ಜಿಲ್ಲೆಗಳು

ಮೈಸೂರು ನಗರದಲ್ಲಿ ಗುಂಪು ಮನೆಗಳ ನಿರ್ಮಾಣಕ್ಕೆ ಜಾಗ ಹುಡುಕಿ: ಪ್ರತಾಪ್ ಸಿಂಹ

ಮೈಸೂರು: ನಗರದ ಕೊಳಚೆ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವವರಿಗೆ ನಿವೇಶನ ಹಂಚಿಕೆ ಮಾಡಲು ಸಾಧ್ಯವಾಗದ ಕಾರಣ ಗುಂಪು ಮನೆಗಳನ್ನು ನಿರ್ಮಾಣ ಮಾಡಲು ಭೂಮಿಯನ್ನು ಮೀಸಲಿಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಸೂಚನೆ‌ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಆತನಾಡಿದ ಅವರು  ಏಕಲವ್ಯನಗರದಲ್ಲಿ ನಿರ್ಮಾಣ ಮಾಡಿರುವ ಮನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಆದ್ದರಿಂದ ಅನರ್ಹರು ಬಂದು ವಾಸ ಮಾಡುತ್ತಿರುವವರನ್ನು ಖಾಲಿ ಮಾಡಿಸಬೇಕು. ನೀವು‌ ಸಂಸದರು,ಶಾಸಕರು ಎನ್ನುವ ಕಥೆಯನ್ನು ಹೇಳದೆ ಮೊದಲು ಖಾಲಿ ಮಾಡಿಸಿ ಎಂದು ತಾಕೀತು ಮಾಡಿದರು. ಸೈಟ್ ಹೊಂದಿ ಮನೆ ಇಲ್ಲದವರಿಗೆ ಪ್ರಧಾನಮಂತ್ರಿ ಅವಾಜ್ ಯೋಜನೆಯಡಿ ಮನೆಗಳನ್ನು ಒದಗಿಸುವುದು‌ ಮತ್ತು ನಿವೇಶನ ಇಲ್ಲದವರಿಗೆ ಗುಂಪು ಮನೆಗಳನ್ನು ಕಟ್ಟಲು ಯೋಜನೆ ರೂಪಿಸಬೇಕು ಎಂದು ಸ್ಲಂ ಬೋರ್ಡ್ ಮತ್ತು ರಾಜೀವ್ ಗಾಂದಿ ಗೃಹ ನಿರ್ಮಾಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರು ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ಚಯ ಹಾಗೂ ಉಸ್ತುವಾರಿ ಸಮಿತಿ‌ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ,ಶಾಸಕ‌ ಎಸ್.ಎ.ರಾಮದಾಸ್,ಜಿಪಂ‌ ಸಿಇಒ ಬಿ.ಆರ್.ಪೂರ್ಣಿಮಾ ಹಾಜರಿದ್ದರು.

andolanait

Recent Posts

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

43 mins ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

1 hour ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

3 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

3 hours ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

4 hours ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

4 hours ago