರಬೇಕಾಗುತ್ತದೆ.

ಪ್ಲಾಸ್ಟಿಕ್ ಮೇಲೆ ನಿಗಾ

ದಪ್ಪದ ಯಾವುದೇ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ,ಪ್ಲಾಸ್ಟಿಕ್ ತೋರಣ, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್,ಥರ್ಮಾಕೋಲ್, ಪ್ಲಾಸ್ಟಿಕ್ ಮೈಕ್ರೋಬೀಡ್‌ನಿಂದ ತಯಾರಾಗುವ ಇತರೆ ವಸ್ತುಗಳನ್ನು ತಯಾರಿಸುವ, ಸರಬರಾಜು, ಸಂಗ್ರಹಣೆ, ಮಾರಾಟ, ವಿತರಣೆ ಮಾಡುವವರಿಗೆ ದಂಡ ಹಾಕಲಾಗುತ್ತದೆ.


ಯಾವ್ಯಾವುದಕ್ಕೆ ಎಷ್ಟೆಷ್ಟು ದಂಡ:

ಯಾವುದಕ್ಕೆ? ಮೊದಲ ಬಾರಿ ೨ನೇ ಬಾರಿ
ಸಾರ್ವಜನಿಕ ಸ್ಥಳಗಳಲ್ಲಿ ಕಸ ೫೦೦ ರೂ. ೧,೦೦೦ ರೂ.

ತ್ಯಾಜ್ಯ ವಿಂಗಡಿಸದಿದ್ದರೆ ೨೦೦ ರೂ. ೫೦೦ ರೂ.

ವಾಣಿಜ್ಯ ಉದ್ದಿಮೆದಾರರಿಗೆ ೫೦೦ ರೂ. ೧,೦೦೦ ರೂ.

ದ್ರವ ತ್ಯಾಜ್ಯ ೫೦೦ ರೂ. ೧,೦೦೦ ರೂ.

ಪ್ರಾಣಿಜನ್ಯ ತ್ಯಾಜ್ಯ ೫೦೦ ರೂ, ೧,೦೦೦ ರೂ.

ಕಟ್ಟಡ ತ್ಯಾಜ್ಯ ೫,೦೦೦ ರೂ. ೧೦,೦೦೦ ರೂ.

ಚರಂಡಿಗಳಿಗೆ ತ್ಯಾಜ್ಯ ೫೦೦ರೂ, ೧,೦೦೦ ರೂ.

ತ್ಯಾಜ್ಯ ಸುಟ್ಟರೆ ೨೦೦ ರೂ. ೫೦೦ ರೂ.

ಪ್ಲಾಸ್ಟಿಕ್ ಸುಟ್ಟರೆ ೫೦೦ರೂ, ೧,೦೦೦ ರೂ.

ಇ ತ್ಯಾಜ್ಯ ಸುಟ್ಟರೆ ೧,೦೦೦ ರೂ. ೫,೦೦೦ ರೂ.

ತ್ಯಾಜ್ಯ ಸಂಸ್ಕರಿಸದಿದ್ದಲ್ಲಿ ೨೦,೦೦೦ ರೂ. ೫೦,೦೦೦ ರೂ.

(ಹಾಸ್ಟೆಲ್, ರೆಸ್ಟೋರೆಂಟ್,ವಿದ್ಯಾಸಂಸ್ಥೆಗಳು, ಕಲ್ಯಾಣಮಂಟಪಗಳು, ಮಾಲ್‌ಗಳು, ಸರ್ಕಾರಿ ಕಚೇರಿಗಳು, ವಾಣಿಜ್ಯ ಕಟ್ಟಡಗಳಿಗೆ)

 

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

5 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago