ಮೈಸೂರು: ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಸಂವಿಧಾನದಲ್ಲಿ ಅವಕಾಶವಿಲ್ಲ. ಹೀಗಾಗಿ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ಬಿಜೆಪಿಗೆ ಲಾಭವಾಗುತ್ತೋ ಬಿಡುತ್ತೋ ಎನ್ನುವ ಪ್ರಶ್ನೆಯಲ್ಲ. ಇದನ್ನು ಜಾರಿ ಮಾಡಲು ಹೊರಟರೆ ವ್ಯಾಪಕ ವಿರೋಧ ವ್ಯಕ್ತವಾಗುತ್ತದೆ. ನಮ್ಮ ಸಂವಿಧಾನದಲ್ಲಿ ಏನಿದೆಯೋ ಅದಕ್ಕೆ ನಾವು ಬದ್ಧರಾಗಿರಬೇಕಾಗುತ್ತದೆ. ಹೀಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ನನ್ನ ವಿರೋಧವಿದೆ ಎಂದರು.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅವಕಾಶ ಕೊಡದ ಪ್ರಧಾನಿ ನರೇಂದ್ರ ಮೋದಿ,ಸಮುದ್ರಕ್ಕೆ ಹರಿದು ಹೋಗುವ ನೀರು ಬಳಸಲು ಅನುಮತಿ ಕೊಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಮೇಕೆದಾಟು ಯೋಜನೆಗೆ ಮೋದಿ ಅನುಮತಿ ನೀಡಲಿಲ್ಲ. ತಮಿಳುನಾಡು ಸರ್ಕಾರ ಸಮುದ್ರಕ್ಕೆ ಹರಿಯುವ ಕಾವೇರಿ ನೀರು ಬಳಸೋಕೆ ಅನುಮತಿ ಕೊಟ್ಟಿದ್ದಾರೆ. ಸೇಲಂ ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳ ೪ ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿಗೆ ಈ ನೀರು ಬಳಕೆ ಮಾಡಲಾಗುತ್ತಿದೆ. ತಮಿಳುನಾಡಿನ ಎಐಎಡಿಎಂಕೆ ಪಕ್ಷದೊಂದಿಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಎಐಎಡಿಎಂಕೆಗೆ ಅನುಕೂಲವಾಗಲಿ ಎಂದೇ ಅಲ್ಲಿನ ನೀರಾವರಿ ಯೋಜನೆಗೆ ಮೋದಿ ಅನುಮತಿ ಕೊಟ್ಟಿದ್ದಾರೆ. ಈ ವಿಚಾರವನ್ನು ಇಲ್ಲಿಗೇ ಬಿಡುವುದಿಲ್ಲ. ಮೇಕೆದಾಟು ವಿಚಾರವಾಗಿ ಬಹಳ ಹಿಂದೆಯೇ ಪ್ರಧಾನಿಗೆ ಪತ್ರ ಬರೆದಿದ್ದೆ. ಆ ಪತ್ರಕ್ಕೆ ಇಲ್ಲಿಯ ತನಕ ಪ್ರತಿಕ್ರಿಯೆ ನೀಡಿಲ್ಲ. ಮುಂಬರುವ ರಾಜ್ಯಸಭೆ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…