ಜನ ಸಂಚಾರಕ್ಕೆ ಅಡಚಣೆ, ನಿರ್ವಹಣೆ ಮರೆತು ಕುಳಿತ ಲೋಕೋಪಯೋಗಿ ಇಲಾಖೆ
ಪ್ರಶಾಂತ್ ಎಸ್ ಮೈಸೂರು.
ಮೈಸೂರು: ಎರಡು ದಶಕದ ಹಿಂದೆ ರೂಪುಗೊಂಡ ಮೈಸೂರು- ಹ್ಯಾಂಡ್ಪೋಸ್ಟ್- ಮಾನಂದವಾಡಿ ರಾಜ್ಯ ಹೆದ್ದಾರಿ ನಿರ್ವಹಣೆ ಕೊರತಯಿಂದ ಹಾಳಾಗಿದ್ದು, ಜನ ತೊಂದರೆ ನಡುವೆ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.
ಮೊಣಕಾಲುದ್ದದ ಗುಂಡಿಗಳು ಬಿದ್ದಿರುವ ಈ ರಸ್ತೆಯಲ್ಲಿ ಸವಾರರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.ಮೈಸೂರಿನಿಂದ ಎಚ್ ಡಿ ಕೋಟೆ ಹಾಗೂ ಸರಗೂರಿಗೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಸಂಪೂರ್ಣ ಹದಗೆಟ್ಟಿರುವ ಕರಿಗಳ ಗೇಟ್, ಕೋಡಹಳ್ಳಿಮರ ಗೇಟ್, ಕೋಳಗಾಲ, ಮಾದಾಪುರ, ಹೈರಿಗೆ, ಎಚ್ ಮಟಕೆರೆ,ಈ ರಸ್ತೆಯಲ್ಲಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಯ ದುಸ್ಥಿತಿ ಹಿನ್ನೆಲೆ ಜನಪ್ರತಿನಿಧಿಗಳಿಗೆ ಮತ್ತು ಸರಕಾರಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಲಘು ವಾಹನ ಚಾಲಕರು ವಾಹನ ಚಲಾಯಿಸುವ ಸಂದರ್ಭದಲ್ಲಿ ಕಾರು, ಬೈಕ್ಗಳು ಗುಂಡಿಗೆ ಬಿದ್ದು ವಾಹನ ಜಖಂಗೊಳ್ಳುವುದು, ಕೆಟ್ಟು ನಿಲ್ಲುವುದು, ಬೈಕ್ ಸವಾರರಂತೂ ಗುಂಡಿಗೆ ಬಿದ್ದು ಆಸ್ಪತ್ರೆ ಸೇರುವುದು. ಇತರ ಸವಾರರೊಂದಿಗೆ ತಂಟೆ-ತಕರಾರು ಮಾಡುವುದು ನಿತ್ಯ ನಡೆಯುತ್ತಲೇ ಇರುತ್ತದೆ.
ಅವೈಜ್ಞಾನಿಕವಾದ ಹೆದ್ದಾರಿ ಕಾಮಗಾರಿಯಿಂದಾಗಿ ಮಳೆ ನೀರು ಸೂಕ್ತ ರೀತಿಯಲ್ಲಿ ಚರಂಡಿಗೆ ಹೋಗದೆ ರಸ್ತೆಯಲ್ಲಿಯೇ ಹರಿಯುತ್ತಿರುವ ಕಾರಣ ರಸ್ತೆಯ ಮೇಲೆ ಹಾಕಿದ ಡಾಂಬರಿನ ಸಮೇತದಿಂದಾಗಿ ಹೊಂಡಗಳು ನಿರ್ಮಾಣಗೊಳ್ಳುತ್ತಿದ್ದು ಅಸಮರ್ಪಕ ಕಾಮಗಾರಿ ಪ್ರಯಾಣಿಕ ಜೀವಕ್ಕೆ ಕುತ್ತು ತರುತ್ತಿದೆ ಎಂಬ ಆರೋಪಗಳು ಕೂಡ ಇವೆ.
