ಮೈಸೂರು: ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಕ್ರೀಡಾ, ಪ್ರತಿಭಾಪುರಸ್ಕಾರ ಹಾಗೂ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೇಗೌಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು. ವಿಜಯನಗರ ಎರಡನೇ ಹಂತದಲ್ಲಿರುವ ಕೊಡಗು ಗೌಡ ಸಮಾಜದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿದ ಶಾಸಕ ಜಿ.ಟಿ.ದೇವೇಗೌಡ ಮಕ್ಕಳಿಗೆ ಪ್ರತಿಭಾಪುರಸ್ಕಾರ ಮಾಡಿದರು. ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡ, ಕೊಡಗು ಸಮಾಜದವರು ಮೈಸೂರಿನಲ್ಲಿ ನೆಲೆಸಿ ಎಲ್ಲರೊಂದಿಗೆ ಬೆರೆತು ಜೀವನ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದುಕೊಳ್ಳುವ ಜೊತೆಗೆ ಸರ್ಕಾರಿ ಉದ್ಯೋಗ ಪಡೆಯುವ ಗುರಿ ಹೊಂದಬೇಕು ಎಂದರು.ಸಂಘದ ಅಧ್ಯಕ್ಷ ನಡುಮನೆ ಚಂಗಪ್ಪ ವಹಿಸಿದ್ದರು.ಉಪಾಧ್ಯಕ್ಷ ಬೆಪ್ಪುರನ ಗಾಯಿತ್ರಿ,ಗೌರವ ಕಾರ್ಯದರ್ಶಿ ಬೋಳನ ಜಯಪ್ರಸಾದ್,ಸಹಕಾರ್ಯದರ್ಶಿ ನಿಡ್ಯಮಲೆ ನಂದೇಶ್,ಖಜಾಂಚಿಪೊನ್ನಪ್ಪನ ಅಪ್ಪಯ್ಯ ಹಾಜರಿದ್ದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…