ಮೈಸೂರು: ನಗರದ ಕೊಳಚೆ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವವರಿಗೆ ನಿವೇಶನ ಹಂಚಿಕೆ ಮಾಡಲು ಸಾಧ್ಯವಾಗದ ಕಾರಣ ಗುಂಪು ಮನೆಗಳನ್ನು ನಿರ್ಮಾಣ ಮಾಡಲು ಭೂಮಿಯನ್ನು ಮೀಸಲಿಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಆತನಾಡಿದ ಅವರು ಏಕಲವ್ಯನಗರದಲ್ಲಿ ನಿರ್ಮಾಣ ಮಾಡಿರುವ ಮನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಆದ್ದರಿಂದ ಅನರ್ಹರು ಬಂದು ವಾಸ ಮಾಡುತ್ತಿರುವವರನ್ನು ಖಾಲಿ ಮಾಡಿಸಬೇಕು. ನೀವು ಸಂಸದರು,ಶಾಸಕರು ಎನ್ನುವ ಕಥೆಯನ್ನು ಹೇಳದೆ ಮೊದಲು ಖಾಲಿ ಮಾಡಿಸಿ ಎಂದು ತಾಕೀತು ಮಾಡಿದರು. ಸೈಟ್ ಹೊಂದಿ ಮನೆ ಇಲ್ಲದವರಿಗೆ ಪ್ರಧಾನಮಂತ್ರಿ ಅವಾಜ್ ಯೋಜನೆಯಡಿ ಮನೆಗಳನ್ನು ಒದಗಿಸುವುದು ಮತ್ತು ನಿವೇಶನ ಇಲ್ಲದವರಿಗೆ ಗುಂಪು ಮನೆಗಳನ್ನು ಕಟ್ಟಲು ಯೋಜನೆ ರೂಪಿಸಬೇಕು ಎಂದು ಸ್ಲಂ ಬೋರ್ಡ್ ಮತ್ತು ರಾಜೀವ್ ಗಾಂದಿ ಗೃಹ ನಿರ್ಮಾಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರು ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ಚಯ ಹಾಗೂ ಉಸ್ತುವಾರಿ ಸಮಿತಿಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ,ಶಾಸಕ ಎಸ್.ಎ.ರಾಮದಾಸ್,ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ ಹಾಜರಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…
ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…