ಜನ ಸಂಚಾರಕ್ಕೆ ಅಡಚಣೆ, ನಿರ್ವಹಣೆ ಮರೆತು ಕುಳಿತ ಲೋಕೋಪಯೋಗಿ ಇಲಾಖೆ
ಪ್ರಶಾಂತ್ ಎಸ್ ಮೈಸೂರು.
ಮೈಸೂರು: ಎರಡು ದಶಕದ ಹಿಂದೆ ರೂಪುಗೊಂಡ ಮೈಸೂರು- ಹ್ಯಾಂಡ್ಪೋಸ್ಟ್- ಮಾನಂದವಾಡಿ ರಾಜ್ಯ ಹೆದ್ದಾರಿ ನಿರ್ವಹಣೆ ಕೊರತಯಿಂದ ಹಾಳಾಗಿದ್ದು, ಜನ ತೊಂದರೆ ನಡುವೆ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.
ಮೊಣಕಾಲುದ್ದದ ಗುಂಡಿಗಳು ಬಿದ್ದಿರುವ ಈ ರಸ್ತೆಯಲ್ಲಿ ಸವಾರರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.ಮೈಸೂರಿನಿಂದ ಎಚ್ ಡಿ ಕೋಟೆ ಹಾಗೂ ಸರಗೂರಿಗೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಸಂಪೂರ್ಣ ಹದಗೆಟ್ಟಿರುವ ಕರಿಗಳ ಗೇಟ್, ಕೋಡಹಳ್ಳಿಮರ ಗೇಟ್, ಕೋಳಗಾಲ, ಮಾದಾಪುರ, ಹೈರಿಗೆ, ಎಚ್ ಮಟಕೆರೆ,ಈ ರಸ್ತೆಯಲ್ಲಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಯ ದುಸ್ಥಿತಿ ಹಿನ್ನೆಲೆ ಜನಪ್ರತಿನಿಧಿಗಳಿಗೆ ಮತ್ತು ಸರಕಾರಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಲಘು ವಾಹನ ಚಾಲಕರು ವಾಹನ ಚಲಾಯಿಸುವ ಸಂದರ್ಭದಲ್ಲಿ ಕಾರು, ಬೈಕ್ಗಳು ಗುಂಡಿಗೆ ಬಿದ್ದು ವಾಹನ ಜಖಂಗೊಳ್ಳುವುದು, ಕೆಟ್ಟು ನಿಲ್ಲುವುದು, ಬೈಕ್ ಸವಾರರಂತೂ ಗುಂಡಿಗೆ ಬಿದ್ದು ಆಸ್ಪತ್ರೆ ಸೇರುವುದು. ಇತರ ಸವಾರರೊಂದಿಗೆ ತಂಟೆ-ತಕರಾರು ಮಾಡುವುದು ನಿತ್ಯ ನಡೆಯುತ್ತಲೇ ಇರುತ್ತದೆ.
ಅವೈಜ್ಞಾನಿಕವಾದ ಹೆದ್ದಾರಿ ಕಾಮಗಾರಿಯಿಂದಾಗಿ ಮಳೆ ನೀರು ಸೂಕ್ತ ರೀತಿಯಲ್ಲಿ ಚರಂಡಿಗೆ ಹೋಗದೆ ರಸ್ತೆಯಲ್ಲಿಯೇ ಹರಿಯುತ್ತಿರುವ ಕಾರಣ ರಸ್ತೆಯ ಮೇಲೆ ಹಾಕಿದ ಡಾಂಬರಿನ ಸಮೇತದಿಂದಾಗಿ ಹೊಂಡಗಳು ನಿರ್ಮಾಣಗೊಳ್ಳುತ್ತಿದ್ದು ಅಸಮರ್ಪಕ ಕಾಮಗಾರಿ ಪ್ರಯಾಣಿಕ ಜೀವಕ್ಕೆ ಕುತ್ತು ತರುತ್ತಿದೆ ಎಂಬ ಆರೋಪಗಳು ಕೂಡ ಇವೆ.
