ಮೈಸೂರಿನ ಮರಶೆ ಗ್ರಾಮ, ಹುಣಸೂರಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ಎರಡು ಚಿರತೆಗಳು ಬೋನಿಗೆ
ಮೈಸೂರು: ಜಿಲ್ಲೆಯಲ್ಲಿ ಮತ್ತೆ ಎರಡು ಚಿರತೆಗಳು ಬೋನಿಗೆ ಬಿದ್ದಿವೆ. ವರುಣಾ ಹೋಬಳಿಗೆ ಸೇರಿದ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ಮರಶೆ ಗ್ರಾಮದಲ್ಲಿ ನಾಲ್ಕು ವರ್ಷದ ಚಿರತೆಯೊಂದು ಬೋನಿಗೆ ಬಿದ್ದಿದೆ.
ವಾರದ ಹಿಂದೆ ಇಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಕೃಷ್ಣಪ್ಪ ಎಂಬವರ ಜಮೀನಿನಲ್ಲಿ ಅರಣ್ಯ ಸಿಬ್ಬಂದಿ ಬೋನು ಇಟ್ಟಿದ್ದರು. ಭಾನುವಾರ ಸುಮಾರು ನಾಲ್ಕು ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ. ಆರ್ ಎಫ್ ಓ ಸುರೇಂದ್ರ, ಡಿಆರ್ಎಫ್ಓ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿಯಲಾಗಿದ್ದು, ಚಿಪ್ ಅಳವಡಿಸಿದ ಬಳಿಕ ಅರಣ್ಯಕ್ಕೆ ಬಿಡಲಾಗಿದೆ ಎಂದು ಮೈಸೂರು ಡಿಸಿಎಫ್ ಡಾ.ಕೆ.ಎನ್.ಬಸವರಾಜು ತಿಳಿಸಿದ್ದಾರೆ.
ಇದೇ ವೇಳೆ ಹುಣಸೂರು ತಾಲ್ಲೂಕಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ 15 ದಿನಗಳ ಅಂತರದಲ್ಲಿ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ. ಶುಕ್ರವಾರ ರಾತ್ರಿ ಸುಮಾರು 4 ವರ್ಷದ ಗಂಡು ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಫೆ.16ರ ಗುರುವಾರ ಹಬ್ಬನಕುಪ್ಪೆ ನಾಗರಾಜಗೌಡರ ಜಮೀನಿನ ಮನೆ ಬಳಿ ಚಿರತೆ ಕರುವೊಂದನ್ನು ತಿಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಚಿರತೆ ಸೆರೆಗೆ ಬೋನು ಇಡಲಾಗಿತ್ತು. ಕರುವಿನ ಮಾಂಸವನ್ನು ತಿನ್ನಲು ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಸೆರೆಯಾದ ಚಿರತೆಯನ್ನು ಆರ್ ಎಫ್ ಓ ನಂದಕುಮಾರ್ ನೇತೃತ್ವದ ತಂಡವು ಬಂಡೀಪುರದ ಮೂಲೆ ಹೊಳೆ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಬಿಟ್ಟಿದೆ ಎಂದು ಡಿಸಿಎಫ್ ಸೀಮಾ ತಿಳಿಸಿದ್ದಾರೆ. ಇದೇ ಗ್ರಾಮದ ಲೋಕೇಶ್ ಎಂಬವರ ಜಮೀನಿನಲ್ಲಿ 15 ದಿನಗಳ ಹಿಂದೆ ನಾಲ್ಕು ವರ್ಷದ ಹೆಣ್ಣು ಚಿರತೆಯನ್ನು ಸೆರೆ ಹಿಡಿಯಲಾಗಿತ್ತು.
ಮೈಸೂರು ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 65ಕ್ಕೂ ಹೆಚ್ಚು ಚಿರತೆಗಳನ್ನು ಸೆರೆ ಹಿಡಿದು ಅರಣ್ಯಕ್ಕೆ ಬಿಡಲಾಗಿದೆ. ತಿ. ನರಸೀಪುರ ಮತ್ತು ಹುಣಸೂರು ಭಾಗದಲ್ಲಿ ಅತಿ ಹೆಚ್ಚು ಚಿರತೆಗಳು ಸೆರೆಯಾಗಿವೆ
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…