ಜಿಲ್ಲೆಗಳು

ಮೈಸೂರು : ಚಿಕಿತ್ಸೆ ಫಲಿಸದೆ ಡಾ. ಅಪ್ಪಾಜಿ ಗೌಡ ನಿಧನ

ಮೈಸೂರು : ಕೆಎಸ್ಒಯುನ ನಿವೃತ್ತ ಸಹಾಯಕ ಉಪನ್ಯಾಸಕ ಡಾ.  ಅಪ್ಪಾಜಿ ಗೌಡ ಅವರು ನಿಧನರಾಗಿದ್ದಾರೆ.

ಕಳೆದ ಶನಿವಾರದಂದು ಬೋಗಾದಿ ರಿಂಗ್ ರೋಡ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಪ್ಪಾಜಿ ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಅಪ್ಪಾಜಿ ಗೌಡ ಅವರ ಅಂತಿಮ ದರ್ಶನಕ್ಕೆ ಬೋಗಾದಿಯ ಬ್ಯಾಂಕರ್ಸ್ ಲೇಔಟ್ ಸಮೀಪದ ಸ್ವಗೃಹದಲ್ಲಿ ಬೆಳಿಗ್ಗೆ 11 ರಿಂದ 1 .30 ರವರೆಗೆ ವ್ಯವಸ್ಥೆ ಮಾಡಲಾಗಿದೆ.

ಮೃತರ ಅಂತ್ಯಸಂಸ್ಕಾರವನ್ನು ಸ್ವಗ್ರಾಮವಾದ ಕೆ. ಆರ್. ನಗರದ ಸಾಲಿಗ್ರಾಮ ಹೋಬಳಿಯ ನಾಟನಹಳ್ಳಿಯಲ್ಲಿ ಸಂಜೆ 4:30ಕ್ಕೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಪ್ಪಾಜಿ ಗೌಡ ಅವರ ನಿಧನಕ್ಕೆ ವಿಶ್ರಾಂತ ಕುಲಪತಿ ಪ್ರೂ. ಕೆ. ಎಸ್. ರಂಗಪ್ಪ ಸೇರಿದಂತೆ ಇತರ ಗಣ್ಯರು ಕಂಬನಿ ಮಿಡಿದಿದ್ದಾರೆ.

 

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

18 mins ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

6 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

9 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

13 hours ago