ಈಗಂತೂ ಮಳೆ ಬರುತ್ತಿರುವುದರಿಂದ ಹೆದ್ದಾರಿಯಲ್ಲೇ ಅಪಾಯಕಾರಿಯಾಗಿ ನೀರು ಹರಿಯುವುದರಿಂದ ರಾತ್ರಿ ಸಮಯದಲ್ಲಂತೂ ಹೊಂಡಗಳನ್ನು ತಪ್ಪಿಸಿ ಸಂಚರಿಸುವುದೇ ದೊಡ್ಡ ಸಾಹಸವಾಗಿದೆ.
ಹಾಳಾದ ರಸ್ತೆಗಳಲ್ಲಿ ವಾಹನ ಚಲಾಯಿಸುವಲ್ಲಿ ಕೊಂಚ ಮೈ ಮರೆತರೂ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಹೀಗಾಗಿ ಈ ರಸ್ತೆಯ ಮೇಲೆ ಹೋಗುವವರು ಮೈತುಂಬಾ ಕಣ್ಣಾಗಿಸಿಕೊಂಡು ಹೋಗಬೇಕಾಗಿದೆ. ಈ ರಸ್ತೆಯ ಆಯ್ದ ಭಾಗದಲ್ಲಿ ರಸ್ತೆ ಸರಿ ಇದ್ದರೂ ಉಳಿದ ಕಡೆ ಎಲ್ಲ ಸಂಪೂರ್ಣ ಹಾಳಾಗಿದೆ. ಸಂಬಂಧಪಟ್ಟವರನ್ನು ಎಚ್ಚರಿಸಬೇಕಾದ ಅಧಿಕಾರಿಗಳು ಜನಪ್ರತಿನಿಧಿಗಳು ದಿವ್ಯ ನಿರ್ಲಕ್ಷ್ಯ ವಹಿಸಿರುವುದರಿಂದ ಸಮಸ್ಯೆ ಹಾಗೆಯೆ ಉಳಿದಿದೆ.
ಮೈಸೂರು ಎಚ್ ಡಿ ಕೋಟೆ ರಸ್ತೆ ಸಂಪೂರ್ಣ ಹಾಳಾಗಿದ್ದು, ಈ ರಸ್ತೆಯಲ್ಲಿ ಓಡಾಡಲು ಕಷ್ಟ ಆಗುತ್ತಿದೆ. ಇತ್ತೀಚೆಗೆ ಮಳೆ ಬಂದಿದ್ದರಿಂದ ರಸ್ತೆಗಳು ಗುಂಡಿಗಳಾಗಿದ್ದು, ಕಣ್ಣಮುಂದೆಯೇ ಅಪಘಾತಗಳು ನಡೆದಿವೆ. ಜನಪ್ರತಿನಿಧಿಗಳು ಪ್ರತಿದಿನ ಇದೇ ರಸ್ತೆಯಲ್ಲಿ ಓಡಾಡಿದರೂ ಇತ್ತ ಗಮನಹರಿಸಿಲ್ಲ. ಸಂಬಂಧಪಟ್ಟವರು ಇತ್ತ ಕಡೆ ಗಮನಹರಿಸಿ ಹದಗೆಟ್ಟಿರುವ ರಸ್ತೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಿ.
–ಸಿಂಹಾದ್ರಿ ಪ್ರಕಾಶ್, ಹಂಪಾಪುರ, ಸ್ಥಳೀಯರು
ಮೈಸೂರು ಮಾನಂದವಾಡಿ ಹೆದ್ದಾರಿ ಹದಗೆಟ್ಟಿರುವುದು ನಮ್ಮ ಗಮನದಲ್ಲಿದೆ.ಅದನ್ನು ಪರಿಶೀಲನೆ ಕೂಡ ಮಾಡಿದ್ದೇವೆ.ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಅತೀ ಶೀಘ್ರದಲ್ಲೇ ಅನುದಾನ ಬಿಡುಗಡೆಯಾಗುತ್ತದೆ. ತಕ್ಷಣ ಹಂತ ಹಂತವಾಗಿ ಕೆಲಸ ಪ್ರಾರಂಭಿಸುತ್ತೇವೆ.
–ಗಣೇಶ್, ಅಧೀಕ್ಷಕ ಎಂಜಿನಿಯರ್ ಲೋಕೊಪಯೋಗಿ ಇಲಾಖೆ ಮೈಸೂರು
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…