ಮೈಸೂರು : ತಾಲ್ಲೂಕಿನ ಮರಶೆ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ.
ರೈತ ಕೃಷ್ಣ ಎಂಬುವವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನು
ಕಳೆದ ಒಂದು ತಿಂಗಳಿನಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತಿದ್ದ ಹಿನ್ನೆಲೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದರು.
ಗ್ರಾಮಸ್ಥರು ದೂರು ಹಿನ್ನೆಲೆ ಬೋನು ಇರಿಸಲಾಗಿತ್ತು
ಸದ್ಯ ಬೋನಿಗೆ ಬಿದ್ದಿರುವ ಚಿರತೆಯನ್ನು ನೋಡಲು ಸುತ್ತ ಮುತ್ತಲ ಗ್ರಾಮಸ್ಥರು ಬರುತ್ತಿದ್ದು ಆರ್ ಎಫ್ ಓ ಸುರೇಂದ್ರ ಡಿಆರ್ಎಫ್ಓ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಚಿರತೆಗೆ ಚಿಪ್ಪು ಅಳವಡಿಸಿ ಸುರಕ್ಷಿತ ಪ್ರದೇಶಕ್ಕೆ ಬಿಡಲು ಸಿದ್ದತೆ
ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾಡಿಗೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.




