ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ದ ಮಾಜಿ ಅಧ್ಯಕ್ಷರು ಹಾಗೂ ಎಂ.ಸಿ.ಡಿ.ಸಿ.ಸಿ. ಬ್ಯಾಂಕ್ ಮತ್ತು ಮೈಮುಲ್ ನ ಮಾಜಿ ಅಧ್ಯಕ್ಷರಾದ ಶ್ರೀ.ಸಿ.ಬಸವೇಗೌಡ ರವರ ತಾಯಿ ಈರಮ್ಮ (99) ರವರು ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ.
ಮಧ್ಯಾಹ್ನ 2.00 ಗಂಟೆಯವರೆಗೆ ಮೈಸೂರಿನ ಗಂಗೋತ್ರಿ ಬಡಾವಣೆಯಲ್ಲಿ ಇರುವ ಬಸವೇಗೌಡರ ನಿವಾಸದಲ್ಲಿ ಮೃತರ ದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಅವರ ಸ್ವಗೃಹ ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿಯ ಮಾದೇಗೌಡನಹುಂಡಿಯಲ್ಲಿ ಸಂಜೆ 6.00 ಗಂಟೆಗೆ ಅಂತ್ಯ ಸಂಸ್ಕಾರ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈರಮ್ಮರವರು ಬಸವೇಗೌಡರು ಸೇರಿದಂತೆ ಮತ್ತೋರ್ವ ಪುತ್ರ ತಿ.ನರಸೀಪುರ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಸಿ.ನರಸೇಗೌಡ, ಪುತಿಯರಾದ ಶಾಂತಮ್ಮ, ಭಾಗ್ಯ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಈರಮ್ಮರವರು ಹಿರಿಯ ರಾಜಕಾರಣಿಗಳು, ಮಾಜಿ ಶಾಸಕರಾದ ದಿವಂಗತ ಕೆ.ಕೆಂಪೀರೇಗೌಡರ ಹಿರಿಯ ಸಹೋದರಿಯೂ ಕೂಡ ಹೌದು.
ಲೋಕಸಭಾ ಸದಸ್ಯರಾದ ವಿ.ಶ್ರೀನಿವಾಸಪ್ರಸಾದ್, ಶಾಸಕರಾದ ಜಿ.ಟಿ.ದೇವೇಗೌಡ, ಮರಿತಿಬ್ಬೇಗೌಡ, ಅಶ್ವಿನ್ ಕುಮಾರ್, ಎಲ್.ನಾಗೇಂದ್ರ, ಮಾಜಿ ಶಾಸಕರಾದ ವಾಸು, ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕವೀಶ್ ಗೌಡ, ಮೈಮುಲ್ ಮಾಜಿ ಅಧ್ಯಕ್ಷರುಗಳಾದ ಕೆ.ಉಮಾಶಂಕರ್, ಎಸ್.ರಾಮಕೃಷ್ಣೇಗೌಡ, ಮಾಜಿ ಮೂಡಾ ಅಧ್ಯಕ್ಷರಾದ ಪಿ.ಗೋವಿಂದರಾಜು, ಮಾಜಿ ಉಪ ಮೇಯರ್ ಸುರೇಶ್ ಬಾಬು, ಎಂ.ಸಿ.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರಾದ ಚಿಕ್ಕಳ್ಳಿ ಕುಮಾರ, ಬಿ.ಎನ್.ಸದಾನಂದ, ವಿವಿಧ ಕ್ಷೇತ್ರದ ಗಣ್ಯರುಗಳು ಸೇರಿದಂತೆ ಇನ್ನೂ ಅನೇಕ ಮಂದಿ ಮೃತರ ಅಂತಿಮ ದರ್ಶನ ಪಡೆದರು
ಮಾಜಿ ಸಚಿವರುಗಳಾದ ಪಿ.ಜಿ.ಆರ್ ಸಿಂಧ್ಯ ಮತ್ತು ಎಂ.ಸಿ.ನಾಣಯ್ಯ ರವರುಗಳು ಬಸವೇಗೌಡರಿಗೆ ದೂರವಾಣಿ ಮೂಲಕ ಕರೆ ಮಾಡಿ ಸಾಂತ್ವನ ಹೇಳಿ ಸಂತಾಪ ಸೂಚಿಸಿದ್ದಾರೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…