ಜಿಲ್ಲೆಗಳು

ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದ ಸಂಸದರು ಸಂಸದರ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ : ಎಂ.ಲಕ್ಷ್ಮಣ್ ಆರೋಪ

ಮೈಸೂರು:  ನಗರ ಕಾಂಗ್ರೆಸ್ ಕಚೇರಿಯಲ್ಲಿಂದುಪತ್ರಿಕಾಗೋಷ್ಠಿ ನಡೆಯಿತು.

ಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್  ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರು ಸಂಸದರ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.ವಾರ್ಷಿಕವಾಗಿ ಐದು ಕೋಟಿ ರೂ.ಅನುದಾನ ಬರಲಿದೆ. ೨೦೨೦ ಮತ್ತು೨೦೨೧ ರಲ್ಲಿ ಕೋವಿಡ್ ಕಾರಣಕ್ಕಾಗಿ ಅನುದಾನವನ್ನು ನೀಡಿರಲಿಲ್ಲ. ಈಗ ೨೦೨೨ ರಿಂದ ಮತ್ತೆ ನದಿ ೨೦೧೯ರ ಅನುದಾನವನ್ನು ಬೇರೆ ಕ್ಷೇತ್ರದಲ್ಲಿ ಇರುವ ಟ್ರಸ್ಟ್ ಬೇಂದ್ರಾಲ ವೆಂಕಟಕೃಷ್ಣ ಇರ್ವತ್ರಯ ಮೆಮೋರಿಯಲ್ ಟ್ರಸ್ಟ್ ಕಕ್ಕಿಂಜೆ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದಕ್ಕೆ ನೀಡಲಾಗಿದೆ. ಡಾ.ಮುರುಳಿಕೃಷ್ಣ ಇರ್ವತ್ರಾಯ ಅವರಿಗೆ ೧೮ ಲಕ್ಷ ರೂ.ವೆಚ್ಚದಲ್ಲಿ ಮೊಬೈಲ್ ವಾಹನವನ್ನು ೨೦೨೧ ಸೆಪ್ಟೆಂಬರ್ ೫ ರಂದು ನೀಡಿದ್ದಾರೆ. ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಿದ್ದು,ಹಲವು ಕುಗ್ರಾಮ.ಕೊನೆಯ ಹಂತದಲ್ಲಿ ಇರುವ ಹಳ್ಳಿಗಳಲ್ಲಿ ಆಂಬ್ಯುಲೆ‌ನ್ಸ್ ಇಲ್ಲದೆ ಪರದಾಡುತ್ತಿದ್ದಾರೆ. ಸಂಸದರ ಪತ್ನಿ ನಡೆಸುತ್ತಿರುವ ಮೂಡಿಗೆರೆ ಪಟ್ಟಣದಲ್ಲಿ ಹೊಯ್ಸಳ ಹೆಲ್ತ್ ಕ್ಲಿನಿಕ್ ನಡೆಸುತ್ತಿದ್ದು, ಅಧ್ಯಕ್ಷರಾಗಿ ಮುರುಳಿಕೃಷ್ಣ ಇರ್ವತ್ರಾಯ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಗೆ ನಿರ್ದೇಶಕರಾಗಿ ಅರ್ಪಿತ ಕಾರ್ಯ ನಿರ್ವಹಿಸಿದರು. ೨೫ ಲಕ್ಷ ರೂ.ಅನುದಾನವನ್ನು ಬೇರೆ ಕ್ಷೇತ್ರಕ್ಕೆ ಕೊಡುವ ಅವಕಾಶ ಇದ್ದರೂ ಸೊಸೈಟಿ,ಟ್ರಸ್ಟ್, ಸಹಕಾರ ಸಂಘಗಳಿಗೆ ಕೊಡುವಂತಿಲ್ಲ ಎನ್ನುವ ನಿಯಮ ಇದೆ. ನಿಯಮ ಉಲ್ಲಂಘನೆ ಮಾಡಿದ್ದರೆ ಅನುಷ್ಠಾನ ಅಧಿಕಾರಿಗಳುನೇರ ಹೊಣೆಗಾರರು. ಸಂಸದರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸೋಮವಾರ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಗುವುದು. ಮತ್ತೊಂದು ಗೋಪಿನಾಥ್ ಶೆಣೈ ಅವರ ಟ್ರಸ್ಟಿಗೂ ೨೩ ಲಕ್ಷ ರೂ. ನೀಡಿರುವುದು ಕಾನೂನುಬಾಹಿರವಾಗಿದೆ. ಹೊಯ್ಸಳ ಹೆಲ್ತ್ ಕೇರ್ ವಿರುದ್ಧ ಕ್ರಮಜರುಗಿಸಬೇಕು. ವೈಯಕ್ತಿಕ ಮತ್ತು ಮನೆಯ ನೆಂಟರಿಗೆ ಕೊಡುವ ಅವಕಾಶ ‌ಮಾಡುವುದಲ್ಲ. ಹಿಟ್ ಅಂಡ್ ರನ್ ಕೇಸ್ ನಂತೆ ಮಾಡಬೇಡಿ. ನೂರಕ್ಕೆ ನೂರರಷ್ಟು ‌ನಿಯಮ ಉಲ್ಲಂಘನೆ. ಏನಾದರೂ ಮಾತನಾಡಿದರೆ ಪೊಲೀಸ್ ಠಾಣೆಗೆ ದೂರು ಕೊಟ್ಟು ಬಾಯಿ ಮುಚ್ಚಿಸುವ ಕೆಲಸ ನಡೆಯಲ್ಲ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಪಂ ಮಾಜಿ‌ ಅಧ್ಯಕ್ಷ ಬಿ.ಎಂ.ರಾಮು,ಮೈಸೂರು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಮೂರ್ತಿ ಹಾಜರಿದ್ದರು.

andolanait

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

7 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

7 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

8 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

8 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

8 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

8 hours ago