ಜಿಲ್ಲೆಗಳು

ಮೈಸೂರಿನಲ್ಲಿ ಜೋಡೊ ಯಾತ್ರೆ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ : ಡಿಕೆಶಿ

ಬೆಂಗಳೂರು : ಕಾಂಗ್ರೆಸ್‌ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್‌ ಜೋಡೊ ಯಾತ್ರೆಯು ಅ. 2ರಂದು ನಂಜನಗೂಡಿನ ಬದನವಾಳುವಿನಲ್ಲಿ ಮಹಾತ್ಮ ಗಾಂಧೀಜಿ ಅವರು ಸ್ಥಾಪಿಸಿದ ಖಾದಿ ಕೇಂದ್ರದಲ್ಲಿ ರಾಹುಲ್‌ ಗಾಂಧಿ ಅವರು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಿದ್ದಾರೆ. ಈ ಮೂಲಕವಾಗಿ ಸಾಂಸ್ಕೃತಿಕ ನಗರಿ ಮೈಸೂರಿಗ ಜೋಡೋ ಯಾತ್ರೆಯು ಆಗಮಿಸಲಿದೆ. ಮೈಸೂರಿನಲ್ಲಿ ನಮ್ಮ ಯಾತ್ರೆಯು ಒಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಪ್ರತೀ ವರ್ಗದವರನ್ನೂ ಕೂಡ ರಾಹುಲ್‌ ಗಾಂಧಿ ಅವರು ಭೇಟಿ ಮಾಡಿ ಅವರ ಕಷ್ಟ ಸುಖ ವಿಚಾರಿಸಲಿದ್ದಾರೆ. ಮಹಿಳೆಯರು, ಸಿವಿಲ್‌ ಸೊಸೈಟಿಗಳು, ಹೋರಾಟಗಾರರು ಮೊದಲಾದವರು ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಈಗಾಗಲೇ ಕರೆ ನೀಡಿದ್ದೇವೆ. ನೀವೂ ಬನ್ನಿ ನಿಮ್ಮ ಕುಟುಂಬದವರನ್ನೂ ಕರೆತನ್ನಿ ಎಂದು ಮಾಧ್ಯಮಗಳ ಮೂಲಕ ಜನಸಾಮಾನ್ಯರಿಗೆ ಕರೆ ನೀಡಿದರು.

ಕರ್ನಾಟಕದಲ್ಲಿ ಸೆ.30ರಿಂದ ಭಾರತ್ ಜೋಡೋ: ರಾಜ್ಯದಲ್ಲಿ ಈ ಯಾತ್ರೆ ಸೆ.30 ರಂದು ಬೆಳಗ್ಗೆ 9 ಗಂಟೆಗೆ ಗುಂಡ್ಲುಪೇಟೆಯಿಂದ ಆರಂಭವಾಗಲಿದೆ. ಅ. 2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ದಸರಾ ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು.

ಬಳಿಕ ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿ, ಇಂದು ಭಾರತ ಐಕ್ಯತಾ ಯಾತ್ರೆಯ ಸಿದ್ಧತಾ ಪರಿಶೀಲನಾ ಸಭೆ ಮಾಡಿದ್ದೇವೆ. ಪ್ರದೇಶ ಕಾಂಗ್ರೆಸ್ ಹಾಗೂ ರಾಜ್ಯ ನಾಯಕರು ಮಾಡಿರುವ ಎಲ್ಲಾ ಸಿದ್ಧತೆಗಳು ಎಐಸಿಸಿಗೆ ತೃಪ್ತಿ ತಂದಿದೆ. ನಮ್ಮ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಿತ್ಯ ತಯಾರಿ ಕುರಿತು ಪರಿಶೀಲನೆ ನಡೆಸುತ್ತಿದ್ದು, ರಾಜ್ಯದಲ್ಲಿನ ಯಾತ್ರೆ ಅತ್ಯಂತ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ಇದೆ ಎಂದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

8 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

13 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

14 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

14 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

14 hours ago