ಜಿಲ್ಲೆಗಳು

ಮೈಮುಲ್ ನ ಮಾಜಿ ಅಧ್ಯಕ್ಷರಾದ ಸಿ.ಬಸವೇಗೌಡರ ತಾಯಿ ನಿಧನ

ಮೈಸೂರು :  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ದ ಮಾಜಿ ಅಧ್ಯಕ್ಷರು ಹಾಗೂ ಎಂ.ಸಿ.ಡಿ.ಸಿ.ಸಿ. ಬ್ಯಾಂಕ್ ಮತ್ತು ಮೈಮುಲ್ ನ ಮಾಜಿ ಅಧ್ಯಕ್ಷರಾದ ಶ್ರೀ.ಸಿ.ಬಸವೇಗೌಡ ರವರ ತಾಯಿ ಈರಮ್ಮ (99) ರವರು ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ.

ಮಧ್ಯಾಹ್ನ 2.00 ಗಂಟೆಯವರೆಗೆ ಮೈಸೂರಿನ ಗಂಗೋತ್ರಿ ಬಡಾವಣೆಯಲ್ಲಿ ಇರುವ ಬಸವೇಗೌಡರ ನಿವಾಸದಲ್ಲಿ ಮೃತರ ದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಅವರ ಸ್ವಗೃಹ ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿಯ ಮಾದೇಗೌಡನಹುಂಡಿಯಲ್ಲಿ ಸಂಜೆ 6.00 ಗಂಟೆಗೆ ಅಂತ್ಯ ಸಂಸ್ಕಾರ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈರಮ್ಮರವರು ಬಸವೇಗೌಡರು ಸೇರಿದಂತೆ ಮತ್ತೋರ್ವ ಪುತ್ರ ತಿ.ನರಸೀಪುರ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಸಿ.ನರಸೇಗೌಡ, ಪುತಿಯರಾದ ಶಾಂತಮ್ಮ, ಭಾಗ್ಯ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಈರಮ್ಮರವರು ಹಿರಿಯ ರಾಜಕಾರಣಿಗಳು, ಮಾಜಿ ಶಾಸಕರಾದ ದಿವಂಗತ ಕೆ.ಕೆಂಪೀರೇಗೌಡರ ಹಿರಿಯ ಸಹೋದರಿಯೂ ಕೂಡ ಹೌದು.

ಲೋಕಸಭಾ ಸದಸ್ಯರಾದ ವಿ.ಶ್ರೀನಿವಾಸಪ್ರಸಾದ್, ಶಾಸಕರಾದ ಜಿ.ಟಿ.ದೇವೇಗೌಡ, ಮರಿತಿಬ್ಬೇಗೌಡ, ಅಶ್ವಿನ್ ಕುಮಾರ್, ಎಲ್.ನಾಗೇಂದ್ರ, ಮಾಜಿ ಶಾಸಕರಾದ ವಾಸು, ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕವೀಶ್ ಗೌಡ, ಮೈಮುಲ್ ಮಾಜಿ ಅಧ್ಯಕ್ಷರುಗಳಾದ ಕೆ.ಉಮಾಶಂಕರ್, ಎಸ್.ರಾಮಕೃಷ್ಣೇಗೌಡ, ಮಾಜಿ ಮೂಡಾ ಅಧ್ಯಕ್ಷರಾದ ಪಿ.ಗೋವಿಂದರಾಜು, ಮಾಜಿ ಉಪ ಮೇಯರ್ ಸುರೇಶ್ ಬಾಬು, ಎಂ.ಸಿ.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರಾದ ಚಿಕ್ಕಳ್ಳಿ ಕುಮಾರ, ಬಿ.ಎನ್.ಸದಾನಂದ, ವಿವಿಧ ಕ್ಷೇತ್ರದ ಗಣ್ಯರುಗಳು ಸೇರಿದಂತೆ ಇನ್ನೂ ಅನೇಕ ಮಂದಿ ಮೃತರ ಅಂತಿಮ ದರ್ಶನ ಪಡೆದರು

ಮಾಜಿ ಸಚಿವರುಗಳಾದ ಪಿ.ಜಿ.ಆರ್ ಸಿಂಧ್ಯ ಮತ್ತು ಎಂ.ಸಿ.ನಾಣಯ್ಯ ರವರುಗಳು ಬಸವೇಗೌಡರಿಗೆ ದೂರವಾಣಿ ಮೂಲಕ ಕರೆ ಮಾಡಿ ಸಾಂತ್ವನ ಹೇಳಿ ಸಂತಾಪ ಸೂಚಿಸಿದ್ದಾರೆ.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

52 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago