ಜಿಲ್ಲೆಗಳು

ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದ ಸಂಸದರು ಸಂಸದರ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ : ಎಂ.ಲಕ್ಷ್ಮಣ್ ಆರೋಪ

ಮೈಸೂರು:  ನಗರ ಕಾಂಗ್ರೆಸ್ ಕಚೇರಿಯಲ್ಲಿಂದುಪತ್ರಿಕಾಗೋಷ್ಠಿ ನಡೆಯಿತು.

ಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್  ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರು ಸಂಸದರ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.ವಾರ್ಷಿಕವಾಗಿ ಐದು ಕೋಟಿ ರೂ.ಅನುದಾನ ಬರಲಿದೆ. ೨೦೨೦ ಮತ್ತು೨೦೨೧ ರಲ್ಲಿ ಕೋವಿಡ್ ಕಾರಣಕ್ಕಾಗಿ ಅನುದಾನವನ್ನು ನೀಡಿರಲಿಲ್ಲ. ಈಗ ೨೦೨೨ ರಿಂದ ಮತ್ತೆ ನದಿ ೨೦೧೯ರ ಅನುದಾನವನ್ನು ಬೇರೆ ಕ್ಷೇತ್ರದಲ್ಲಿ ಇರುವ ಟ್ರಸ್ಟ್ ಬೇಂದ್ರಾಲ ವೆಂಕಟಕೃಷ್ಣ ಇರ್ವತ್ರಯ ಮೆಮೋರಿಯಲ್ ಟ್ರಸ್ಟ್ ಕಕ್ಕಿಂಜೆ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದಕ್ಕೆ ನೀಡಲಾಗಿದೆ. ಡಾ.ಮುರುಳಿಕೃಷ್ಣ ಇರ್ವತ್ರಾಯ ಅವರಿಗೆ ೧೮ ಲಕ್ಷ ರೂ.ವೆಚ್ಚದಲ್ಲಿ ಮೊಬೈಲ್ ವಾಹನವನ್ನು ೨೦೨೧ ಸೆಪ್ಟೆಂಬರ್ ೫ ರಂದು ನೀಡಿದ್ದಾರೆ. ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಿದ್ದು,ಹಲವು ಕುಗ್ರಾಮ.ಕೊನೆಯ ಹಂತದಲ್ಲಿ ಇರುವ ಹಳ್ಳಿಗಳಲ್ಲಿ ಆಂಬ್ಯುಲೆ‌ನ್ಸ್ ಇಲ್ಲದೆ ಪರದಾಡುತ್ತಿದ್ದಾರೆ. ಸಂಸದರ ಪತ್ನಿ ನಡೆಸುತ್ತಿರುವ ಮೂಡಿಗೆರೆ ಪಟ್ಟಣದಲ್ಲಿ ಹೊಯ್ಸಳ ಹೆಲ್ತ್ ಕ್ಲಿನಿಕ್ ನಡೆಸುತ್ತಿದ್ದು, ಅಧ್ಯಕ್ಷರಾಗಿ ಮುರುಳಿಕೃಷ್ಣ ಇರ್ವತ್ರಾಯ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಗೆ ನಿರ್ದೇಶಕರಾಗಿ ಅರ್ಪಿತ ಕಾರ್ಯ ನಿರ್ವಹಿಸಿದರು. ೨೫ ಲಕ್ಷ ರೂ.ಅನುದಾನವನ್ನು ಬೇರೆ ಕ್ಷೇತ್ರಕ್ಕೆ ಕೊಡುವ ಅವಕಾಶ ಇದ್ದರೂ ಸೊಸೈಟಿ,ಟ್ರಸ್ಟ್, ಸಹಕಾರ ಸಂಘಗಳಿಗೆ ಕೊಡುವಂತಿಲ್ಲ ಎನ್ನುವ ನಿಯಮ ಇದೆ. ನಿಯಮ ಉಲ್ಲಂಘನೆ ಮಾಡಿದ್ದರೆ ಅನುಷ್ಠಾನ ಅಧಿಕಾರಿಗಳುನೇರ ಹೊಣೆಗಾರರು. ಸಂಸದರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸೋಮವಾರ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಗುವುದು. ಮತ್ತೊಂದು ಗೋಪಿನಾಥ್ ಶೆಣೈ ಅವರ ಟ್ರಸ್ಟಿಗೂ ೨೩ ಲಕ್ಷ ರೂ. ನೀಡಿರುವುದು ಕಾನೂನುಬಾಹಿರವಾಗಿದೆ. ಹೊಯ್ಸಳ ಹೆಲ್ತ್ ಕೇರ್ ವಿರುದ್ಧ ಕ್ರಮಜರುಗಿಸಬೇಕು. ವೈಯಕ್ತಿಕ ಮತ್ತು ಮನೆಯ ನೆಂಟರಿಗೆ ಕೊಡುವ ಅವಕಾಶ ‌ಮಾಡುವುದಲ್ಲ. ಹಿಟ್ ಅಂಡ್ ರನ್ ಕೇಸ್ ನಂತೆ ಮಾಡಬೇಡಿ. ನೂರಕ್ಕೆ ನೂರರಷ್ಟು ‌ನಿಯಮ ಉಲ್ಲಂಘನೆ. ಏನಾದರೂ ಮಾತನಾಡಿದರೆ ಪೊಲೀಸ್ ಠಾಣೆಗೆ ದೂರು ಕೊಟ್ಟು ಬಾಯಿ ಮುಚ್ಚಿಸುವ ಕೆಲಸ ನಡೆಯಲ್ಲ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಪಂ ಮಾಜಿ‌ ಅಧ್ಯಕ್ಷ ಬಿ.ಎಂ.ರಾಮು,ಮೈಸೂರು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಮೂರ್ತಿ ಹಾಜರಿದ್ದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

15 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago