Mysore
29
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಮೈಸೂರು : ಆರ್.ಟಿ.ನಗರದಲ್ಲಿ ಚಿರತೆ!

ಮೈಸೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಚಿರತೆ ಹಾವಳಿ ಹೆಚ್ಚುತ್ತಲೇ ಇದ್ದು, ಇದೀಗ ನಗರ ಪ್ರದೇಶದಲ್ಲೂ ಚಿರತೆ ಕಾಣಿಸಿಕೊಳ್ಳುತ್ತಿರುವುದು ನಗರದ ಜನರ ನಿದ್ದೆಗೆಡಿಸಿದೆ. ವರ್ತುಲ ರಸ್ತೆ ಸಮೀಪ ಆರ್‌ಟಿ ನಗರದಲ್ಲಿರುವ ಉರುಕಾತೇಶ್ವರಿ ದೇವಸ್ಥಾನ ಬಳಿ ರಾತ್ರಿ ಚಿರತೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ.
ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮಣ್ಣಿನ ಗುಡ್ಡದ ಹಿಂದೆ ಅವಿತಿದ್ದ ಚಿರತೆ ರಸ್ತೆ ದಾಟುವ ದೃಶ್ಯ ಕಾರಿನಲ್ಲಿ ಸಾಗುತ್ತಿದ್ದವರ ಮೊಬೈಲ್‌ನಲ್ಲಿ ಸೆರೆಯಾಗಿದೆ. ರಸ್ತೆ ದಾಟುತ್ತಿದ್ದ ಚಿರತೆ ದೃಶ್ಯವನ್ನು ವೀಕ್ಷಿಸಿದ ಸ್ಥಳೀಯರು ಇದೀಗ ಭಯಗ್ರಸ್ಥರಾಗಿದ್ದಾರೆ.
ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಇತ್ತೀಚೆಗೆ ರಾಮಕೃಷ್ಣ ನಗರದಲ್ಲಿ ಕರುವೊಂದು ಪ್ರಾಣಿಯ ದಾಳಿಯಿಂದ ಮೃತಪಟ್ಟಿತ್ತು. ಇದು ನಾಯಿಗಳಿಂದ ಆಗಿರುವ ದಾಳಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದರು. ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಮೈದನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸೆರೆ ಶುಕ್ರವಾರ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಆದರೆ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ ತೀವ್ರ ಆತಂಕ ಮೂಡಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!