ಈಗಂತೂ ಮಳೆ ಬರುತ್ತಿರುವುದರಿಂದ ಹೆದ್ದಾರಿಯಲ್ಲೇ ಅಪಾಯಕಾರಿಯಾಗಿ ನೀರು ಹರಿಯುವುದರಿಂದ ರಾತ್ರಿ ಸಮಯದಲ್ಲಂತೂ ಹೊಂಡಗಳನ್ನು ತಪ್ಪಿಸಿ ಸಂಚರಿಸುವುದೇ ದೊಡ್ಡ ಸಾಹಸವಾಗಿದೆ.
ಹಾಳಾದ ರಸ್ತೆಗಳಲ್ಲಿ ವಾಹನ ಚಲಾಯಿಸುವಲ್ಲಿ ಕೊಂಚ ಮೈ ಮರೆತರೂ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಹೀಗಾಗಿ ಈ ರಸ್ತೆಯ ಮೇಲೆ ಹೋಗುವವರು ಮೈತುಂಬಾ ಕಣ್ಣಾಗಿಸಿಕೊಂಡು ಹೋಗಬೇಕಾಗಿದೆ. ಈ ರಸ್ತೆಯ ಆಯ್ದ ಭಾಗದಲ್ಲಿ ರಸ್ತೆ ಸರಿ ಇದ್ದರೂ ಉಳಿದ ಕಡೆ ಎಲ್ಲ ಸಂಪೂರ್ಣ ಹಾಳಾಗಿದೆ. ಸಂಬಂಧಪಟ್ಟವರನ್ನು ಎಚ್ಚರಿಸಬೇಕಾದ ಅಧಿಕಾರಿಗಳು ಜನಪ್ರತಿನಿಧಿಗಳು ದಿವ್ಯ ನಿರ್ಲಕ್ಷ್ಯ ವಹಿಸಿರುವುದರಿಂದ ಸಮಸ್ಯೆ ಹಾಗೆಯೆ ಉಳಿದಿದೆ.
ಮೈಸೂರು ಎಚ್ ಡಿ ಕೋಟೆ ರಸ್ತೆ ಸಂಪೂರ್ಣ ಹಾಳಾಗಿದ್ದು, ಈ ರಸ್ತೆಯಲ್ಲಿ ಓಡಾಡಲು ಕಷ್ಟ ಆಗುತ್ತಿದೆ. ಇತ್ತೀಚೆಗೆ ಮಳೆ ಬಂದಿದ್ದರಿಂದ ರಸ್ತೆಗಳು ಗುಂಡಿಗಳಾಗಿದ್ದು, ಕಣ್ಣಮುಂದೆಯೇ ಅಪಘಾತಗಳು ನಡೆದಿವೆ. ಜನಪ್ರತಿನಿಧಿಗಳು ಪ್ರತಿದಿನ ಇದೇ ರಸ್ತೆಯಲ್ಲಿ ಓಡಾಡಿದರೂ ಇತ್ತ ಗಮನಹರಿಸಿಲ್ಲ. ಸಂಬಂಧಪಟ್ಟವರು ಇತ್ತ ಕಡೆ ಗಮನಹರಿಸಿ ಹದಗೆಟ್ಟಿರುವ ರಸ್ತೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಿ.
–ಸಿಂಹಾದ್ರಿ ಪ್ರಕಾಶ್, ಹಂಪಾಪುರ, ಸ್ಥಳೀಯರು
ಮೈಸೂರು ಮಾನಂದವಾಡಿ ಹೆದ್ದಾರಿ ಹದಗೆಟ್ಟಿರುವುದು ನಮ್ಮ ಗಮನದಲ್ಲಿದೆ.ಅದನ್ನು ಪರಿಶೀಲನೆ ಕೂಡ ಮಾಡಿದ್ದೇವೆ.ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಅತೀ ಶೀಘ್ರದಲ್ಲೇ ಅನುದಾನ ಬಿಡುಗಡೆಯಾಗುತ್ತದೆ. ತಕ್ಷಣ ಹಂತ ಹಂತವಾಗಿ ಕೆಲಸ ಪ್ರಾರಂಭಿಸುತ್ತೇವೆ.
–ಗಣೇಶ್, ಅಧೀಕ್ಷಕ ಎಂಜಿನಿಯರ್ ಲೋಕೊಪಯೋಗಿ ಇಲಾಖೆ ಮೈಸೂರು
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…