ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ದ ಮಾಜಿ ಅಧ್ಯಕ್ಷರು ಹಾಗೂ ಎಂ.ಸಿ.ಡಿ.ಸಿ.ಸಿ. ಬ್ಯಾಂಕ್ ಮತ್ತು ಮೈಮುಲ್ ನ ಮಾಜಿ ಅಧ್ಯಕ್ಷರಾದ ಶ್ರೀ.ಸಿ.ಬಸವೇಗೌಡ ರವರ ತಾಯಿ ಈರಮ್ಮ (99) ರವರು ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ.
ಮಧ್ಯಾಹ್ನ 2.00 ಗಂಟೆಯವರೆಗೆ ಮೈಸೂರಿನ ಗಂಗೋತ್ರಿ ಬಡಾವಣೆಯಲ್ಲಿ ಇರುವ ಬಸವೇಗೌಡರ ನಿವಾಸದಲ್ಲಿ ಮೃತರ ದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಅವರ ಸ್ವಗೃಹ ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿಯ ಮಾದೇಗೌಡನಹುಂಡಿಯಲ್ಲಿ ಸಂಜೆ 6.00 ಗಂಟೆಗೆ ಅಂತ್ಯ ಸಂಸ್ಕಾರ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈರಮ್ಮರವರು ಬಸವೇಗೌಡರು ಸೇರಿದಂತೆ ಮತ್ತೋರ್ವ ಪುತ್ರ ತಿ.ನರಸೀಪುರ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಸಿ.ನರಸೇಗೌಡ, ಪುತಿಯರಾದ ಶಾಂತಮ್ಮ, ಭಾಗ್ಯ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಈರಮ್ಮರವರು ಹಿರಿಯ ರಾಜಕಾರಣಿಗಳು, ಮಾಜಿ ಶಾಸಕರಾದ ದಿವಂಗತ ಕೆ.ಕೆಂಪೀರೇಗೌಡರ ಹಿರಿಯ ಸಹೋದರಿಯೂ ಕೂಡ ಹೌದು.
ಲೋಕಸಭಾ ಸದಸ್ಯರಾದ ವಿ.ಶ್ರೀನಿವಾಸಪ್ರಸಾದ್, ಶಾಸಕರಾದ ಜಿ.ಟಿ.ದೇವೇಗೌಡ, ಮರಿತಿಬ್ಬೇಗೌಡ, ಅಶ್ವಿನ್ ಕುಮಾರ್, ಎಲ್.ನಾಗೇಂದ್ರ, ಮಾಜಿ ಶಾಸಕರಾದ ವಾಸು, ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕವೀಶ್ ಗೌಡ, ಮೈಮುಲ್ ಮಾಜಿ ಅಧ್ಯಕ್ಷರುಗಳಾದ ಕೆ.ಉಮಾಶಂಕರ್, ಎಸ್.ರಾಮಕೃಷ್ಣೇಗೌಡ, ಮಾಜಿ ಮೂಡಾ ಅಧ್ಯಕ್ಷರಾದ ಪಿ.ಗೋವಿಂದರಾಜು, ಮಾಜಿ ಉಪ ಮೇಯರ್ ಸುರೇಶ್ ಬಾಬು, ಎಂ.ಸಿ.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರಾದ ಚಿಕ್ಕಳ್ಳಿ ಕುಮಾರ, ಬಿ.ಎನ್.ಸದಾನಂದ, ವಿವಿಧ ಕ್ಷೇತ್ರದ ಗಣ್ಯರುಗಳು ಸೇರಿದಂತೆ ಇನ್ನೂ ಅನೇಕ ಮಂದಿ ಮೃತರ ಅಂತಿಮ ದರ್ಶನ ಪಡೆದರು
ಮಾಜಿ ಸಚಿವರುಗಳಾದ ಪಿ.ಜಿ.ಆರ್ ಸಿಂಧ್ಯ ಮತ್ತು ಎಂ.ಸಿ.ನಾಣಯ್ಯ ರವರುಗಳು ಬಸವೇಗೌಡರಿಗೆ ದೂರವಾಣಿ ಮೂಲಕ ಕರೆ ಮಾಡಿ ಸಾಂತ್ವನ ಹೇಳಿ ಸಂತಾಪ ಸೂಚಿಸಿದ್ದಾರೆ.
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…