ಜಿಲ್ಲೆಗಳು

ಮೈಸೂರಿನಲ್ಲಿ ಜೋಡೊ ಯಾತ್ರೆ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ : ಡಿಕೆಶಿ

ಬೆಂಗಳೂರು : ಕಾಂಗ್ರೆಸ್‌ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್‌ ಜೋಡೊ ಯಾತ್ರೆಯು ಅ. 2ರಂದು ನಂಜನಗೂಡಿನ ಬದನವಾಳುವಿನಲ್ಲಿ ಮಹಾತ್ಮ ಗಾಂಧೀಜಿ ಅವರು ಸ್ಥಾಪಿಸಿದ ಖಾದಿ ಕೇಂದ್ರದಲ್ಲಿ ರಾಹುಲ್‌ ಗಾಂಧಿ ಅವರು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಿದ್ದಾರೆ. ಈ ಮೂಲಕವಾಗಿ ಸಾಂಸ್ಕೃತಿಕ ನಗರಿ ಮೈಸೂರಿಗ ಜೋಡೋ ಯಾತ್ರೆಯು ಆಗಮಿಸಲಿದೆ. ಮೈಸೂರಿನಲ್ಲಿ ನಮ್ಮ ಯಾತ್ರೆಯು ಒಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಪ್ರತೀ ವರ್ಗದವರನ್ನೂ ಕೂಡ ರಾಹುಲ್‌ ಗಾಂಧಿ ಅವರು ಭೇಟಿ ಮಾಡಿ ಅವರ ಕಷ್ಟ ಸುಖ ವಿಚಾರಿಸಲಿದ್ದಾರೆ. ಮಹಿಳೆಯರು, ಸಿವಿಲ್‌ ಸೊಸೈಟಿಗಳು, ಹೋರಾಟಗಾರರು ಮೊದಲಾದವರು ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಈಗಾಗಲೇ ಕರೆ ನೀಡಿದ್ದೇವೆ. ನೀವೂ ಬನ್ನಿ ನಿಮ್ಮ ಕುಟುಂಬದವರನ್ನೂ ಕರೆತನ್ನಿ ಎಂದು ಮಾಧ್ಯಮಗಳ ಮೂಲಕ ಜನಸಾಮಾನ್ಯರಿಗೆ ಕರೆ ನೀಡಿದರು.

ಕರ್ನಾಟಕದಲ್ಲಿ ಸೆ.30ರಿಂದ ಭಾರತ್ ಜೋಡೋ: ರಾಜ್ಯದಲ್ಲಿ ಈ ಯಾತ್ರೆ ಸೆ.30 ರಂದು ಬೆಳಗ್ಗೆ 9 ಗಂಟೆಗೆ ಗುಂಡ್ಲುಪೇಟೆಯಿಂದ ಆರಂಭವಾಗಲಿದೆ. ಅ. 2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ದಸರಾ ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು.

ಬಳಿಕ ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿ, ಇಂದು ಭಾರತ ಐಕ್ಯತಾ ಯಾತ್ರೆಯ ಸಿದ್ಧತಾ ಪರಿಶೀಲನಾ ಸಭೆ ಮಾಡಿದ್ದೇವೆ. ಪ್ರದೇಶ ಕಾಂಗ್ರೆಸ್ ಹಾಗೂ ರಾಜ್ಯ ನಾಯಕರು ಮಾಡಿರುವ ಎಲ್ಲಾ ಸಿದ್ಧತೆಗಳು ಎಐಸಿಸಿಗೆ ತೃಪ್ತಿ ತಂದಿದೆ. ನಮ್ಮ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಿತ್ಯ ತಯಾರಿ ಕುರಿತು ಪರಿಶೀಲನೆ ನಡೆಸುತ್ತಿದ್ದು, ರಾಜ್ಯದಲ್ಲಿನ ಯಾತ್ರೆ ಅತ್ಯಂತ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ಇದೆ ಎಂದರು.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

1 hour ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

2 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

14 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

15 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

16 hours ago