ಮೈಸೂರಿನ ಮರಶೆ ಗ್ರಾಮ, ಹುಣಸೂರಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ಎರಡು ಚಿರತೆಗಳು ಬೋನಿಗೆ
ಮೈಸೂರು: ಜಿಲ್ಲೆಯಲ್ಲಿ ಮತ್ತೆ ಎರಡು ಚಿರತೆಗಳು ಬೋನಿಗೆ ಬಿದ್ದಿವೆ. ವರುಣಾ ಹೋಬಳಿಗೆ ಸೇರಿದ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ಮರಶೆ ಗ್ರಾಮದಲ್ಲಿ ನಾಲ್ಕು ವರ್ಷದ ಚಿರತೆಯೊಂದು ಬೋನಿಗೆ ಬಿದ್ದಿದೆ.
ವಾರದ ಹಿಂದೆ ಇಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಕೃಷ್ಣಪ್ಪ ಎಂಬವರ ಜಮೀನಿನಲ್ಲಿ ಅರಣ್ಯ ಸಿಬ್ಬಂದಿ ಬೋನು ಇಟ್ಟಿದ್ದರು. ಭಾನುವಾರ ಸುಮಾರು ನಾಲ್ಕು ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ. ಆರ್ ಎಫ್ ಓ ಸುರೇಂದ್ರ, ಡಿಆರ್ಎಫ್ಓ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿಯಲಾಗಿದ್ದು, ಚಿಪ್ ಅಳವಡಿಸಿದ ಬಳಿಕ ಅರಣ್ಯಕ್ಕೆ ಬಿಡಲಾಗಿದೆ ಎಂದು ಮೈಸೂರು ಡಿಸಿಎಫ್ ಡಾ.ಕೆ.ಎನ್.ಬಸವರಾಜು ತಿಳಿಸಿದ್ದಾರೆ.
ಇದೇ ವೇಳೆ ಹುಣಸೂರು ತಾಲ್ಲೂಕಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ 15 ದಿನಗಳ ಅಂತರದಲ್ಲಿ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ. ಶುಕ್ರವಾರ ರಾತ್ರಿ ಸುಮಾರು 4 ವರ್ಷದ ಗಂಡು ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಫೆ.16ರ ಗುರುವಾರ ಹಬ್ಬನಕುಪ್ಪೆ ನಾಗರಾಜಗೌಡರ ಜಮೀನಿನ ಮನೆ ಬಳಿ ಚಿರತೆ ಕರುವೊಂದನ್ನು ತಿಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಚಿರತೆ ಸೆರೆಗೆ ಬೋನು ಇಡಲಾಗಿತ್ತು. ಕರುವಿನ ಮಾಂಸವನ್ನು ತಿನ್ನಲು ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಸೆರೆಯಾದ ಚಿರತೆಯನ್ನು ಆರ್ ಎಫ್ ಓ ನಂದಕುಮಾರ್ ನೇತೃತ್ವದ ತಂಡವು ಬಂಡೀಪುರದ ಮೂಲೆ ಹೊಳೆ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಬಿಟ್ಟಿದೆ ಎಂದು ಡಿಸಿಎಫ್ ಸೀಮಾ ತಿಳಿಸಿದ್ದಾರೆ. ಇದೇ ಗ್ರಾಮದ ಲೋಕೇಶ್ ಎಂಬವರ ಜಮೀನಿನಲ್ಲಿ 15 ದಿನಗಳ ಹಿಂದೆ ನಾಲ್ಕು ವರ್ಷದ ಹೆಣ್ಣು ಚಿರತೆಯನ್ನು ಸೆರೆ ಹಿಡಿಯಲಾಗಿತ್ತು.
ಮೈಸೂರು ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 65ಕ್ಕೂ ಹೆಚ್ಚು ಚಿರತೆಗಳನ್ನು ಸೆರೆ ಹಿಡಿದು ಅರಣ್ಯಕ್ಕೆ ಬಿಡಲಾಗಿದೆ. ತಿ. ನರಸೀಪುರ ಮತ್ತು ಹುಣಸೂರು ಭಾಗದಲ್ಲಿ ಅತಿ ಹೆಚ್ಚು ಚಿರತೆಗಳು ಸೆರೆಯಾಗಿವೆ
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…