ಜಿಲ್ಲೆಗಳು

ಮೈಸೂರಿನಲ್ಲಿ ಜೋಡೊ ಯಾತ್ರೆ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ : ಡಿಕೆಶಿ

ಬೆಂಗಳೂರು : ಕಾಂಗ್ರೆಸ್‌ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್‌ ಜೋಡೊ ಯಾತ್ರೆಯು ಅ. 2ರಂದು ನಂಜನಗೂಡಿನ ಬದನವಾಳುವಿನಲ್ಲಿ ಮಹಾತ್ಮ ಗಾಂಧೀಜಿ ಅವರು ಸ್ಥಾಪಿಸಿದ ಖಾದಿ ಕೇಂದ್ರದಲ್ಲಿ ರಾಹುಲ್‌ ಗಾಂಧಿ ಅವರು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಿದ್ದಾರೆ. ಈ ಮೂಲಕವಾಗಿ ಸಾಂಸ್ಕೃತಿಕ ನಗರಿ ಮೈಸೂರಿಗ ಜೋಡೋ ಯಾತ್ರೆಯು ಆಗಮಿಸಲಿದೆ. ಮೈಸೂರಿನಲ್ಲಿ ನಮ್ಮ ಯಾತ್ರೆಯು ಒಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಪ್ರತೀ ವರ್ಗದವರನ್ನೂ ಕೂಡ ರಾಹುಲ್‌ ಗಾಂಧಿ ಅವರು ಭೇಟಿ ಮಾಡಿ ಅವರ ಕಷ್ಟ ಸುಖ ವಿಚಾರಿಸಲಿದ್ದಾರೆ. ಮಹಿಳೆಯರು, ಸಿವಿಲ್‌ ಸೊಸೈಟಿಗಳು, ಹೋರಾಟಗಾರರು ಮೊದಲಾದವರು ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಈಗಾಗಲೇ ಕರೆ ನೀಡಿದ್ದೇವೆ. ನೀವೂ ಬನ್ನಿ ನಿಮ್ಮ ಕುಟುಂಬದವರನ್ನೂ ಕರೆತನ್ನಿ ಎಂದು ಮಾಧ್ಯಮಗಳ ಮೂಲಕ ಜನಸಾಮಾನ್ಯರಿಗೆ ಕರೆ ನೀಡಿದರು.

ಕರ್ನಾಟಕದಲ್ಲಿ ಸೆ.30ರಿಂದ ಭಾರತ್ ಜೋಡೋ: ರಾಜ್ಯದಲ್ಲಿ ಈ ಯಾತ್ರೆ ಸೆ.30 ರಂದು ಬೆಳಗ್ಗೆ 9 ಗಂಟೆಗೆ ಗುಂಡ್ಲುಪೇಟೆಯಿಂದ ಆರಂಭವಾಗಲಿದೆ. ಅ. 2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ದಸರಾ ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು.

ಬಳಿಕ ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿ, ಇಂದು ಭಾರತ ಐಕ್ಯತಾ ಯಾತ್ರೆಯ ಸಿದ್ಧತಾ ಪರಿಶೀಲನಾ ಸಭೆ ಮಾಡಿದ್ದೇವೆ. ಪ್ರದೇಶ ಕಾಂಗ್ರೆಸ್ ಹಾಗೂ ರಾಜ್ಯ ನಾಯಕರು ಮಾಡಿರುವ ಎಲ್ಲಾ ಸಿದ್ಧತೆಗಳು ಎಐಸಿಸಿಗೆ ತೃಪ್ತಿ ತಂದಿದೆ. ನಮ್ಮ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಿತ್ಯ ತಯಾರಿ ಕುರಿತು ಪರಿಶೀಲನೆ ನಡೆಸುತ್ತಿದ್ದು, ರಾಜ್ಯದಲ್ಲಿನ ಯಾತ್ರೆ ಅತ್ಯಂತ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ಇದೆ ಎಂದರು.

andolanait

Recent Posts

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

2 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

2 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

2 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

2 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

3 hours ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

3 hours ago