ಜಿಲ್ಲೆಗಳು

ಮೈಸೂರಿನಲ್ಲಿ ಮತ್ತೆ ಎರಡು ಚಿರತೆ ಬೋನಿಗೆ

ಮೈಸೂರಿನ ಮರಶೆ ಗ್ರಾಮ, ಹುಣಸೂರಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ಎರಡು ಚಿರತೆಗಳು ಬೋನಿಗೆ

ಮೈಸೂರು: ಜಿಲ್ಲೆಯಲ್ಲಿ ಮತ್ತೆ ಎರಡು ಚಿರತೆಗಳು ಬೋನಿಗೆ ಬಿದ್ದಿವೆ. ವರುಣಾ ಹೋಬಳಿಗೆ ಸೇರಿದ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ಮರಶೆ ಗ್ರಾಮದಲ್ಲಿ ನಾಲ್ಕು ವರ್ಷದ ಚಿರತೆಯೊಂದು ಬೋನಿಗೆ ಬಿದ್ದಿದೆ.

ವಾರದ ಹಿಂದೆ ಇಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಕೃಷ್ಣಪ್ಪ ಎಂಬವರ ಜಮೀನಿನಲ್ಲಿ ಅರಣ್ಯ ಸಿಬ್ಬಂದಿ ಬೋನು ಇಟ್ಟಿದ್ದರು. ಭಾನುವಾರ ಸುಮಾರು ನಾಲ್ಕು ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ. ಆರ್ ಎಫ್ ಓ ಸುರೇಂದ್ರ, ಡಿಆರ್‌ಎಫ್ಓ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿಯಲಾಗಿದ್ದು, ಚಿಪ್‌ ಅಳವಡಿಸಿದ ಬಳಿಕ ಅರಣ್ಯಕ್ಕೆ ಬಿಡಲಾಗಿದೆ ಎಂದು ಮೈಸೂರು ಡಿಸಿಎಫ್ ಡಾ.ಕೆ.ಎನ್.ಬಸವರಾಜು ತಿಳಿಸಿದ್ದಾರೆ.
ಇದೇ ವೇಳೆ ಹುಣಸೂರು ತಾಲ್ಲೂಕಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ 15 ದಿನಗಳ ಅಂತರದಲ್ಲಿ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ. ಶುಕ್ರವಾರ ರಾತ್ರಿ ಸುಮಾರು 4 ವರ್ಷದ ಗಂಡು ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಫೆ.16ರ ಗುರುವಾರ ಹಬ್ಬನಕುಪ್ಪೆ ನಾಗರಾಜಗೌಡರ ಜಮೀನಿನ ಮನೆ ಬಳಿ ಚಿರತೆ ಕರುವೊಂದನ್ನು ತಿಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಚಿರತೆ ಸೆರೆಗೆ ಬೋನು ಇಡಲಾಗಿತ್ತು. ಕರುವಿನ ಮಾಂಸವನ್ನು ತಿನ್ನಲು ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಸೆರೆಯಾದ ಚಿರತೆಯನ್ನು ಆರ್‌ ಎಫ್ ಓ ನಂದಕುಮಾರ್ ನೇತೃತ್ವದ ತಂಡವು ಬಂಡೀಪುರದ ಮೂಲೆ ಹೊಳೆ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಬಿಟ್ಟಿದೆ ಎಂದು ಡಿಸಿಎಫ್ ಸೀಮಾ ತಿಳಿಸಿದ್ದಾರೆ. ಇದೇ ಗ್ರಾಮದ ಲೋಕೇಶ್ ಎಂಬವರ ಜಮೀನಿನಲ್ಲಿ 15 ದಿನಗಳ ಹಿಂದೆ ನಾಲ್ಕು ವರ್ಷದ ಹೆಣ್ಣು ಚಿರತೆಯನ್ನು ಸೆರೆ ಹಿಡಿಯಲಾಗಿತ್ತು.
ಮೈಸೂರು ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 65ಕ್ಕೂ ಹೆಚ್ಚು ಚಿರತೆಗಳನ್ನು ಸೆರೆ ಹಿಡಿದು ಅರಣ್ಯಕ್ಕೆ ಬಿಡಲಾಗಿದೆ. ತಿ. ನರಸೀಪುರ ಮತ್ತು ಹುಣಸೂರು ಭಾಗದಲ್ಲಿ ಅತಿ ಹೆಚ್ಚು ಚಿರತೆಗಳು ಸೆರೆಯಾಗಿವೆ

andolanait

Recent Posts

ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ಮಾರ್ಚ್.‌6ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ಇಂದಿನಿಂದ ಬಜೆಟ್‌ ಅಧಿವೇಶನ ಶುರುವಾಗಲಿದೆ. ಬಜೆಟ್‌ ಮೇಲಿನ ಕುರಿತು…

3 mins ago

ಇಸ್ರೇಲ್-ಇರಾನ್‌ ಸಂಘರ್ಷದ ಎಫೆಕ್ಟ್:‌ ಬೆಂಗಳೂರಿನಲ್ಲಿಂದು 21 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್‌ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ.…

21 mins ago

ದಾಖಲೆ ಬಜೆಟ್; ಹಾದಿ ಸುಲಭದ್ದಲ್ಲ

ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಇವರು ಲಕ್ಕಿ ಪೊಲಿಟಿಷಿಯನ್ ಡುಕಾಟಿ ರಾಮಚಂದ್ರಪ್ಪ

ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…

4 hours ago

ಅಭಿವೃದ್ಧಿಯತ್ತ ಕೊಡಗಿನ ಸರ್ಕಾರಿ ಗೋಶಾಲೆ

ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ …

4 hours ago

60 ದಿನಗಳಲ್ಲಿ ಕಲ್ಲಂಗಡಿ ಬೆಳೆದು ಲಾಭ ಗಳಿಸಿದ ರೈತ

ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ…

4 hours ago