ಮೈಸೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಚಿರತೆ ಹಾವಳಿ ಹೆಚ್ಚುತ್ತಲೇ ಇದ್ದು, ಇದೀಗ ನಗರ ಪ್ರದೇಶದಲ್ಲೂ ಚಿರತೆ ಕಾಣಿಸಿಕೊಳ್ಳುತ್ತಿರುವುದು ನಗರದ ಜನರ ನಿದ್ದೆಗೆಡಿಸಿದೆ. ವರ್ತುಲ ರಸ್ತೆ ಸಮೀಪ ಆರ್ಟಿ ನಗರದಲ್ಲಿರುವ ಉರುಕಾತೇಶ್ವರಿ ದೇವಸ್ಥಾನ ಬಳಿ ರಾತ್ರಿ ಚಿರತೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ.
ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮಣ್ಣಿನ ಗುಡ್ಡದ ಹಿಂದೆ ಅವಿತಿದ್ದ ಚಿರತೆ ರಸ್ತೆ ದಾಟುವ ದೃಶ್ಯ ಕಾರಿನಲ್ಲಿ ಸಾಗುತ್ತಿದ್ದವರ ಮೊಬೈಲ್ನಲ್ಲಿ ಸೆರೆಯಾಗಿದೆ. ರಸ್ತೆ ದಾಟುತ್ತಿದ್ದ ಚಿರತೆ ದೃಶ್ಯವನ್ನು ವೀಕ್ಷಿಸಿದ ಸ್ಥಳೀಯರು ಇದೀಗ ಭಯಗ್ರಸ್ಥರಾಗಿದ್ದಾರೆ.
ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಇತ್ತೀಚೆಗೆ ರಾಮಕೃಷ್ಣ ನಗರದಲ್ಲಿ ಕರುವೊಂದು ಪ್ರಾಣಿಯ ದಾಳಿಯಿಂದ ಮೃತಪಟ್ಟಿತ್ತು. ಇದು ನಾಯಿಗಳಿಂದ ಆಗಿರುವ ದಾಳಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದರು. ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಮೈದನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸೆರೆ ಶುಕ್ರವಾರ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಆದರೆ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ ತೀವ್ರ ಆತಂಕ ಮೂಡಿಸಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…