ಮೈಸೂರು: ನಗರ ಕಾಂಗ್ರೆಸ್ ಕಚೇರಿಯಲ್ಲಿಂದುಪತ್ರಿಕಾಗೋಷ್ಠಿ ನಡೆಯಿತು.
ಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರು ಸಂಸದರ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.ವಾರ್ಷಿಕವಾಗಿ ಐದು ಕೋಟಿ ರೂ.ಅನುದಾನ ಬರಲಿದೆ. ೨೦೨೦ ಮತ್ತು೨೦೨೧ ರಲ್ಲಿ ಕೋವಿಡ್ ಕಾರಣಕ್ಕಾಗಿ ಅನುದಾನವನ್ನು ನೀಡಿರಲಿಲ್ಲ. ಈಗ ೨೦೨೨ ರಿಂದ ಮತ್ತೆ ನದಿ ೨೦೧೯ರ ಅನುದಾನವನ್ನು ಬೇರೆ ಕ್ಷೇತ್ರದಲ್ಲಿ ಇರುವ ಟ್ರಸ್ಟ್ ಬೇಂದ್ರಾಲ ವೆಂಕಟಕೃಷ್ಣ ಇರ್ವತ್ರಯ ಮೆಮೋರಿಯಲ್ ಟ್ರಸ್ಟ್ ಕಕ್ಕಿಂಜೆ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದಕ್ಕೆ ನೀಡಲಾಗಿದೆ. ಡಾ.ಮುರುಳಿಕೃಷ್ಣ ಇರ್ವತ್ರಾಯ ಅವರಿಗೆ ೧೮ ಲಕ್ಷ ರೂ.ವೆಚ್ಚದಲ್ಲಿ ಮೊಬೈಲ್ ವಾಹನವನ್ನು ೨೦೨೧ ಸೆಪ್ಟೆಂಬರ್ ೫ ರಂದು ನೀಡಿದ್ದಾರೆ. ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಿದ್ದು,ಹಲವು ಕುಗ್ರಾಮ.ಕೊನೆಯ ಹಂತದಲ್ಲಿ ಇರುವ ಹಳ್ಳಿಗಳಲ್ಲಿ ಆಂಬ್ಯುಲೆನ್ಸ್ ಇಲ್ಲದೆ ಪರದಾಡುತ್ತಿದ್ದಾರೆ. ಸಂಸದರ ಪತ್ನಿ ನಡೆಸುತ್ತಿರುವ ಮೂಡಿಗೆರೆ ಪಟ್ಟಣದಲ್ಲಿ ಹೊಯ್ಸಳ ಹೆಲ್ತ್ ಕ್ಲಿನಿಕ್ ನಡೆಸುತ್ತಿದ್ದು, ಅಧ್ಯಕ್ಷರಾಗಿ ಮುರುಳಿಕೃಷ್ಣ ಇರ್ವತ್ರಾಯ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಗೆ ನಿರ್ದೇಶಕರಾಗಿ ಅರ್ಪಿತ ಕಾರ್ಯ ನಿರ್ವಹಿಸಿದರು. ೨೫ ಲಕ್ಷ ರೂ.ಅನುದಾನವನ್ನು ಬೇರೆ ಕ್ಷೇತ್ರಕ್ಕೆ ಕೊಡುವ ಅವಕಾಶ ಇದ್ದರೂ ಸೊಸೈಟಿ,ಟ್ರಸ್ಟ್, ಸಹಕಾರ ಸಂಘಗಳಿಗೆ ಕೊಡುವಂತಿಲ್ಲ ಎನ್ನುವ ನಿಯಮ ಇದೆ. ನಿಯಮ ಉಲ್ಲಂಘನೆ ಮಾಡಿದ್ದರೆ ಅನುಷ್ಠಾನ ಅಧಿಕಾರಿಗಳುನೇರ ಹೊಣೆಗಾರರು. ಸಂಸದರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸೋಮವಾರ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಗುವುದು. ಮತ್ತೊಂದು ಗೋಪಿನಾಥ್ ಶೆಣೈ ಅವರ ಟ್ರಸ್ಟಿಗೂ ೨೩ ಲಕ್ಷ ರೂ. ನೀಡಿರುವುದು ಕಾನೂನುಬಾಹಿರವಾಗಿದೆ. ಹೊಯ್ಸಳ ಹೆಲ್ತ್ ಕೇರ್ ವಿರುದ್ಧ ಕ್ರಮಜರುಗಿಸಬೇಕು. ವೈಯಕ್ತಿಕ ಮತ್ತು ಮನೆಯ ನೆಂಟರಿಗೆ ಕೊಡುವ ಅವಕಾಶ ಮಾಡುವುದಲ್ಲ. ಹಿಟ್ ಅಂಡ್ ರನ್ ಕೇಸ್ ನಂತೆ ಮಾಡಬೇಡಿ. ನೂರಕ್ಕೆ ನೂರರಷ್ಟು ನಿಯಮ ಉಲ್ಲಂಘನೆ. ಏನಾದರೂ ಮಾತನಾಡಿದರೆ ಪೊಲೀಸ್ ಠಾಣೆಗೆ ದೂರು ಕೊಟ್ಟು ಬಾಯಿ ಮುಚ್ಚಿಸುವ ಕೆಲಸ ನಡೆಯಲ್ಲ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು,ಮೈಸೂರು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಮೂರ್ತಿ ಹಾಜರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…