ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ದ ಮಾಜಿ ಅಧ್ಯಕ್ಷರು ಹಾಗೂ ಎಂ.ಸಿ.ಡಿ.ಸಿ.ಸಿ. ಬ್ಯಾಂಕ್ ಮತ್ತು ಮೈಮುಲ್ ನ ಮಾಜಿ ಅಧ್ಯಕ್ಷರಾದ ಶ್ರೀ.ಸಿ.ಬಸವೇಗೌಡ ರವರ ತಾಯಿ ಈರಮ್ಮ (99) ರವರು ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ.
ಮಧ್ಯಾಹ್ನ 2.00 ಗಂಟೆಯವರೆಗೆ ಮೈಸೂರಿನ ಗಂಗೋತ್ರಿ ಬಡಾವಣೆಯಲ್ಲಿ ಇರುವ ಬಸವೇಗೌಡರ ನಿವಾಸದಲ್ಲಿ ಮೃತರ ದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಅವರ ಸ್ವಗೃಹ ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿಯ ಮಾದೇಗೌಡನಹುಂಡಿಯಲ್ಲಿ ಸಂಜೆ 6.00 ಗಂಟೆಗೆ ಅಂತ್ಯ ಸಂಸ್ಕಾರ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈರಮ್ಮರವರು ಬಸವೇಗೌಡರು ಸೇರಿದಂತೆ ಮತ್ತೋರ್ವ ಪುತ್ರ ತಿ.ನರಸೀಪುರ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಸಿ.ನರಸೇಗೌಡ, ಪುತಿಯರಾದ ಶಾಂತಮ್ಮ, ಭಾಗ್ಯ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಈರಮ್ಮರವರು ಹಿರಿಯ ರಾಜಕಾರಣಿಗಳು, ಮಾಜಿ ಶಾಸಕರಾದ ದಿವಂಗತ ಕೆ.ಕೆಂಪೀರೇಗೌಡರ ಹಿರಿಯ ಸಹೋದರಿಯೂ ಕೂಡ ಹೌದು.
ಲೋಕಸಭಾ ಸದಸ್ಯರಾದ ವಿ.ಶ್ರೀನಿವಾಸಪ್ರಸಾದ್, ಶಾಸಕರಾದ ಜಿ.ಟಿ.ದೇವೇಗೌಡ, ಮರಿತಿಬ್ಬೇಗೌಡ, ಅಶ್ವಿನ್ ಕುಮಾರ್, ಎಲ್.ನಾಗೇಂದ್ರ, ಮಾಜಿ ಶಾಸಕರಾದ ವಾಸು, ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕವೀಶ್ ಗೌಡ, ಮೈಮುಲ್ ಮಾಜಿ ಅಧ್ಯಕ್ಷರುಗಳಾದ ಕೆ.ಉಮಾಶಂಕರ್, ಎಸ್.ರಾಮಕೃಷ್ಣೇಗೌಡ, ಮಾಜಿ ಮೂಡಾ ಅಧ್ಯಕ್ಷರಾದ ಪಿ.ಗೋವಿಂದರಾಜು, ಮಾಜಿ ಉಪ ಮೇಯರ್ ಸುರೇಶ್ ಬಾಬು, ಎಂ.ಸಿ.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರಾದ ಚಿಕ್ಕಳ್ಳಿ ಕುಮಾರ, ಬಿ.ಎನ್.ಸದಾನಂದ, ವಿವಿಧ ಕ್ಷೇತ್ರದ ಗಣ್ಯರುಗಳು ಸೇರಿದಂತೆ ಇನ್ನೂ ಅನೇಕ ಮಂದಿ ಮೃತರ ಅಂತಿಮ ದರ್ಶನ ಪಡೆದರು
ಮಾಜಿ ಸಚಿವರುಗಳಾದ ಪಿ.ಜಿ.ಆರ್ ಸಿಂಧ್ಯ ಮತ್ತು ಎಂ.ಸಿ.ನಾಣಯ್ಯ ರವರುಗಳು ಬಸವೇಗೌಡರಿಗೆ ದೂರವಾಣಿ ಮೂಲಕ ಕರೆ ಮಾಡಿ ಸಾಂತ್ವನ ಹೇಳಿ ಸಂತಾಪ ಸೂಚಿಸಿದ್ದಾರೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…