ಮೈಸೂರು: ನಗರದ ಕೊಳಚೆ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವವರಿಗೆ ನಿವೇಶನ ಹಂಚಿಕೆ ಮಾಡಲು ಸಾಧ್ಯವಾಗದ ಕಾರಣ ಗುಂಪು ಮನೆಗಳನ್ನು ನಿರ್ಮಾಣ ಮಾಡಲು ಭೂಮಿಯನ್ನು ಮೀಸಲಿಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಆತನಾಡಿದ ಅವರು ಏಕಲವ್ಯನಗರದಲ್ಲಿ ನಿರ್ಮಾಣ ಮಾಡಿರುವ ಮನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಆದ್ದರಿಂದ ಅನರ್ಹರು ಬಂದು ವಾಸ ಮಾಡುತ್ತಿರುವವರನ್ನು ಖಾಲಿ ಮಾಡಿಸಬೇಕು. ನೀವು ಸಂಸದರು,ಶಾಸಕರು ಎನ್ನುವ ಕಥೆಯನ್ನು ಹೇಳದೆ ಮೊದಲು ಖಾಲಿ ಮಾಡಿಸಿ ಎಂದು ತಾಕೀತು ಮಾಡಿದರು. ಸೈಟ್ ಹೊಂದಿ ಮನೆ ಇಲ್ಲದವರಿಗೆ ಪ್ರಧಾನಮಂತ್ರಿ ಅವಾಜ್ ಯೋಜನೆಯಡಿ ಮನೆಗಳನ್ನು ಒದಗಿಸುವುದು ಮತ್ತು ನಿವೇಶನ ಇಲ್ಲದವರಿಗೆ ಗುಂಪು ಮನೆಗಳನ್ನು ಕಟ್ಟಲು ಯೋಜನೆ ರೂಪಿಸಬೇಕು ಎಂದು ಸ್ಲಂ ಬೋರ್ಡ್ ಮತ್ತು ರಾಜೀವ್ ಗಾಂದಿ ಗೃಹ ನಿರ್ಮಾಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರು ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ಚಯ ಹಾಗೂ ಉಸ್ತುವಾರಿ ಸಮಿತಿಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ,ಶಾಸಕ ಎಸ್.ಎ.ರಾಮದಾಸ್,ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ ಹಾಜರಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…