ಬೋನಿಗೆ ಬಿದ್ದ ಚಿರತೆ: ಮಾರಶೆಟ್ಟಿ ಗ್ರಾಮಸ್ಥರು ನಿಟ್ಟುಸಿರು
ಮೈಸೂರು: ಚಾಮುಂಡಿ ಬೆಟ್ಟಕ್ಕೆ ಸಮೀಪವಿರುವ ಮೈಸೂರು ತಾಲ್ಲೂಕಿನ ಮಾರಶೆಟ್ಟಿ ಗ್ರಾಮದ ಹೊರವಲಯದಲ್ಲಿ ಸುಮಾರು ಮೂರು ವರ್ಷ ಪ್ರಾಯದ ಹೆಣ್ಣು ಚಿರತೆಯೊಂದು ಬೋನಿಗೆ ಬಿದ್ದಿದೆ.
ಗ್ರಾಮದ ಹೊರವಲಯದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಜಾನುವಾರುಗಳನ್ನು ತಿಂದು ಪರಾರಿಯಾಗುತ್ತಿತ್ತು.
ಇದರ ಕಾಟಕ್ಕೆ ಬೇಸತ್ತ ಗ್ರಾಮಸ್ಥರು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಶುಕ್ರವಾರ ರಾತ್ರಿ ಗ್ರಾಮಕ್ಕೆ ಆಹಾರ ಅರಸಿ ಬಂದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಚಿರತೆಯನ್ನು ರಕ್ಷಿಸಿ ನಾಗರಹೊಳೆ ಅಭಯಾರಣ್ಯಕ್ಕೆ ಕಳುಹಿಸಲಾಗಿದೆ.
ಮೈಸೂರು ಜಿಲ್ಲೆಯ ನಾನಾ ಭಾಗಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟು ಕಾಯುತ್ತಿದ್ದಾರೆ. ಶುಕ್ರವಾರ ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿ ಬಿ. ಸೀ ಹಳ್ಳಿ ಬಳಿ ಮೂರು ಚಿರತೆ ಮರಿಗಳು ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದ್ದವು. ಈಗ ಇದರ ತಾಯಿಯನ್ನು ಹಿಡಿಯಲು ಬೋನು ಇರಿಸಲಾಗಿದೆ.
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…